Homeಮುಖಪುಟಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಮೂವರ ಮೇಲಿನ ಸಾಮೂಹಿಕ ಅತ್ಯಾಚಾರ ಶಿಕ್ಷೆ ಎತ್ತಿಹಿಡಿದ ನ್ಯಾಯಾಲಯ

- Advertisement -
- Advertisement -

ತಮ್ಮ ಸ್ನೇಹಿತೆ ಮೇಲೆ ಅತ್ಯಾಚಾರ ಮಾಡಿದ್ದಕ್ಕಾಗಿ ಮೂವರು ಪುರುಷರಿಗೆ ವಿಧಿಸಿದ್ದ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದ್ದು, ಮಹಿಳೆ ಬೇಡ ಎಂದು ಹೇಳಿದಾಗ ಅದು ಬೇಡ’ ಎಂದರ್ಥ (ನೋ ಮೀನ್ಸ್‌ ನೋ), ಆಕೆಯ ಹಿಂದಿನ ಲೈಂಗಿಕ ಚಟುವಟಿಕೆಗಳ ಆಧಾರದ ಮೇಲೆ ಒಪ್ಪಿಗೆಯನ್ನು ಊಹಿಸುವಂತಿಲ್ಲ ಎಂದು ತೀರ್ಪು ನೀಡಿದೆ.

“ಬೇಡ ಎಂದರೆ ಬೇಡ” ಎಂದು ನ್ಯಾಯಮೂರ್ತಿಗಳಾದ ನಿತಿನ್ ಸೂರ್ಯವಂಶಿ ಮತ್ತು ಎಂ.ಡಬ್ಲ್ಯೂ. ಚಂದ್ವಾನಿ ಅವರ ಪೀಠವು ಮೇ 6 ರ ತೀರ್ಪಿನಲ್ಲಿ, ಸಂತ್ರಸ್ತೆಯ ನೈತಿಕತೆಯನ್ನು ಪ್ರಶ್ನಿಸಲು ಅಪರಾಧಿಗಳು ಮಾಡಿದ ಪ್ರಯತ್ನವನ್ನು ಸ್ವೀಕರಿಸಲು ನಿರಾಕರಿಸಿದೆ.

ಮಹಿಳೆಯ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಭೋಗ ನಡೆಸಿದಾಗ ಅದು ಆಕೆಯ ದೇಹ, ಮನಸ್ಸು ಮತ್ತು ಗೌಪ್ಯತೆಯ ಮೇಲಿನ ಹಲ್ಲೆಯಾಗಿದೆ ಎಂದ ನ್ಯಾಯಾಲಯವು, ಅತ್ಯಾಚಾರವು ಸಮಾಜದಲ್ಲಿ ಖಂಡನೀಯ ಅಪರಾಧ ಎಂದು ಹೇಳಿದೆ.

“ಮಹಿಳೆ ಬೇಡ ಎಂದರೆ ಬೇಡವೇಬೇಡ ಎಂದರ್ಥ; ಇದರಲ್ಲಿ ಯಾವುದೇ ಅಸ್ಪಷ್ಟತೆ ಇಲ್ಲ. ಮುಖ್ಯವಾಗಿ, ಮಹಿಳೆಯ ಹಿಂದಿನ ಲೈಂಗಿಕ ಚಟುವಟಿಕೆಗಳ ಆಧಾರದ ಮೇಲೆ ಆಕೆಯ ಒಪ್ಪಿಗೆಯ ಊಹೆ ಇರುವಂತಿಲ್ಲ” ಎಂದು ಹೈಕೋರ್ಟ್ ಹೇಳಿದೆ.

ಈ ತೀರ್ಪಿನ ಮೂಲಕ, ಮೂವರು ವ್ಯಕ್ತಿಗಳ ಶಿಕ್ಷೆಯನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿತು. ಆದರೆ, ಅವರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಿಂದ 20 ವರ್ಷಗಳ ಜೈಲು ಶಿಕ್ಷೆಗೆ ಇಳಿಸಿತು.

ತಮ್ಮ ಮೇಲ್ಮನವಿಯಲ್ಲಿ, ಮಹಿಳೆ ಆರಂಭದಲ್ಲಿ ತಮ್ಮಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದರು. ಆದರೆ, ನಂತರ ಇನ್ನೊಬ್ಬ ಪುರುಷನೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದರು ಎಂದು ಮೂವರು ಹೇಳಿಕೊಂಡಿದ್ದರು.

ನವೆಂಬರ್ 2014 ರಲ್ಲಿ, ಮೂವರು ಸಂತ್ರಸ್ತೆ ಮನೆಗೆ ನುಗ್ಗಿ, ಆಕೆಯ ಲಿವ್-ಇನ್ ಸಂಗಾತಿಯ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಹತ್ತಿರದ ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದರು.

