Homeಮುಖಪುಟಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

ಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

- Advertisement -
- Advertisement -

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಒದಗಿಸುವ ಸಂವಿಧಾನ (ನೂರ ಆರನೇ ತಿದ್ದುಪಡಿ) ಕಾಯ್ದೆ 2023 (ನಾರಿ ಶಕ್ತಿ ವಂದನ ಅಧಿನಿಯಂ)ರ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ನ.10) ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರಿದ್ದ ನ್ಯಾಯಪೀಠವು ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದೆ.

ಮುಂದಿನ ಜನಗಣತಿ ನಡೆದು, ಕ್ಷೇತ್ರ ಪುನರ್‌ವಿಂಗಡನೆ ಪೂರ್ಣಗೊಂಡ ಬಳಿಕವಷ್ಟೇ ಮಹಿಳೆಯರ ಮೀಸಲಾತಿ ಕಾನೂನು ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಈ ಕುರಿತು ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ, “ಮೀಸಲಾತಿ ಅನುಷ್ಠಾನವನ್ನು ಜನಗಣತಿಗೆ ಅವಲಂಬಿತವಾಗಿ ಮಾಡುವುದರಲ್ಲಿ ಯಾವುದೇ ತಾರ್ಕಿಕತೆ ಇಲ್ಲ. ಏಕೆಂದರೆ, ಜನಗಣತಿ ಇನ್ನೂ ಪ್ರಾರಂಭಗೊಂಡಿಲ್ಲ. ಯಾವಾಗ ಪ್ರಾರಂಭವಾಗಲಿದೆ ಎಂದೂ ಹೇಳಿಲ್ಲ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ಕಾನೂನಿನ ಜಾರಿ ಕಾರ್ಯಾಂಗದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದಾರೆ.

ಈ ವೇಳೆ ಉತ್ತರಿಸಿದ ವಕೀಲ, ನಾವು ಅದರ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಇನ್ನೂ ಪ್ರಾರಂಭಗೊಳ್ಳದ ಜನಗಣತಿಗೆ ಮೀಸಲಾತಿಯನ್ನು ಅವಲಂಬನೆ ಮಾಡಿರುವುದಷ್ಟೇ ನಮ್ಮ ಕಳಕಳಿ. ಏಕೆಂದರೆ, ಜನಗಣತಿ ಯಾವಾಗ ಪ್ರಾರಂಭಗೊಳ್ಳುತ್ತದೆ ಎಂಬ ಸ್ಪಷ್ಟತೆ ಇಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ನೀವು ಯಾವಾಗ ಜನಗಣತಿ ಪ್ರಾರಂಭಿಸುತ್ತೀರಿ ಎಂದಷ್ಟೇ ನಾವು ಕೇಳಬಹುದು. ಬಹುಷ ಅವರು ವೈಜ್ಞಾನಿಕ ದತ್ತಾಂಶ ಆಧರಿಸಿ ಮೀಸಲಾತಿ ಜಾರಿಗೊಳಿಸಲು ಅದನ್ನು ಜನಗಣತಿಗೆ ಅವಲಂಬನೆ ಮಾಡಿರಬಹುದು ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ, ಸಂಸತ್ತು ಈಗಾಗಲೇ ಅನುಮೋದನೇ ನೀಡಿರುವ ಕಾನೂನನ್ನು ಯಾವುದೇ ವೈಜ್ಞಾನಿಕ ದತ್ತಾಂಶಗಳಿಲ್ಲದೆ ಮಾಡಿರಲು ಸಾಧ್ಯವಿಲ್ಲ. ಪ್ರಸ್ತಾವಿತ ಮೀಸಲಾತಿ ಪ್ರಮಾಣ ನಿರ್ಧರಿಸುವ ಮೊದಲು ಅವರು ದೃಢವಾದ ವೈಜ್ಞಾನಿಕ ಅಥವಾ ಸತ್ಯಾಂಶ ಆಧಾರಿತ ದತ್ತಾಂಶಗಳನ್ನು ನೋಡಿಕೊಂಡಿದ್ದಾರೆ ಎಂದು ಊಹಿಸಬೇಕು. ಆದ್ದರಿಂದ, ಕಾನೂನು ಮಾಡುವ ಸಮಯದಲ್ಲಿ ಸರಿಯಾದ ಸಾಕ್ಷ್ಯಗಳು ಇದ್ದವು ಎಂದು ನಾವು ಭಾವಿಸಬೇಕು ಎಂದು ಹೇಳಿದ್ದಾರೆ.

