Homeಮುಖಪುಟಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

ಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

- Advertisement -
- Advertisement -

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಒದಗಿಸುವ ಸಂವಿಧಾನ (ನೂರ ಆರನೇ ತಿದ್ದುಪಡಿ) ಕಾಯ್ದೆ 2023 (ನಾರಿ ಶಕ್ತಿ ವಂದನ ಅಧಿನಿಯಂ)ರ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ನ.10) ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರಿದ್ದ ನ್ಯಾಯಪೀಠವು ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದೆ.

ಮುಂದಿನ ಜನಗಣತಿ ನಡೆದು, ಕ್ಷೇತ್ರ ಪುನರ್‌ವಿಂಗಡನೆ ಪೂರ್ಣಗೊಂಡ ಬಳಿಕವಷ್ಟೇ ಮಹಿಳೆಯರ ಮೀಸಲಾತಿ ಕಾನೂನು ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಈ ಕುರಿತು ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ, “ಮೀಸಲಾತಿ ಅನುಷ್ಠಾನವನ್ನು ಜನಗಣತಿಗೆ ಅವಲಂಬಿತವಾಗಿ ಮಾಡುವುದರಲ್ಲಿ ಯಾವುದೇ ತಾರ್ಕಿಕತೆ ಇಲ್ಲ. ಏಕೆಂದರೆ, ಜನಗಣತಿ ಇನ್ನೂ ಪ್ರಾರಂಭಗೊಂಡಿಲ್ಲ. ಯಾವಾಗ ಪ್ರಾರಂಭವಾಗಲಿದೆ ಎಂದೂ ಹೇಳಿಲ್ಲ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ಕಾನೂನಿನ ಜಾರಿ ಕಾರ್ಯಾಂಗದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದಾರೆ.

ಈ ವೇಳೆ ಉತ್ತರಿಸಿದ ವಕೀಲ, ನಾವು ಅದರ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಇನ್ನೂ ಪ್ರಾರಂಭಗೊಳ್ಳದ ಜನಗಣತಿಗೆ ಮೀಸಲಾತಿಯನ್ನು ಅವಲಂಬನೆ ಮಾಡಿರುವುದಷ್ಟೇ ನಮ್ಮ ಕಳಕಳಿ. ಏಕೆಂದರೆ, ಜನಗಣತಿ ಯಾವಾಗ ಪ್ರಾರಂಭಗೊಳ್ಳುತ್ತದೆ ಎಂಬ ಸ್ಪಷ್ಟತೆ ಇಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ನೀವು ಯಾವಾಗ ಜನಗಣತಿ ಪ್ರಾರಂಭಿಸುತ್ತೀರಿ ಎಂದಷ್ಟೇ ನಾವು ಕೇಳಬಹುದು. ಬಹುಷ ಅವರು ವೈಜ್ಞಾನಿಕ ದತ್ತಾಂಶ ಆಧರಿಸಿ ಮೀಸಲಾತಿ ಜಾರಿಗೊಳಿಸಲು ಅದನ್ನು ಜನಗಣತಿಗೆ ಅವಲಂಬನೆ ಮಾಡಿರಬಹುದು ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ, ಸಂಸತ್ತು ಈಗಾಗಲೇ ಅನುಮೋದನೇ ನೀಡಿರುವ ಕಾನೂನನ್ನು ಯಾವುದೇ ವೈಜ್ಞಾನಿಕ ದತ್ತಾಂಶಗಳಿಲ್ಲದೆ ಮಾಡಿರಲು ಸಾಧ್ಯವಿಲ್ಲ. ಪ್ರಸ್ತಾವಿತ ಮೀಸಲಾತಿ ಪ್ರಮಾಣ ನಿರ್ಧರಿಸುವ ಮೊದಲು ಅವರು ದೃಢವಾದ ವೈಜ್ಞಾನಿಕ ಅಥವಾ ಸತ್ಯಾಂಶ ಆಧಾರಿತ ದತ್ತಾಂಶಗಳನ್ನು ನೋಡಿಕೊಂಡಿದ್ದಾರೆ ಎಂದು ಊಹಿಸಬೇಕು. ಆದ್ದರಿಂದ, ಕಾನೂನು ಮಾಡುವ ಸಮಯದಲ್ಲಿ ಸರಿಯಾದ ಸಾಕ್ಷ್ಯಗಳು ಇದ್ದವು ಎಂದು ನಾವು ಭಾವಿಸಬೇಕು ಎಂದು ಹೇಳಿದ್ದಾರೆ.

