Homeಮುಖಪುಟಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

ಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

- Advertisement -
- Advertisement -

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಒದಗಿಸುವ ಸಂವಿಧಾನ (ನೂರ ಆರನೇ ತಿದ್ದುಪಡಿ) ಕಾಯ್ದೆ 2023 (ನಾರಿ ಶಕ್ತಿ ವಂದನ ಅಧಿನಿಯಂ)ರ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ನ.10) ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರಿದ್ದ ನ್ಯಾಯಪೀಠವು ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದೆ.

ಮುಂದಿನ ಜನಗಣತಿ ನಡೆದು, ಕ್ಷೇತ್ರ ಪುನರ್‌ವಿಂಗಡನೆ ಪೂರ್ಣಗೊಂಡ ಬಳಿಕವಷ್ಟೇ ಮಹಿಳೆಯರ ಮೀಸಲಾತಿ ಕಾನೂನು ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಈ ಕುರಿತು ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ, “ಮೀಸಲಾತಿ ಅನುಷ್ಠಾನವನ್ನು ಜನಗಣತಿಗೆ ಅವಲಂಬಿತವಾಗಿ ಮಾಡುವುದರಲ್ಲಿ ಯಾವುದೇ ತಾರ್ಕಿಕತೆ ಇಲ್ಲ. ಏಕೆಂದರೆ, ಜನಗಣತಿ ಇನ್ನೂ ಪ್ರಾರಂಭಗೊಂಡಿಲ್ಲ. ಯಾವಾಗ ಪ್ರಾರಂಭವಾಗಲಿದೆ ಎಂದೂ ಹೇಳಿಲ್ಲ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ಕಾನೂನಿನ ಜಾರಿ ಕಾರ್ಯಾಂಗದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದಾರೆ.

ಈ ವೇಳೆ ಉತ್ತರಿಸಿದ ವಕೀಲ, ನಾವು ಅದರ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಇನ್ನೂ ಪ್ರಾರಂಭಗೊಳ್ಳದ ಜನಗಣತಿಗೆ ಮೀಸಲಾತಿಯನ್ನು ಅವಲಂಬನೆ ಮಾಡಿರುವುದಷ್ಟೇ ನಮ್ಮ ಕಳಕಳಿ. ಏಕೆಂದರೆ, ಜನಗಣತಿ ಯಾವಾಗ ಪ್ರಾರಂಭಗೊಳ್ಳುತ್ತದೆ ಎಂಬ ಸ್ಪಷ್ಟತೆ ಇಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ನೀವು ಯಾವಾಗ ಜನಗಣತಿ ಪ್ರಾರಂಭಿಸುತ್ತೀರಿ ಎಂದಷ್ಟೇ ನಾವು ಕೇಳಬಹುದು. ಬಹುಷ ಅವರು ವೈಜ್ಞಾನಿಕ ದತ್ತಾಂಶ ಆಧರಿಸಿ ಮೀಸಲಾತಿ ಜಾರಿಗೊಳಿಸಲು ಅದನ್ನು ಜನಗಣತಿಗೆ ಅವಲಂಬನೆ ಮಾಡಿರಬಹುದು ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ, ಸಂಸತ್ತು ಈಗಾಗಲೇ ಅನುಮೋದನೇ ನೀಡಿರುವ ಕಾನೂನನ್ನು ಯಾವುದೇ ವೈಜ್ಞಾನಿಕ ದತ್ತಾಂಶಗಳಿಲ್ಲದೆ ಮಾಡಿರಲು ಸಾಧ್ಯವಿಲ್ಲ. ಪ್ರಸ್ತಾವಿತ ಮೀಸಲಾತಿ ಪ್ರಮಾಣ ನಿರ್ಧರಿಸುವ ಮೊದಲು ಅವರು ದೃಢವಾದ ವೈಜ್ಞಾನಿಕ ಅಥವಾ ಸತ್ಯಾಂಶ ಆಧಾರಿತ ದತ್ತಾಂಶಗಳನ್ನು ನೋಡಿಕೊಂಡಿದ್ದಾರೆ ಎಂದು ಊಹಿಸಬೇಕು. ಆದ್ದರಿಂದ, ಕಾನೂನು ಮಾಡುವ ಸಮಯದಲ್ಲಿ ಸರಿಯಾದ ಸಾಕ್ಷ್ಯಗಳು ಇದ್ದವು ಎಂದು ನಾವು ಭಾವಿಸಬೇಕು ಎಂದು ಹೇಳಿದ್ದಾರೆ.

