Homeಮುಖಪುಟಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

“ಎಲ್ಲಾ ವಿಡಿಯೊಗಳು ಮತ್ತು ಆಡಿಯೊಗಳನ್ನು ಪೊಲೀಸರಿಗೆ ಒಪ್ಪಿಸುತ್ತೇನೆ. ಅಣ್ಣಾಮಲೈ ಮೇಲೆ ಮತ್ತಷ್ಟು ತನಿಖೆಯಾಗಲಿ” ಎಂದಿದ್ದಾರೆ ಗಾಯತ್ರಿ ರಘುರಾಮ್.

- Advertisement -
- Advertisement -

ಬಿಜೆಪಿಯಿಂದ ಅಮಾನತಿಗೆ ಒಳಗಾದ ನಲವತ್ತು ದಿನಗಳ ನಂತರ ತಮಿಳು ನಟಿ ಗಾಯತ್ರಿ ರಘುರಾಮ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಕೆ.ಅಣ್ಣಾಮಲೈ ಅವರನ್ನು ದೂಷಿಸಿದ್ದಾರೆ.

2014ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಗಾಯತ್ರಿ ರಘುರಾಮ್‌, “ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಲ್ಲಿ ಮಹಿಳೆಯರು ಸುರಕ್ಷಿತವಾಗಿರುವುದಿಲ್ಲ” ಎಂದು ಆರೋಪಿಸಿದ್ದಾರೆ. ಅಣ್ಣಾಮಲೈ ಬೆಂಬಲಿಗರು ತನ್ನನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿರುವುದಕ್ಕೆ ಗಾಯತ್ರಿಯವರು ಬೇಸರ ವ್ಯಕ್ತಪಡಿಸಿದ್ದಾರೆ.

ಡಿಎಂಕೆ ಸಂಸದ ತಿರುಚಿ ಶಿವ ಅವರ ಪುತ್ರ ಸೂರ್ಯ ಶಿವ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಅಣ್ಣಾಮಲೈ ಅವರ ನಿರ್ಧಾರವನ್ನು ಗಾಯತ್ರಿಯವರು ಸಾರ್ವಜನಿಕವಾಗಿ ಟೀಕಿಸಿದ ನಂತರ ನವೆಂಬರ್ 22ರಂದು ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಲಾಯಿತು. ನಂತರ ಸೂರ್ಯ ಶಿವ ಅವರು ಗಾಯತ್ರಿಯವರಿಗೆ ಫೋನ್‌ ಮಾಡಿ ಅವಾಚ್ಯವಾಗಿ ಮಾತನಾಡಿದ್ದು ವರದಿಯಾಗಿತ್ತು.

“ಅಣ್ಣಾಮಲೈ ಬೆಂಬಲಿಗರು ಸಾಮಾಜಿಕ ಮಾಧ್ಯಮದಲ್ಲಿ ‘ಅನಾವಶ್ಯಕವಾಗಿ’ ಟಾರ್ಗೆಟ್ ಮಾಡಿದ್ದಾರೆ. ಹೆಚ್ಚು ಟ್ರೋಲ್ ಮಾಡುತ್ತಿದ್ದಾರೆ” ಎಂದು ನಟಿ ಅಳಲು ತೋಡಿಕೊಂಡಿದ್ದರು. “ಬಿಜೆಪಿಯಲ್ಲಿ ಮಹಿಳೆಯರನ್ನು ನಿಂದಿಸುವವರನ್ನು ರಕ್ಷಿಸಲಾಗುತ್ತಿದೆ” ಎಂದು ಕರ್ನಾಟಕ-ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿಯಾದ ಅಣ್ಣಾಮಲೈ ಅವರನ್ನು ನಟಿ ಟೀಕಿಸಿದ್ದಾರೆ.

