Homeಮುಖಪುಟಮಣಿಪುರ ಹಿಂಸಾಚಾರ: ತನಿಖೆಗೆ 53 ಅಧಿಕಾರಿಗಳ ತಂಡ ನೇಮಿಸಿದ ಸಿಬಿಐ

ಮಣಿಪುರ ಹಿಂಸಾಚಾರ: ತನಿಖೆಗೆ 53 ಅಧಿಕಾರಿಗಳ ತಂಡ ನೇಮಿಸಿದ ಸಿಬಿಐ

- Advertisement -
- Advertisement -

ಮಣಿಪುರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಸಿಬಿಐ ಬುಧವಾರ 29 ಮಹಿಳೆಯರು ಸೇರಿದಂತೆ 53 ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂವರು ಡಿಐಜಿಗಳಾದ ಲವ್ಲಿ ಕಟಿಯಾರ್, ನಿರ್ಮಲಾ ದೇವಿ ಮತ್ತು ಮೋಹಿತ್ ಗುಪ್ತಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ರಾಜ್‌ವೀರ್ ಅವರನ್ನು ಒಳಗೊಂಡ ತಂಡವು ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರಿಗೆ ವರದಿ ನೀಡಲಿದ್ದು, ಅವರು ಒಟ್ಟಾರೆ ತನಿಖೆಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ.

ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಸಂಖ್ಯೆಯ ಮಹಿಳಾ ಅಧಿಕಾರಿಗಳನ್ನು ಏಕಕಾಲದಲ್ಲಿ ಪ್ರಕರಣದ ತನಿಖೆಗೆ ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

 ಸಿಬಿಐ ತನಿಖೆ ನಡೆಸುತ್ತಿರುವ ಈ ಹಲವು ಪ್ರಕರಣಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ತನಿಖೆಗೆ ಒಳಪಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ, ಇದನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿ ತನಿಖೆ ಮಾಡಲಿದ್ದಾರೆ.

ಇಬ್ಬರು ಮಹಿಳಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಆರು ಮಹಿಳಾ ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ  53 ಸದಸ್ಯರ ತಂಡವನ್ನು ಪ್ರಕರಣದ ತನಿಖೆಗೆ ನಿಯೋಜಿಸಲಾಗಿದೆ.

ಇನ್ನು 16  ಇನ್ಸ್‌ಪೆಕ್ಟರ್‌ಗಳು ಮತ್ತು 10 ಸಬ್‌ ಇನ್‌ಸ್ಪೆಕ್ಟರ್‌ಗಳು ಸಹ ತಂಡದ ಭಾಗವಾಗಲಿದ್ದಾರೆ.ಸಾಮಾನ್ಯವಾಗಿ ಇಷ್ಟು ದೊಡ್ಡ ಪ್ರಕರಣಗಳನ್ನು ಸಿಬಿಐಗೆ ಹಸ್ತಾಂತರಿಸಿದಾಗ,  ಅಧಿಕಾರಿಗಳನ್ನು ನಿಯೋಜಿಸಲು  ಸಿಬಿಐ ಸಂಸ್ಥೆಯು ಇತರ ರಾಜ್ಯದ ಮೇಲೆ ಕೂಡ ಅವಲಂಬಿತವಾಗಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದ ಪ್ರಕರಣದಲ್ಲಿ, ತನಿಖೆಯಲ್ಲಿ ಪಕ್ಷಪಾತದ ಆರೋಪಗಳನ್ನು ತಪ್ಪಿಸಲು ಸ್ಥಳೀಯ ಅಧಿಕಾರಿಗಳ ಸಹಭಾಗಿತ್ವ  ಕಡಿಮೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಈಗಾಗಲೇ ಎಂಟು ಪ್ರಕರಣಗಳನ್ನು ದಾಖಲಿಸಿದೆ, ಮೇ 4 ರಂದು ಮಹಿಳೆಯ ಬೆತ್ತಲೆ ಮಾಡಿದ ಪ್ರಕರಣ ಕೂಡ ಇದರಲ್ಲಿ ಸೇರಿದೆ.ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಇನ್ನೂ ಒಂಬತ್ತು ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐ ಸಿದ್ಧವಾಗಿದೆ.  ಈ ಮೂಲಕ ಒಟ್ಟು 17 ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ದ.ಕನ್ನಡ: ಜಾನುವಾರು ಸಾಗಾಟ ಮಾಡುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ, ಕೊಲೆಗೆ ಯತ್ನಿಸಿದ ಸಂಘಪರಿವಾರದ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....