ವಾದ ಆಲಿಸುವ ವೇಳೆ “ದೇಶದ ಎಲ್ಲಾ ನಾಗರಿಕರು ರಾಜಕೀಯ ಮತ್ತು ಸಾಮಾಜಿಕ ಸಮಾನತೆಗೆ ಅರ್ಹರು ಎಂದು ಸಂವಿಧಾನದ ಪೀಠಿಕೆ ಹೇಳುತ್ತದೆ. ದೇಶದ ಅತಿದೊಡ್ಡ ಅಲ್ಪಸಂಖ್ಯಾತರು ಮಹಿಳೆಯರು. ಮಹಿಳೆಯರ ಸಂಖ್ಯೆ ಶೇಕಡ 48ರಷ್ಟಿದೆ. ಮಹಿಳೆಯರಿಗೆ ರಾಜಕೀಯ ಸಮಾನತೆ ದೊರಕಿಸಿಕೊಡಲು ಈ ಮೀಸಲಾತಿ ಅಗತ್ಯವಿದೆ ಎಂದು ನ್ಯಾ. ನಾಗರತ್ನ ಮೌಖಿಕವಾಗಿ ಹೇಳಿದ್ದಾರೆ” ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ವಾದ ಆಲಿಸಿದ ನ್ಯಾಯಾಲಯವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ನಿರ್ದೇಶಿಸಿದೆ ಎಂದು ತಿಳಿಸಿದೆ.

ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ಸಂವಿಧಾನದ 334ಎ(1) ವಿಧಿಯಲ್ಲಿ ಇರುವ ‘ಜನಗಣತಿ ನಡೆಸಿ ಕ್ಷೇತ್ರ ಪುನರ್‌ವಿಂಗಡನೆ ಮಾಡಿದ ನಂತರ’ ಎಂಬ ಷರತ್ತನ್ನು ಆರಂಭದಿಂದಲೇ ಅಸಾಂವಿಧಾನಿಕ (void-ab-initio) ಎಂದು ಘೋಷಿಸಬೇಕು ಮತ್ತು ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಕೋರಿದ್ದಾರೆ.

ವಕೀಲ ವರುಣ್ ಠಾಕೂರ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಮೀಸಲಾತಿಗೆ ಸಂಬಂಧಿಸಿದ ಹಲವಾರು ಹಿಂದಿನ ಸಾಂವಿಧಾನಿಕ ತಿದ್ದುಪಡಿಗಳನ್ನು ಯಾವುದೇ ಜನಗಣತಿ ಅಥವಾ ಕ್ಷೇತ್ರ ಪುನರ್‌ವಿಂಗಡನೆ ಪ್ರಕ್ರಿಯೆಯ ಪೂರ್ಣಗೊಳಿಸುವಿಕೆಗೆ ಅವಲಂಭಿಸದೆ ತಕ್ಷಣವೇ ಜಾರಿಗೆ ತರಲಾಗಿದೆ ಎಂದು ತಿಳಿಸಲಾಗಿದೆ. ಭಾರತದ ಜನಸಂಖ್ಯೆಯ ಸುಮಾರು 50 ಶೇಕಡದಷ್ಟಿರುವ ಮಹಿಳೆಯರ ಪ್ರಾತಿನಿಧ್ಯ ಶಾಸಕಾಂಗ ಸಂಸ್ಥೆಗಳಲ್ಲಿ ಕೇವಲ 4 ಶೇಕಡ ಇದೆ. ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಸಾಕಷ್ಟು ಪ್ರಾತಿನಿಧ್ಯ ನೀಡುವ ಉದ್ದೇಶಕ್ಕೆ ಇಂತಹ ನಿಬಂಧನೆಗಳು ‘ಅಡಚಣೆ’ಯಾಗುತ್ತದೆ ಎಂದು ಹೇಳಲಾಗಿದೆ.

ರಾಷ್ಟ್ರಪತಿಗಳು ಒಪ್ಪಿಗೆ ನೀಡುವ ಮೊದಲೇ ಮಸೂದೆಯನ್ನು ಪ್ರಶ್ನಿಸಿ ಇದೇ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ನಿಷ್ಪ್ರಯೋಜಕವೆಂದು ನ್ಯಾಯಾಲಯ ವಜಾಗೊಳಿಸಿತ್ತು.

ಎಲ್.ಕೆ ಅಡ್ವಾಣಿಯನ್ನು ಹಾಡಿ ಹೊಗಳಿದ ಶಶಿ ತರೂರ್ : ಅಂತರ ಕಾಯ್ದುಕೊಂಡ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...