Homeಮುಖಪುಟಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಮೂವರ ಮೇಲಿನ ಸಾಮೂಹಿಕ ಅತ್ಯಾಚಾರ ಶಿಕ್ಷೆ ಎತ್ತಿಹಿಡಿದ ನ್ಯಾಯಾಲಯ

- Advertisement -
- Advertisement -

ತಮ್ಮ ಸ್ನೇಹಿತೆ ಮೇಲೆ ಅತ್ಯಾಚಾರ ಮಾಡಿದ್ದಕ್ಕಾಗಿ ಮೂವರು ಪುರುಷರಿಗೆ ವಿಧಿಸಿದ್ದ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದ್ದು, ಮಹಿಳೆ ಬೇಡ ಎಂದು ಹೇಳಿದಾಗ ಅದು ಬೇಡ’ ಎಂದರ್ಥ (ನೋ ಮೀನ್ಸ್‌ ನೋ), ಆಕೆಯ ಹಿಂದಿನ ಲೈಂಗಿಕ ಚಟುವಟಿಕೆಗಳ ಆಧಾರದ ಮೇಲೆ ಒಪ್ಪಿಗೆಯನ್ನು ಊಹಿಸುವಂತಿಲ್ಲ ಎಂದು ತೀರ್ಪು ನೀಡಿದೆ.

“ಬೇಡ ಎಂದರೆ ಬೇಡ” ಎಂದು ನ್ಯಾಯಮೂರ್ತಿಗಳಾದ ನಿತಿನ್ ಸೂರ್ಯವಂಶಿ ಮತ್ತು ಎಂ.ಡಬ್ಲ್ಯೂ. ಚಂದ್ವಾನಿ ಅವರ ಪೀಠವು ಮೇ 6 ರ ತೀರ್ಪಿನಲ್ಲಿ, ಸಂತ್ರಸ್ತೆಯ ನೈತಿಕತೆಯನ್ನು ಪ್ರಶ್ನಿಸಲು ಅಪರಾಧಿಗಳು ಮಾಡಿದ ಪ್ರಯತ್ನವನ್ನು ಸ್ವೀಕರಿಸಲು ನಿರಾಕರಿಸಿದೆ.

ಮಹಿಳೆಯ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಭೋಗ ನಡೆಸಿದಾಗ ಅದು ಆಕೆಯ ದೇಹ, ಮನಸ್ಸು ಮತ್ತು ಗೌಪ್ಯತೆಯ ಮೇಲಿನ ಹಲ್ಲೆಯಾಗಿದೆ ಎಂದ ನ್ಯಾಯಾಲಯವು, ಅತ್ಯಾಚಾರವು ಸಮಾಜದಲ್ಲಿ ಖಂಡನೀಯ ಅಪರಾಧ ಎಂದು ಹೇಳಿದೆ.

“ಮಹಿಳೆ ಬೇಡ ಎಂದರೆ ಬೇಡವೇಬೇಡ ಎಂದರ್ಥ; ಇದರಲ್ಲಿ ಯಾವುದೇ ಅಸ್ಪಷ್ಟತೆ ಇಲ್ಲ. ಮುಖ್ಯವಾಗಿ, ಮಹಿಳೆಯ ಹಿಂದಿನ ಲೈಂಗಿಕ ಚಟುವಟಿಕೆಗಳ ಆಧಾರದ ಮೇಲೆ ಆಕೆಯ ಒಪ್ಪಿಗೆಯ ಊಹೆ ಇರುವಂತಿಲ್ಲ” ಎಂದು ಹೈಕೋರ್ಟ್ ಹೇಳಿದೆ.

ಈ ತೀರ್ಪಿನ ಮೂಲಕ, ಮೂವರು ವ್ಯಕ್ತಿಗಳ ಶಿಕ್ಷೆಯನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿತು. ಆದರೆ, ಅವರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಿಂದ 20 ವರ್ಷಗಳ ಜೈಲು ಶಿಕ್ಷೆಗೆ ಇಳಿಸಿತು.

ತಮ್ಮ ಮೇಲ್ಮನವಿಯಲ್ಲಿ, ಮಹಿಳೆ ಆರಂಭದಲ್ಲಿ ತಮ್ಮಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದರು. ಆದರೆ, ನಂತರ ಇನ್ನೊಬ್ಬ ಪುರುಷನೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದರು ಎಂದು ಮೂವರು ಹೇಳಿಕೊಂಡಿದ್ದರು.

ನವೆಂಬರ್ 2014 ರಲ್ಲಿ, ಮೂವರು ಸಂತ್ರಸ್ತೆ ಮನೆಗೆ ನುಗ್ಗಿ, ಆಕೆಯ ಲಿವ್-ಇನ್ ಸಂಗಾತಿಯ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಹತ್ತಿರದ ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದರು.