ವಾದ ಆಲಿಸುವ ವೇಳೆ “ದೇಶದ ಎಲ್ಲಾ ನಾಗರಿಕರು ರಾಜಕೀಯ ಮತ್ತು ಸಾಮಾಜಿಕ ಸಮಾನತೆಗೆ ಅರ್ಹರು ಎಂದು ಸಂವಿಧಾನದ ಪೀಠಿಕೆ ಹೇಳುತ್ತದೆ. ದೇಶದ ಅತಿದೊಡ್ಡ ಅಲ್ಪಸಂಖ್ಯಾತರು ಮಹಿಳೆಯರು. ಮಹಿಳೆಯರ ಸಂಖ್ಯೆ ಶೇಕಡ 48ರಷ್ಟಿದೆ. ಮಹಿಳೆಯರಿಗೆ ರಾಜಕೀಯ ಸಮಾನತೆ ದೊರಕಿಸಿಕೊಡಲು ಈ ಮೀಸಲಾತಿ ಅಗತ್ಯವಿದೆ ಎಂದು ನ್ಯಾ. ನಾಗರತ್ನ ಮೌಖಿಕವಾಗಿ ಹೇಳಿದ್ದಾರೆ” ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ವಾದ ಆಲಿಸಿದ ನ್ಯಾಯಾಲಯವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ನಿರ್ದೇಶಿಸಿದೆ ಎಂದು ತಿಳಿಸಿದೆ.

ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ಸಂವಿಧಾನದ 334ಎ(1) ವಿಧಿಯಲ್ಲಿ ಇರುವ ‘ಜನಗಣತಿ ನಡೆಸಿ ಕ್ಷೇತ್ರ ಪುನರ್‌ವಿಂಗಡನೆ ಮಾಡಿದ ನಂತರ’ ಎಂಬ ಷರತ್ತನ್ನು ಆರಂಭದಿಂದಲೇ ಅಸಾಂವಿಧಾನಿಕ (void-ab-initio) ಎಂದು ಘೋಷಿಸಬೇಕು ಮತ್ತು ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಕೋರಿದ್ದಾರೆ.

ವಕೀಲ ವರುಣ್ ಠಾಕೂರ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಮೀಸಲಾತಿಗೆ ಸಂಬಂಧಿಸಿದ ಹಲವಾರು ಹಿಂದಿನ ಸಾಂವಿಧಾನಿಕ ತಿದ್ದುಪಡಿಗಳನ್ನು ಯಾವುದೇ ಜನಗಣತಿ ಅಥವಾ ಕ್ಷೇತ್ರ ಪುನರ್‌ವಿಂಗಡನೆ ಪ್ರಕ್ರಿಯೆಯ ಪೂರ್ಣಗೊಳಿಸುವಿಕೆಗೆ ಅವಲಂಭಿಸದೆ ತಕ್ಷಣವೇ ಜಾರಿಗೆ ತರಲಾಗಿದೆ ಎಂದು ತಿಳಿಸಲಾಗಿದೆ. ಭಾರತದ ಜನಸಂಖ್ಯೆಯ ಸುಮಾರು 50 ಶೇಕಡದಷ್ಟಿರುವ ಮಹಿಳೆಯರ ಪ್ರಾತಿನಿಧ್ಯ ಶಾಸಕಾಂಗ ಸಂಸ್ಥೆಗಳಲ್ಲಿ ಕೇವಲ 4 ಶೇಕಡ ಇದೆ. ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಸಾಕಷ್ಟು ಪ್ರಾತಿನಿಧ್ಯ ನೀಡುವ ಉದ್ದೇಶಕ್ಕೆ ಇಂತಹ ನಿಬಂಧನೆಗಳು ‘ಅಡಚಣೆ’ಯಾಗುತ್ತದೆ ಎಂದು ಹೇಳಲಾಗಿದೆ.

ರಾಷ್ಟ್ರಪತಿಗಳು ಒಪ್ಪಿಗೆ ನೀಡುವ ಮೊದಲೇ ಮಸೂದೆಯನ್ನು ಪ್ರಶ್ನಿಸಿ ಇದೇ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ನಿಷ್ಪ್ರಯೋಜಕವೆಂದು ನ್ಯಾಯಾಲಯ ವಜಾಗೊಳಿಸಿತ್ತು.

ಎಲ್.ಕೆ ಅಡ್ವಾಣಿಯನ್ನು ಹಾಡಿ ಹೊಗಳಿದ ಶಶಿ ತರೂರ್ : ಅಂತರ ಕಾಯ್ದುಕೊಂಡ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...