Homeಮುಖಪುಟಯುವತಿ ಆತ್ಮಹತ್ಯೆ ಪ್ರಕರಣ: ಮಹಾರಾಷ್ಟ್ರ ಅರಣ್ಯ ಸಚಿವನ ರಾಜೀನಾಮೆ

ಯುವತಿ ಆತ್ಮಹತ್ಯೆ ಪ್ರಕರಣ: ಮಹಾರಾಷ್ಟ್ರ ಅರಣ್ಯ ಸಚಿವನ ರಾಜೀನಾಮೆ

'ಕೊಳಕು ರಾಜಕೀಯ'ದಿಂದಾಗಿ ತಾವು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂದು ಅರಣ್ಯ ಸಚಿವ ಸಂಜಯ್ ರಾಥೋಡ್ ಹೇಳಿದ್ದಾರೆ.

- Advertisement -
- Advertisement -

ಪುಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ 23 ವರ್ಷದ ಯುವತಿ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಅರಣ್ಯ ಸಚಿವ ಸಂಜಯ್ ರಾಥೋಡ್‌ಗೂ ಈ ಪ್ರಕರಣಕ್ಕೂ ಸಂಬಂಧವಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದರಿಂದ, ಸಚಿವ ಸಂಜಯ್ ರಾಥೋಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

“ಕೊಳಕು ರಾಜಕೀಯ” ದಿಂದಾಗಿ ತಾವು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂದು ಸಚಿವ ಸಂಜಯ್ ರಾಥೋಡ್ ಹೇಳಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪೂಜಾ ಚೌವಾಣ್ ಎಂಬ 23 ವರ್ಷದ ಯುವತಿ ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್ ಕಲಿಯಲು ಪುಣೆಯಲ್ಲಿ ತನ್ನ ಸಹೋದರ ಮತ್ತು ಸ್ನೇಹಿತರೊಂದಿಗೆ ವಾಸಿಸುತ್ತಿದ್ದಳು. ಫೆಬ್ರವರಿ 8 ರಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಮೈತ್ರಿ ಸೇರಲಿರುವ BPF ಪಕ್ಷ

ಯುವತಿಯ ಸಾವಿನ ಎರಡು ದಿನಗಳ ನಂತರ, ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಕ್ಲಿಪ್ ಬಿಡುಗಡೆಯಾಗಿದ್ದು, ಇದರಲ್ಲಿ ಇಬ್ಬರು ವ್ಯಕ್ತಿಗಳು ಯುವತಿಯ ಸಾವಿನ ಬಗ್ಗೆ ಮಾತನಾಡಿದ್ದಾರೆ. ಆಡಿಯೋ ಕ್ಲಿಪ್‌ನಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು ಸಂಜಯ್ ರಾಥೋಡ್ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪವನ್ನು ಸಂಜಯ್ ರಾಥೋಡ್ ನಿರಾಕರಿಸಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ’ಆಕೆ ಆತ್ಮಹತ್ಯೆ ಮಾಡಿಕೊಂಡಂತೆ ಕಾಣಿಸಿಕೊಂಡರೂ, ಅದನ್ನು ಕ್ರಿಮಿನಲ್ ಪ್ರಕರಣ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಕಳೆದ ವಾರ ತಿಳಿಸಿದ್ದಾರೆ.

ಸಚಿವ ಸಂಜಯ್ ರಾಥೋಡ್‌ಗೂ ಮೃತ ಯುವತಿಯ ಸಾವಿಗೂ ಸಂಬಂಧವಿದೆ ಎಂದು ಬಿಜೆಪಿ ಆರೋಪಿಸಿ, ಅವರ ಬಂಧನಕ್ಕೆ ಪಕ್ಷ ಒತ್ತಾಯಿಸುತ್ತಿತ್ತು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಾವಿನ ಬಗ್ಗೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

“ಪೂಜಾ ಚೌವಾಣ್ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರ ಆರೋಪ ಹೊಂದಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಬೀಡ್ ಜಿಲ್ಲೆಯಲ್ಲಿ ಸಂಜಯ್ ರಾಥೋಡ್ ಅವರ ಪ್ರತಿಮೆಯನ್ನು ಸುಟ್ಟು ಬಿಜೆಪಿ ಪ್ರತಿಭಟನೆ ನಡೆಸಿತ್ತು” ಎಂದು ಬಿಜೆಪಿ ಮಹಾರಾಷ್ಟ್ರ ಕಳೆದ ವಾರ ಟ್ವೀಟ್ ಮಾಡಿದೆ.

“ಸಂಜಯ್ ರಾಥೋಡ್ ವಿರುದ್ಧ ಸಾಕಷ್ಟು ಪುರಾವೆಗಳಿವೆ ಆದರೆ ಏನೂ ಆಗುತ್ತಿಲ್ಲ. ಮಾಧ್ಯಮ ವರದಿಗಳು ಹೊರಬರದಿದ್ದರೆ ಏನೂ ಆಗುತ್ತಿರಲಿಲ್ಲ. ರಾಜ್ಯದ ಪೊಲೀಸರು ಒತ್ತಡದಲ್ಲಿದ್ದಾರೆ. ಮೊದಲು, ಪೋಲಿಸ್ ತನಿಖೆಯ ಬಗ್ಗೆ ತನಿಖೆ ನಡೆಸಬೇಕಾಗಿದೆ” ಎಂದು ಫಡ್ನವಿಸ್ ಕಳೆದ ವಾರ ಹೇಳಿದ್ದರು.

ಕಳೆದ ವಾರ ಅರಣ್ಯ ಸಚಿವ ಸಂಜಯ್ ರಾಥೋಡ್ ವಿರುದ್ಧ ಬಿಜೆಪಿಯ ಮಹಿಳಾ ಘಟಕ ಪ್ರತಿಭಟನೆ ನಡೆಸಿತು. ಆದರೆ ಯುವತಿಯ ಸಾವಿನ ಬಗ್ಗೆ ಆಕೆಯ ಕುಟುಂಬ ದೂರು ನೀಡಿಲ್ಲ.

ಇದನ್ನೂ ಓದಿ: ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...