“ಒಬ್ಬ ಮಹಿಳೆ ಗಂಡನಿಂದ ಬೇರ್ಪಟ್ಟ ಹೆಂಡತಿಯಾಗಿದ್ದರೂ, ಆಕೆ ತನ್ನ ಪತಿಯಿಂದ ವಿಚ್ಛೇದನ ಪಡೆಯದೆ ಇನ್ನೊಬ್ಬ ಪುರುಷನೊಂದಿಗೆ ವಾಸಿಸುತ್ತಿದ್ದರೂ ಸಹ, ವ್ಯಕ್ತಿಯೊಬ್ಬ ಮಹಿಳೆಯ ಒಪ್ಪಿಗೆಯಿಲ್ಲದೆ ಸಂಭೋಗ ನಡೆಸಲು ಒತ್ತಾಯಿಸಲು ಸಾಧ್ಯವಿಲ್ಲ” ಎಂದು ಪೀಠವು ತನ್ನ ತೀರ್ಪಿನಲ್ಲಿ ಹೇಳಿದೆ.

ಸಂತ್ರಸ್ತೆ ಮತ್ತು ಅಪರಾಧಿಗಳಲ್ಲಿ ಓರ್ವ ಹಿಂದೆ ಸಂಬಂಧದಲ್ಲಿದ್ದರೂ, ಆಕೆಯ ಒಪ್ಪಿಗೆಯಿಲ್ಲದೆ ಯಾವುದೇ ಲೈಂಗಿಕ ಕ್ರಿಯೆಯು ಆಕೆ ಅವನೊಂದಿಗೆ ಹಾಗೂ ಇತರ ಆರೋಪಿಯೊಂದಿಗೆ ಸಂಭೋಗ ಹೊಂದಲು ಸಿದ್ಧರಿಲ್ಲದಿದ್ದರೆ ಅದು ಅತ್ಯಾಚಾರಕ್ಕೆ ಸಮನಾಗಿರುತ್ತದೆ ಎಂದು ಪೀಠ ಹೇಳಿದೆ.

“ಒಂದು ನಿರ್ದಿಷ್ಟ ಸಂದರ್ಭದಲ್ಲಿ ಪುರುಷನೊಂದಿಗೆ ಲೈಂಗಿಕ ಚಟುವಟಿಕೆಗಳಿಗೆ ಸಮ್ಮತಿಸುವ ಮಹಿಳೆಯು ಇತರ ಎಲ್ಲ ಸಂದರ್ಭಗಳಲ್ಲಿ ಅದೇ ಪುರುಷನೊಂದಿಗೆ ಲೈಂಗಿಕ ಚಟುವಟಿಕೆಗೆ ಸಮ್ಮತಿ ನೀಡುವುದಿಲ್ಲ (ವಾಸ್ತವವಾಗಿಯೇ). ಮಹಿಳೆಯ ಪಾತ್ರ ಅಥವಾ ಆಕೆಯ ನೈತಿಕತೆಯು ಹಿಂದೆ ಹೊಂದಿದ್ದ ಲೈಂಗಿಕ ಪಾಲುದಾರರ ಸಂಖ್ಯೆಗೆ ಸಂಬಂಧಿಸಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ದೌರ್ಜನ್ಯವು ಕಾನೂನನ್ನು ಕುಗ್ಗಿಸುತ್ತದೆ, ಕಾನೂನುಬಾಹಿರವಾಗಿ ಮಹಿಳೆಯ ಗೌಪ್ಯತೆಯನ್ನು ಅತಿಕ್ರಮಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

“ಅತ್ಯಾಚಾರವನ್ನು ಲೈಂಗಿಕ ಅಪರಾಧವೆಂದು ಮಾತ್ರ ಪರಿಗಣಿಸಲಾಗುವುದಿಲ್ಲ. ಆದರೆ, ಅದನ್ನು ಆಕ್ರಮಣಶೀಲತೆಯನ್ನು ಒಳಗೊಂಡಿರುವ ಅಪರಾಧವೆಂದು ನೋಡಬೇಕು. ಇದು ಅವಳ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ. ಅತ್ಯಾಚಾರವು ಸಮಾಜದಲ್ಲಿ ಅತ್ಯಂತ ನೈತಿಕವಾಗಿ ಮತ್ತು ದೈಹಿಕವಾಗಿ ಖಂಡನೀಯ ಅಪರಾಧವಾಗಿದೆ. ಏಕೆಂದರೆ, ಇದು ಸಂತ್ರಸ್ತೆ ದೇಹ, ಮನಸ್ಸು ಮತ್ತು ಗೌಪ್ಯತೆಯ ಮೇಲಿನ ಆಕ್ರಮಣವಾಗಿದೆ” ಎಂದು ಹೈಕೋರ್ಟ್ ಹೇಳಿದೆ.

ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...