Homeಮುಖಪುಟಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಮೂವರ ಮೇಲಿನ ಸಾಮೂಹಿಕ ಅತ್ಯಾಚಾರ ಶಿಕ್ಷೆ ಎತ್ತಿಹಿಡಿದ ನ್ಯಾಯಾಲಯ

- Advertisement -
- Advertisement -

ತಮ್ಮ ಸ್ನೇಹಿತೆ ಮೇಲೆ ಅತ್ಯಾಚಾರ ಮಾಡಿದ್ದಕ್ಕಾಗಿ ಮೂವರು ಪುರುಷರಿಗೆ ವಿಧಿಸಿದ್ದ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದ್ದು, ಮಹಿಳೆ ಬೇಡ ಎಂದು ಹೇಳಿದಾಗ ಅದು ಬೇಡ’ ಎಂದರ್ಥ (ನೋ ಮೀನ್ಸ್‌ ನೋ), ಆಕೆಯ ಹಿಂದಿನ ಲೈಂಗಿಕ ಚಟುವಟಿಕೆಗಳ ಆಧಾರದ ಮೇಲೆ ಒಪ್ಪಿಗೆಯನ್ನು ಊಹಿಸುವಂತಿಲ್ಲ ಎಂದು ತೀರ್ಪು ನೀಡಿದೆ.

“ಬೇಡ ಎಂದರೆ ಬೇಡ” ಎಂದು ನ್ಯಾಯಮೂರ್ತಿಗಳಾದ ನಿತಿನ್ ಸೂರ್ಯವಂಶಿ ಮತ್ತು ಎಂ.ಡಬ್ಲ್ಯೂ. ಚಂದ್ವಾನಿ ಅವರ ಪೀಠವು ಮೇ 6 ರ ತೀರ್ಪಿನಲ್ಲಿ, ಸಂತ್ರಸ್ತೆಯ ನೈತಿಕತೆಯನ್ನು ಪ್ರಶ್ನಿಸಲು ಅಪರಾಧಿಗಳು ಮಾಡಿದ ಪ್ರಯತ್ನವನ್ನು ಸ್ವೀಕರಿಸಲು ನಿರಾಕರಿಸಿದೆ.

ಮಹಿಳೆಯ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಭೋಗ ನಡೆಸಿದಾಗ ಅದು ಆಕೆಯ ದೇಹ, ಮನಸ್ಸು ಮತ್ತು ಗೌಪ್ಯತೆಯ ಮೇಲಿನ ಹಲ್ಲೆಯಾಗಿದೆ ಎಂದ ನ್ಯಾಯಾಲಯವು, ಅತ್ಯಾಚಾರವು ಸಮಾಜದಲ್ಲಿ ಖಂಡನೀಯ ಅಪರಾಧ ಎಂದು ಹೇಳಿದೆ.

“ಮಹಿಳೆ ಬೇಡ ಎಂದರೆ ಬೇಡವೇಬೇಡ ಎಂದರ್ಥ; ಇದರಲ್ಲಿ ಯಾವುದೇ ಅಸ್ಪಷ್ಟತೆ ಇಲ್ಲ. ಮುಖ್ಯವಾಗಿ, ಮಹಿಳೆಯ ಹಿಂದಿನ ಲೈಂಗಿಕ ಚಟುವಟಿಕೆಗಳ ಆಧಾರದ ಮೇಲೆ ಆಕೆಯ ಒಪ್ಪಿಗೆಯ ಊಹೆ ಇರುವಂತಿಲ್ಲ” ಎಂದು ಹೈಕೋರ್ಟ್ ಹೇಳಿದೆ.

ಈ ತೀರ್ಪಿನ ಮೂಲಕ, ಮೂವರು ವ್ಯಕ್ತಿಗಳ ಶಿಕ್ಷೆಯನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿತು. ಆದರೆ, ಅವರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಿಂದ 20 ವರ್ಷಗಳ ಜೈಲು ಶಿಕ್ಷೆಗೆ ಇಳಿಸಿತು.

ತಮ್ಮ ಮೇಲ್ಮನವಿಯಲ್ಲಿ, ಮಹಿಳೆ ಆರಂಭದಲ್ಲಿ ತಮ್ಮಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದರು. ಆದರೆ, ನಂತರ ಇನ್ನೊಬ್ಬ ಪುರುಷನೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದರು ಎಂದು ಮೂವರು ಹೇಳಿಕೊಂಡಿದ್ದರು.

ನವೆಂಬರ್ 2014 ರಲ್ಲಿ, ಮೂವರು ಸಂತ್ರಸ್ತೆ ಮನೆಗೆ ನುಗ್ಗಿ, ಆಕೆಯ ಲಿವ್-ಇನ್ ಸಂಗಾತಿಯ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಹತ್ತಿರದ ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದರು.