“ಒಬ್ಬ ಮಹಿಳೆ ಗಂಡನಿಂದ ಬೇರ್ಪಟ್ಟ ಹೆಂಡತಿಯಾಗಿದ್ದರೂ, ಆಕೆ ತನ್ನ ಪತಿಯಿಂದ ವಿಚ್ಛೇದನ ಪಡೆಯದೆ ಇನ್ನೊಬ್ಬ ಪುರುಷನೊಂದಿಗೆ ವಾಸಿಸುತ್ತಿದ್ದರೂ ಸಹ, ವ್ಯಕ್ತಿಯೊಬ್ಬ ಮಹಿಳೆಯ ಒಪ್ಪಿಗೆಯಿಲ್ಲದೆ ಸಂಭೋಗ ನಡೆಸಲು ಒತ್ತಾಯಿಸಲು ಸಾಧ್ಯವಿಲ್ಲ” ಎಂದು ಪೀಠವು ತನ್ನ ತೀರ್ಪಿನಲ್ಲಿ ಹೇಳಿದೆ.

ಸಂತ್ರಸ್ತೆ ಮತ್ತು ಅಪರಾಧಿಗಳಲ್ಲಿ ಓರ್ವ ಹಿಂದೆ ಸಂಬಂಧದಲ್ಲಿದ್ದರೂ, ಆಕೆಯ ಒಪ್ಪಿಗೆಯಿಲ್ಲದೆ ಯಾವುದೇ ಲೈಂಗಿಕ ಕ್ರಿಯೆಯು ಆಕೆ ಅವನೊಂದಿಗೆ ಹಾಗೂ ಇತರ ಆರೋಪಿಯೊಂದಿಗೆ ಸಂಭೋಗ ಹೊಂದಲು ಸಿದ್ಧರಿಲ್ಲದಿದ್ದರೆ ಅದು ಅತ್ಯಾಚಾರಕ್ಕೆ ಸಮನಾಗಿರುತ್ತದೆ ಎಂದು ಪೀಠ ಹೇಳಿದೆ.

“ಒಂದು ನಿರ್ದಿಷ್ಟ ಸಂದರ್ಭದಲ್ಲಿ ಪುರುಷನೊಂದಿಗೆ ಲೈಂಗಿಕ ಚಟುವಟಿಕೆಗಳಿಗೆ ಸಮ್ಮತಿಸುವ ಮಹಿಳೆಯು ಇತರ ಎಲ್ಲ ಸಂದರ್ಭಗಳಲ್ಲಿ ಅದೇ ಪುರುಷನೊಂದಿಗೆ ಲೈಂಗಿಕ ಚಟುವಟಿಕೆಗೆ ಸಮ್ಮತಿ ನೀಡುವುದಿಲ್ಲ (ವಾಸ್ತವವಾಗಿಯೇ). ಮಹಿಳೆಯ ಪಾತ್ರ ಅಥವಾ ಆಕೆಯ ನೈತಿಕತೆಯು ಹಿಂದೆ ಹೊಂದಿದ್ದ ಲೈಂಗಿಕ ಪಾಲುದಾರರ ಸಂಖ್ಯೆಗೆ ಸಂಬಂಧಿಸಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ದೌರ್ಜನ್ಯವು ಕಾನೂನನ್ನು ಕುಗ್ಗಿಸುತ್ತದೆ, ಕಾನೂನುಬಾಹಿರವಾಗಿ ಮಹಿಳೆಯ ಗೌಪ್ಯತೆಯನ್ನು ಅತಿಕ್ರಮಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

“ಅತ್ಯಾಚಾರವನ್ನು ಲೈಂಗಿಕ ಅಪರಾಧವೆಂದು ಮಾತ್ರ ಪರಿಗಣಿಸಲಾಗುವುದಿಲ್ಲ. ಆದರೆ, ಅದನ್ನು ಆಕ್ರಮಣಶೀಲತೆಯನ್ನು ಒಳಗೊಂಡಿರುವ ಅಪರಾಧವೆಂದು ನೋಡಬೇಕು. ಇದು ಅವಳ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ. ಅತ್ಯಾಚಾರವು ಸಮಾಜದಲ್ಲಿ ಅತ್ಯಂತ ನೈತಿಕವಾಗಿ ಮತ್ತು ದೈಹಿಕವಾಗಿ ಖಂಡನೀಯ ಅಪರಾಧವಾಗಿದೆ. ಏಕೆಂದರೆ, ಇದು ಸಂತ್ರಸ್ತೆ ದೇಹ, ಮನಸ್ಸು ಮತ್ತು ಗೌಪ್ಯತೆಯ ಮೇಲಿನ ಆಕ್ರಮಣವಾಗಿದೆ” ಎಂದು ಹೈಕೋರ್ಟ್ ಹೇಳಿದೆ.

ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...