Homeಮುಖಪುಟಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

“ಎಲ್ಲಾ ವಿಡಿಯೊಗಳು ಮತ್ತು ಆಡಿಯೊಗಳನ್ನು ಪೊಲೀಸರಿಗೆ ಒಪ್ಪಿಸುತ್ತೇನೆ. ಅಣ್ಣಾಮಲೈ ಮೇಲೆ ಮತ್ತಷ್ಟು ತನಿಖೆಯಾಗಲಿ” ಎಂದಿದ್ದಾರೆ ಗಾಯತ್ರಿ ರಘುರಾಮ್.

- Advertisement -
- Advertisement -

ಬಿಜೆಪಿಯಿಂದ ಅಮಾನತಿಗೆ ಒಳಗಾದ ನಲವತ್ತು ದಿನಗಳ ನಂತರ ತಮಿಳು ನಟಿ ಗಾಯತ್ರಿ ರಘುರಾಮ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಕೆ.ಅಣ್ಣಾಮಲೈ ಅವರನ್ನು ದೂಷಿಸಿದ್ದಾರೆ.

2014ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಗಾಯತ್ರಿ ರಘುರಾಮ್‌, “ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಲ್ಲಿ ಮಹಿಳೆಯರು ಸುರಕ್ಷಿತವಾಗಿರುವುದಿಲ್ಲ” ಎಂದು ಆರೋಪಿಸಿದ್ದಾರೆ. ಅಣ್ಣಾಮಲೈ ಬೆಂಬಲಿಗರು ತನ್ನನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿರುವುದಕ್ಕೆ ಗಾಯತ್ರಿಯವರು ಬೇಸರ ವ್ಯಕ್ತಪಡಿಸಿದ್ದಾರೆ.

ಡಿಎಂಕೆ ಸಂಸದ ತಿರುಚಿ ಶಿವ ಅವರ ಪುತ್ರ ಸೂರ್ಯ ಶಿವ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಅಣ್ಣಾಮಲೈ ಅವರ ನಿರ್ಧಾರವನ್ನು ಗಾಯತ್ರಿಯವರು ಸಾರ್ವಜನಿಕವಾಗಿ ಟೀಕಿಸಿದ ನಂತರ ನವೆಂಬರ್ 22ರಂದು ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಲಾಯಿತು. ನಂತರ ಸೂರ್ಯ ಶಿವ ಅವರು ಗಾಯತ್ರಿಯವರಿಗೆ ಫೋನ್‌ ಮಾಡಿ ಅವಾಚ್ಯವಾಗಿ ಮಾತನಾಡಿದ್ದು ವರದಿಯಾಗಿತ್ತು.

“ಅಣ್ಣಾಮಲೈ ಬೆಂಬಲಿಗರು ಸಾಮಾಜಿಕ ಮಾಧ್ಯಮದಲ್ಲಿ ‘ಅನಾವಶ್ಯಕವಾಗಿ’ ಟಾರ್ಗೆಟ್ ಮಾಡಿದ್ದಾರೆ. ಹೆಚ್ಚು ಟ್ರೋಲ್ ಮಾಡುತ್ತಿದ್ದಾರೆ” ಎಂದು ನಟಿ ಅಳಲು ತೋಡಿಕೊಂಡಿದ್ದರು. “ಬಿಜೆಪಿಯಲ್ಲಿ ಮಹಿಳೆಯರನ್ನು ನಿಂದಿಸುವವರನ್ನು ರಕ್ಷಿಸಲಾಗುತ್ತಿದೆ” ಎಂದು ಕರ್ನಾಟಕ-ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿಯಾದ ಅಣ್ಣಾಮಲೈ ಅವರನ್ನು ನಟಿ ಟೀಕಿಸಿದ್ದಾರೆ.