ವಾದ ಆಲಿಸುವ ವೇಳೆ “ದೇಶದ ಎಲ್ಲಾ ನಾಗರಿಕರು ರಾಜಕೀಯ ಮತ್ತು ಸಾಮಾಜಿಕ ಸಮಾನತೆಗೆ ಅರ್ಹರು ಎಂದು ಸಂವಿಧಾನದ ಪೀಠಿಕೆ ಹೇಳುತ್ತದೆ. ದೇಶದ ಅತಿದೊಡ್ಡ ಅಲ್ಪಸಂಖ್ಯಾತರು ಮಹಿಳೆಯರು. ಮಹಿಳೆಯರ ಸಂಖ್ಯೆ ಶೇಕಡ 48ರಷ್ಟಿದೆ. ಮಹಿಳೆಯರಿಗೆ ರಾಜಕೀಯ ಸಮಾನತೆ ದೊರಕಿಸಿಕೊಡಲು ಈ ಮೀಸಲಾತಿ ಅಗತ್ಯವಿದೆ ಎಂದು ನ್ಯಾ. ನಾಗರತ್ನ ಮೌಖಿಕವಾಗಿ ಹೇಳಿದ್ದಾರೆ” ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ವಾದ ಆಲಿಸಿದ ನ್ಯಾಯಾಲಯವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ನಿರ್ದೇಶಿಸಿದೆ ಎಂದು ತಿಳಿಸಿದೆ.

ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ಸಂವಿಧಾನದ 334ಎ(1) ವಿಧಿಯಲ್ಲಿ ಇರುವ ‘ಜನಗಣತಿ ನಡೆಸಿ ಕ್ಷೇತ್ರ ಪುನರ್‌ವಿಂಗಡನೆ ಮಾಡಿದ ನಂತರ’ ಎಂಬ ಷರತ್ತನ್ನು ಆರಂಭದಿಂದಲೇ ಅಸಾಂವಿಧಾನಿಕ (void-ab-initio) ಎಂದು ಘೋಷಿಸಬೇಕು ಮತ್ತು ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಕೋರಿದ್ದಾರೆ.

ವಕೀಲ ವರುಣ್ ಠಾಕೂರ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಮೀಸಲಾತಿಗೆ ಸಂಬಂಧಿಸಿದ ಹಲವಾರು ಹಿಂದಿನ ಸಾಂವಿಧಾನಿಕ ತಿದ್ದುಪಡಿಗಳನ್ನು ಯಾವುದೇ ಜನಗಣತಿ ಅಥವಾ ಕ್ಷೇತ್ರ ಪುನರ್‌ವಿಂಗಡನೆ ಪ್ರಕ್ರಿಯೆಯ ಪೂರ್ಣಗೊಳಿಸುವಿಕೆಗೆ ಅವಲಂಭಿಸದೆ ತಕ್ಷಣವೇ ಜಾರಿಗೆ ತರಲಾಗಿದೆ ಎಂದು ತಿಳಿಸಲಾಗಿದೆ. ಭಾರತದ ಜನಸಂಖ್ಯೆಯ ಸುಮಾರು 50 ಶೇಕಡದಷ್ಟಿರುವ ಮಹಿಳೆಯರ ಪ್ರಾತಿನಿಧ್ಯ ಶಾಸಕಾಂಗ ಸಂಸ್ಥೆಗಳಲ್ಲಿ ಕೇವಲ 4 ಶೇಕಡ ಇದೆ. ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಸಾಕಷ್ಟು ಪ್ರಾತಿನಿಧ್ಯ ನೀಡುವ ಉದ್ದೇಶಕ್ಕೆ ಇಂತಹ ನಿಬಂಧನೆಗಳು ‘ಅಡಚಣೆ’ಯಾಗುತ್ತದೆ ಎಂದು ಹೇಳಲಾಗಿದೆ.

ರಾಷ್ಟ್ರಪತಿಗಳು ಒಪ್ಪಿಗೆ ನೀಡುವ ಮೊದಲೇ ಮಸೂದೆಯನ್ನು ಪ್ರಶ್ನಿಸಿ ಇದೇ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ನಿಷ್ಪ್ರಯೋಜಕವೆಂದು ನ್ಯಾಯಾಲಯ ವಜಾಗೊಳಿಸಿತ್ತು.

ಎಲ್.ಕೆ ಅಡ್ವಾಣಿಯನ್ನು ಹಾಡಿ ಹೊಗಳಿದ ಶಶಿ ತರೂರ್ : ಅಂತರ ಕಾಯ್ದುಕೊಂಡ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...