“ಒಬ್ಬ ಮಹಿಳೆ ಗಂಡನಿಂದ ಬೇರ್ಪಟ್ಟ ಹೆಂಡತಿಯಾಗಿದ್ದರೂ, ಆಕೆ ತನ್ನ ಪತಿಯಿಂದ ವಿಚ್ಛೇದನ ಪಡೆಯದೆ ಇನ್ನೊಬ್ಬ ಪುರುಷನೊಂದಿಗೆ ವಾಸಿಸುತ್ತಿದ್ದರೂ ಸಹ, ವ್ಯಕ್ತಿಯೊಬ್ಬ ಮಹಿಳೆಯ ಒಪ್ಪಿಗೆಯಿಲ್ಲದೆ ಸಂಭೋಗ ನಡೆಸಲು ಒತ್ತಾಯಿಸಲು ಸಾಧ್ಯವಿಲ್ಲ” ಎಂದು ಪೀಠವು ತನ್ನ ತೀರ್ಪಿನಲ್ಲಿ ಹೇಳಿದೆ.

ಸಂತ್ರಸ್ತೆ ಮತ್ತು ಅಪರಾಧಿಗಳಲ್ಲಿ ಓರ್ವ ಹಿಂದೆ ಸಂಬಂಧದಲ್ಲಿದ್ದರೂ, ಆಕೆಯ ಒಪ್ಪಿಗೆಯಿಲ್ಲದೆ ಯಾವುದೇ ಲೈಂಗಿಕ ಕ್ರಿಯೆಯು ಆಕೆ ಅವನೊಂದಿಗೆ ಹಾಗೂ ಇತರ ಆರೋಪಿಯೊಂದಿಗೆ ಸಂಭೋಗ ಹೊಂದಲು ಸಿದ್ಧರಿಲ್ಲದಿದ್ದರೆ ಅದು ಅತ್ಯಾಚಾರಕ್ಕೆ ಸಮನಾಗಿರುತ್ತದೆ ಎಂದು ಪೀಠ ಹೇಳಿದೆ.

“ಒಂದು ನಿರ್ದಿಷ್ಟ ಸಂದರ್ಭದಲ್ಲಿ ಪುರುಷನೊಂದಿಗೆ ಲೈಂಗಿಕ ಚಟುವಟಿಕೆಗಳಿಗೆ ಸಮ್ಮತಿಸುವ ಮಹಿಳೆಯು ಇತರ ಎಲ್ಲ ಸಂದರ್ಭಗಳಲ್ಲಿ ಅದೇ ಪುರುಷನೊಂದಿಗೆ ಲೈಂಗಿಕ ಚಟುವಟಿಕೆಗೆ ಸಮ್ಮತಿ ನೀಡುವುದಿಲ್ಲ (ವಾಸ್ತವವಾಗಿಯೇ). ಮಹಿಳೆಯ ಪಾತ್ರ ಅಥವಾ ಆಕೆಯ ನೈತಿಕತೆಯು ಹಿಂದೆ ಹೊಂದಿದ್ದ ಲೈಂಗಿಕ ಪಾಲುದಾರರ ಸಂಖ್ಯೆಗೆ ಸಂಬಂಧಿಸಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ದೌರ್ಜನ್ಯವು ಕಾನೂನನ್ನು ಕುಗ್ಗಿಸುತ್ತದೆ, ಕಾನೂನುಬಾಹಿರವಾಗಿ ಮಹಿಳೆಯ ಗೌಪ್ಯತೆಯನ್ನು ಅತಿಕ್ರಮಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

“ಅತ್ಯಾಚಾರವನ್ನು ಲೈಂಗಿಕ ಅಪರಾಧವೆಂದು ಮಾತ್ರ ಪರಿಗಣಿಸಲಾಗುವುದಿಲ್ಲ. ಆದರೆ, ಅದನ್ನು ಆಕ್ರಮಣಶೀಲತೆಯನ್ನು ಒಳಗೊಂಡಿರುವ ಅಪರಾಧವೆಂದು ನೋಡಬೇಕು. ಇದು ಅವಳ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ. ಅತ್ಯಾಚಾರವು ಸಮಾಜದಲ್ಲಿ ಅತ್ಯಂತ ನೈತಿಕವಾಗಿ ಮತ್ತು ದೈಹಿಕವಾಗಿ ಖಂಡನೀಯ ಅಪರಾಧವಾಗಿದೆ. ಏಕೆಂದರೆ, ಇದು ಸಂತ್ರಸ್ತೆ ದೇಹ, ಮನಸ್ಸು ಮತ್ತು ಗೌಪ್ಯತೆಯ ಮೇಲಿನ ಆಕ್ರಮಣವಾಗಿದೆ” ಎಂದು ಹೈಕೋರ್ಟ್ ಹೇಳಿದೆ.

ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...