“ಮಹಿಳೆಯರ ವಿಚಾರಣೆ, ಸಮಾನ ಹಕ್ಕುಗಳು ಮತ್ತು ಗೌರವಕ್ಕೆ ಅವಕಾಶ ನೀಡದಿದ್ದಕ್ಕಾಗಿ ನಾನು ತಮಿಳುನಾಡು ಬಿಜೆಪಿಗೆ ರಾಜೀನಾಮೆ ನೀಡುವ ನಿರ್ಧಾರವನ್ನು ಭಾರವಾದ ಹೃದಯದಿಂದ ತೆಗೆದುಕೊಂಡಿದ್ದೇನೆ. ಅಣ್ಣಾಮಲೈ ನೇತೃತ್ವದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ನಾನು ಹೊರಗಿನ ವ್ಯಕ್ತಿಯಾಗಿ ಟ್ರೋಲ್ ಆಗುವುದು ಉತ್ತಮ” ಎಂದು ಅವರು ತಮ್ಮ ಟ್ವಿಟರ್‌‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಗಾಯತ್ರಿ ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ತಮಿಳುನಾಡು ಬಿಜೆಪಿ ಘಟಕದಲ್ಲಿ ನಿಜವಾದ ಕಾರ್ಯಕರ್ತರ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ. ಅಂಥವರನ್ನು ಹೊರಗೆ ಓಡಿಸುವುದೇ ಏಕೈಕ ಗುರಿಯಾಗಿದೆ ಎಂದಿದ್ದಾರೆ.

“ನಾನು ಬಿಜೆಪಿಗೆ ಶುಭ ಹಾರೈಸುತ್ತೇನೆ. ನಾನು ಈ ಆತುರದ ನಿರ್ಧಾರ ತೆಗೆದುಕೊಂಡಿದ್ದರ ಶ್ರೇಯ ಅಣ್ಣಾಮಲೈ ಅವರಿಗೆ ಸಲ್ಲುತ್ತದೆ. ಮುಂದೆ ನಾನು ಅಣ್ಣಾಮಲೈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಬಯಸುವುದಿಲ್ಲ. ಅವರು ಅಗ್ಗದ ತಂತ್ರಗಾರಿಕೆಯ ಸುಳ್ಳುಗಾರ ಮತ್ತು ಅಧಾರ್ಮಿಕ ನಾಯಕ” ಎಂದು ಕುಟುಕಿದ್ದಾರೆ.

ಅಣ್ಣಾಮಲೈ ಅವರು ಅಧಿಕಾರ ವಹಿಸಿಕೊಂಡು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಸ್ಥಾನದಿಂದ ಗಾಯತ್ರಿ ಅವರನ್ನು ತೆಗೆದು ಹಾಕಿದ ಬಳಿಕ ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ಭಾವನೆಯನ್ನು ಗಾಯತ್ರಿ ವ್ಯಕ್ತಪಡಿಸಿದ್ದರು. ತದನಂತರ ಗಾಯತ್ರಿಯವರಿಗೆ ಮತ್ತೊಂದು ವಿಭಾಗದ ಉಸ್ತುವಾರಿ ವಹಿಸಲಾಯಿತು. ಆದರೆ ಆ ಹುದ್ದೆಯ ಜವಾಬ್ದಾರಿ ಅವರಿಗೆ ಖುಷಿ ತಂದಿರಲಿಲ್ಲ.

“ಬಿಜೆಪಿಯ ಪುರುಷ ಮಹನೀಯರು, ಮಹಿಳೆಯರ ಮೇಲೆ ಎಸಗಿರುವ ದೌರ್ನಜ್ಯಗಳಿಗೆ ಸಂಬಂಧಿಸಿದ ಆಡಿಯೋ ಮತ್ತು ವಿಡಿಯೋ ಟೇಪ್‌ಗಳು ಇವೆ” ಎಂದು ನಟಿ ಮಾಹಿತಿ ನೀಡಿದ್ದಾರೆ.

“ನಾನು ಪೊಲೀಸ್ ದೂರು ನೀಡಲು ಸಿದ್ಧನಿದ್ದೇನೆ. ಎಲ್ಲಾ ವೀಡಿಯೊಗಳು ಮತ್ತು ಆಡಿಯೊಗಳನ್ನು ಒಪ್ಪಿಸುತ್ತೇನೆ. ಅಣ್ಣಾಮಲೈ ಅವರ ಮೇಲೆ ಮತ್ತಷ್ಟು ತನಿಖೆಯಾಗಲಿ” ಎಂದು ಆಗ್ರಹಿಸಿದ್ದಾರೆ. ರಘುರಾಮ್ ಅವರ ಆರೋಪಗಳಿಗೆ ಅಣ್ಣಾಮಲೈ ಸದ್ಯಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...