“ಮಹಿಳೆಯರ ವಿಚಾರಣೆ, ಸಮಾನ ಹಕ್ಕುಗಳು ಮತ್ತು ಗೌರವಕ್ಕೆ ಅವಕಾಶ ನೀಡದಿದ್ದಕ್ಕಾಗಿ ನಾನು ತಮಿಳುನಾಡು ಬಿಜೆಪಿಗೆ ರಾಜೀನಾಮೆ ನೀಡುವ ನಿರ್ಧಾರವನ್ನು ಭಾರವಾದ ಹೃದಯದಿಂದ ತೆಗೆದುಕೊಂಡಿದ್ದೇನೆ. ಅಣ್ಣಾಮಲೈ ನೇತೃತ್ವದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ನಾನು ಹೊರಗಿನ ವ್ಯಕ್ತಿಯಾಗಿ ಟ್ರೋಲ್ ಆಗುವುದು ಉತ್ತಮ” ಎಂದು ಅವರು ತಮ್ಮ ಟ್ವಿಟರ್‌‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಗಾಯತ್ರಿ ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ತಮಿಳುನಾಡು ಬಿಜೆಪಿ ಘಟಕದಲ್ಲಿ ನಿಜವಾದ ಕಾರ್ಯಕರ್ತರ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ. ಅಂಥವರನ್ನು ಹೊರಗೆ ಓಡಿಸುವುದೇ ಏಕೈಕ ಗುರಿಯಾಗಿದೆ ಎಂದಿದ್ದಾರೆ.

“ನಾನು ಬಿಜೆಪಿಗೆ ಶುಭ ಹಾರೈಸುತ್ತೇನೆ. ನಾನು ಈ ಆತುರದ ನಿರ್ಧಾರ ತೆಗೆದುಕೊಂಡಿದ್ದರ ಶ್ರೇಯ ಅಣ್ಣಾಮಲೈ ಅವರಿಗೆ ಸಲ್ಲುತ್ತದೆ. ಮುಂದೆ ನಾನು ಅಣ್ಣಾಮಲೈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಬಯಸುವುದಿಲ್ಲ. ಅವರು ಅಗ್ಗದ ತಂತ್ರಗಾರಿಕೆಯ ಸುಳ್ಳುಗಾರ ಮತ್ತು ಅಧಾರ್ಮಿಕ ನಾಯಕ” ಎಂದು ಕುಟುಕಿದ್ದಾರೆ.

ಅಣ್ಣಾಮಲೈ ಅವರು ಅಧಿಕಾರ ವಹಿಸಿಕೊಂಡು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಸ್ಥಾನದಿಂದ ಗಾಯತ್ರಿ ಅವರನ್ನು ತೆಗೆದು ಹಾಕಿದ ಬಳಿಕ ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ಭಾವನೆಯನ್ನು ಗಾಯತ್ರಿ ವ್ಯಕ್ತಪಡಿಸಿದ್ದರು. ತದನಂತರ ಗಾಯತ್ರಿಯವರಿಗೆ ಮತ್ತೊಂದು ವಿಭಾಗದ ಉಸ್ತುವಾರಿ ವಹಿಸಲಾಯಿತು. ಆದರೆ ಆ ಹುದ್ದೆಯ ಜವಾಬ್ದಾರಿ ಅವರಿಗೆ ಖುಷಿ ತಂದಿರಲಿಲ್ಲ.

“ಬಿಜೆಪಿಯ ಪುರುಷ ಮಹನೀಯರು, ಮಹಿಳೆಯರ ಮೇಲೆ ಎಸಗಿರುವ ದೌರ್ನಜ್ಯಗಳಿಗೆ ಸಂಬಂಧಿಸಿದ ಆಡಿಯೋ ಮತ್ತು ವಿಡಿಯೋ ಟೇಪ್‌ಗಳು ಇವೆ” ಎಂದು ನಟಿ ಮಾಹಿತಿ ನೀಡಿದ್ದಾರೆ.

“ನಾನು ಪೊಲೀಸ್ ದೂರು ನೀಡಲು ಸಿದ್ಧನಿದ್ದೇನೆ. ಎಲ್ಲಾ ವೀಡಿಯೊಗಳು ಮತ್ತು ಆಡಿಯೊಗಳನ್ನು ಒಪ್ಪಿಸುತ್ತೇನೆ. ಅಣ್ಣಾಮಲೈ ಅವರ ಮೇಲೆ ಮತ್ತಷ್ಟು ತನಿಖೆಯಾಗಲಿ” ಎಂದು ಆಗ್ರಹಿಸಿದ್ದಾರೆ. ರಘುರಾಮ್ ಅವರ ಆರೋಪಗಳಿಗೆ ಅಣ್ಣಾಮಲೈ ಸದ್ಯಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...