Homeಮುಖಪುಟಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

“ಎಲ್ಲಾ ವಿಡಿಯೊಗಳು ಮತ್ತು ಆಡಿಯೊಗಳನ್ನು ಪೊಲೀಸರಿಗೆ ಒಪ್ಪಿಸುತ್ತೇನೆ. ಅಣ್ಣಾಮಲೈ ಮೇಲೆ ಮತ್ತಷ್ಟು ತನಿಖೆಯಾಗಲಿ” ಎಂದಿದ್ದಾರೆ ಗಾಯತ್ರಿ ರಘುರಾಮ್.

- Advertisement -
- Advertisement -

ಬಿಜೆಪಿಯಿಂದ ಅಮಾನತಿಗೆ ಒಳಗಾದ ನಲವತ್ತು ದಿನಗಳ ನಂತರ ತಮಿಳು ನಟಿ ಗಾಯತ್ರಿ ರಘುರಾಮ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಕೆ.ಅಣ್ಣಾಮಲೈ ಅವರನ್ನು ದೂಷಿಸಿದ್ದಾರೆ.

2014ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಗಾಯತ್ರಿ ರಘುರಾಮ್‌, “ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಲ್ಲಿ ಮಹಿಳೆಯರು ಸುರಕ್ಷಿತವಾಗಿರುವುದಿಲ್ಲ” ಎಂದು ಆರೋಪಿಸಿದ್ದಾರೆ. ಅಣ್ಣಾಮಲೈ ಬೆಂಬಲಿಗರು ತನ್ನನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿರುವುದಕ್ಕೆ ಗಾಯತ್ರಿಯವರು ಬೇಸರ ವ್ಯಕ್ತಪಡಿಸಿದ್ದಾರೆ.

ಡಿಎಂಕೆ ಸಂಸದ ತಿರುಚಿ ಶಿವ ಅವರ ಪುತ್ರ ಸೂರ್ಯ ಶಿವ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಅಣ್ಣಾಮಲೈ ಅವರ ನಿರ್ಧಾರವನ್ನು ಗಾಯತ್ರಿಯವರು ಸಾರ್ವಜನಿಕವಾಗಿ ಟೀಕಿಸಿದ ನಂತರ ನವೆಂಬರ್ 22ರಂದು ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಲಾಯಿತು. ನಂತರ ಸೂರ್ಯ ಶಿವ ಅವರು ಗಾಯತ್ರಿಯವರಿಗೆ ಫೋನ್‌ ಮಾಡಿ ಅವಾಚ್ಯವಾಗಿ ಮಾತನಾಡಿದ್ದು ವರದಿಯಾಗಿತ್ತು.

“ಅಣ್ಣಾಮಲೈ ಬೆಂಬಲಿಗರು ಸಾಮಾಜಿಕ ಮಾಧ್ಯಮದಲ್ಲಿ ‘ಅನಾವಶ್ಯಕವಾಗಿ’ ಟಾರ್ಗೆಟ್ ಮಾಡಿದ್ದಾರೆ. ಹೆಚ್ಚು ಟ್ರೋಲ್ ಮಾಡುತ್ತಿದ್ದಾರೆ” ಎಂದು ನಟಿ ಅಳಲು ತೋಡಿಕೊಂಡಿದ್ದರು. “ಬಿಜೆಪಿಯಲ್ಲಿ ಮಹಿಳೆಯರನ್ನು ನಿಂದಿಸುವವರನ್ನು ರಕ್ಷಿಸಲಾಗುತ್ತಿದೆ” ಎಂದು ಕರ್ನಾಟಕ-ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿಯಾದ ಅಣ್ಣಾಮಲೈ ಅವರನ್ನು ನಟಿ ಟೀಕಿಸಿದ್ದಾರೆ.

“ಮಹಿಳೆಯರ ವಿಚಾರಣೆ, ಸಮಾನ ಹಕ್ಕುಗಳು ಮತ್ತು ಗೌರವಕ್ಕೆ ಅವಕಾಶ ನೀಡದಿದ್ದಕ್ಕಾಗಿ ನಾನು ತಮಿಳುನಾಡು ಬಿಜೆಪಿಗೆ ರಾಜೀನಾಮೆ ನೀಡುವ ನಿರ್ಧಾರವನ್ನು ಭಾರವಾದ ಹೃದಯದಿಂದ ತೆಗೆದುಕೊಂಡಿದ್ದೇನೆ. ಅಣ್ಣಾಮಲೈ ನೇತೃತ್ವದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ನಾನು ಹೊರಗಿನ ವ್ಯಕ್ತಿಯಾಗಿ ಟ್ರೋಲ್ ಆಗುವುದು ಉತ್ತಮ” ಎಂದು ಅವರು ತಮ್ಮ ಟ್ವಿಟರ್‌‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಗಾಯತ್ರಿ ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ತಮಿಳುನಾಡು ಬಿಜೆಪಿ ಘಟಕದಲ್ಲಿ ನಿಜವಾದ ಕಾರ್ಯಕರ್ತರ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ. ಅಂಥವರನ್ನು ಹೊರಗೆ ಓಡಿಸುವುದೇ ಏಕೈಕ ಗುರಿಯಾಗಿದೆ ಎಂದಿದ್ದಾರೆ.

“ನಾನು ಬಿಜೆಪಿಗೆ ಶುಭ ಹಾರೈಸುತ್ತೇನೆ. ನಾನು ಈ ಆತುರದ ನಿರ್ಧಾರ ತೆಗೆದುಕೊಂಡಿದ್ದರ ಶ್ರೇಯ ಅಣ್ಣಾಮಲೈ ಅವರಿಗೆ ಸಲ್ಲುತ್ತದೆ. ಮುಂದೆ ನಾನು ಅಣ್ಣಾಮಲೈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಬಯಸುವುದಿಲ್ಲ. ಅವರು ಅಗ್ಗದ ತಂತ್ರಗಾರಿಕೆಯ ಸುಳ್ಳುಗಾರ ಮತ್ತು ಅಧಾರ್ಮಿಕ ನಾಯಕ” ಎಂದು ಕುಟುಕಿದ್ದಾರೆ.

ಅಣ್ಣಾಮಲೈ ಅವರು ಅಧಿಕಾರ ವಹಿಸಿಕೊಂಡು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಸ್ಥಾನದಿಂದ ಗಾಯತ್ರಿ ಅವರನ್ನು ತೆಗೆದು ಹಾಕಿದ ಬಳಿಕ ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ಭಾವನೆಯನ್ನು ಗಾಯತ್ರಿ ವ್ಯಕ್ತಪಡಿಸಿದ್ದರು. ತದನಂತರ ಗಾಯತ್ರಿಯವರಿಗೆ ಮತ್ತೊಂದು ವಿಭಾಗದ ಉಸ್ತುವಾರಿ ವಹಿಸಲಾಯಿತು. ಆದರೆ ಆ ಹುದ್ದೆಯ ಜವಾಬ್ದಾರಿ ಅವರಿಗೆ ಖುಷಿ ತಂದಿರಲಿಲ್ಲ.

“ಬಿಜೆಪಿಯ ಪುರುಷ ಮಹನೀಯರು, ಮಹಿಳೆಯರ ಮೇಲೆ ಎಸಗಿರುವ ದೌರ್ನಜ್ಯಗಳಿಗೆ ಸಂಬಂಧಿಸಿದ ಆಡಿಯೋ ಮತ್ತು ವಿಡಿಯೋ ಟೇಪ್‌ಗಳು ಇವೆ” ಎಂದು ನಟಿ ಮಾಹಿತಿ ನೀಡಿದ್ದಾರೆ.

“ನಾನು ಪೊಲೀಸ್ ದೂರು ನೀಡಲು ಸಿದ್ಧನಿದ್ದೇನೆ. ಎಲ್ಲಾ ವೀಡಿಯೊಗಳು ಮತ್ತು ಆಡಿಯೊಗಳನ್ನು ಒಪ್ಪಿಸುತ್ತೇನೆ. ಅಣ್ಣಾಮಲೈ ಅವರ ಮೇಲೆ ಮತ್ತಷ್ಟು ತನಿಖೆಯಾಗಲಿ” ಎಂದು ಆಗ್ರಹಿಸಿದ್ದಾರೆ. ರಘುರಾಮ್ ಅವರ ಆರೋಪಗಳಿಗೆ ಅಣ್ಣಾಮಲೈ ಸದ್ಯಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...