Homeಮುಖಪುಟಮಹಿಳೆಯರು ಎನ್‌ಡಿಎ ಪರೀಕ್ಷೆ ಬರೆಯಬಹುದು: ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು

ಮಹಿಳೆಯರು ಎನ್‌ಡಿಎ ಪರೀಕ್ಷೆ ಬರೆಯಬಹುದು: ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು

- Advertisement -
- Advertisement -

ಸೆಪ್ಟೆಂಬರ್ 5 ರಂದು ನಡೆಯಲಿರುವ ಎನ್‌ಡಿಎ (ರಾಷ್ಟ್ರೀಯ ರಕ್ಷಣಾ ಅಕಾಡೆಮಿ) ಪರೀಕ್ಷೆಗೆ ಮಹಿಳೆಯರು ಕುಳಿತುಕೊಳ್ಳಬಹುದು ಎಂದು ಸುಪ್ರೀಂಕೋರ್ಟ್ ಬುಧವಾರದಂದು ಮಹತ್ವದ ಮಧ್ಯಂತರ ಆದೇಶ ನೀಡಿದೆ. ನ್ಯಾಯಾಲಯದ ಈ ತೀರ್ಪು ಭಾರತದ ಸಶಸ್ತ್ರ ಪಡೆಗಳಲ್ಲಿ ಹೆಚ್ಚಿನ ಮಹಿಳೆಯರಿಗೆ ಸೇವೆ ಸಲ್ಲಿಸಲು ಅನುವು ಮಾಡಿಕೊಡುತ್ತದೆ.

ದೇಶದ ಸಶಸ್ತ್ರ ಪಡೆಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಸಮಾನ ಸೇವಾ ಅವಕಾಶಗಳ ವಿಷಯದಲ್ಲಿನ “ಮನಸ್ಥಿತಿಯ ಸಮಸ್ಯೆ”ಯನ್ನು ನ್ಯಾಯಾಲಯವು ದೂಷಿಸಿದೆ. ಜೊತೆಗೆ ಸರ್ಕಾರಕ್ಕೆ “ನೀವು ಇದನ್ನು ಉತ್ತಮವಾಗಿ ಬದಲಿಸಿ” ಎಂದು ಎಚ್ಚರಿಸಿದೆ.

ಇದನ್ನೂ ಓದಿ: ಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂಕೋರ್ಟ್ ತಾಕೀತು

“ಇದು ಮನಸ್ಥಿತಿಯ ವಿಷಯವಾಗಿದೆ. ಸರ್ಕಾರ ಅದನ್ನು ಬದಲಾಯಿಸಬೇಕು… ಆದೇಶಗಳನ್ನು ನೀಡುವಂತೆ ನಮ್ಮನ್ನು ಒತ್ತಾಯಿಸಬೇಡಿ. ಈ ನೀತಿ ನಿರ್ಧಾರವು ಲಿಂಗ ಆಧಾರಿತವಾಗಿದೆ. ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ನಾವು ಪ್ರತಿವಾದಿಗಳಿಗೆ ರಚನಾತ್ಮಕ ನೋಟವನ್ನು ನೀಡುತ್ತೇವೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

“ಇದು ಸೇನೆಯು ತಾನಾಗಿಯೇ ಏನನ್ನಾದರೂ ಮಾಡುವಂತೆ ಮನವೊಲಿಸುವ ಪ್ರಯತ್ನವಾಗಿದೆ… ನಾವು ಆದೇಶಗಳನ್ನು ನೀಡುವುದಕ್ಕಿಂತ ಸೈನ್ಯವೆ ಸ್ವತಃ ಏನನ್ನಾದರೂ ಮಾಡುವುದು ಉತ್ತಮ ಎಂದು ನಾನು ಭಾವಿಸುತ್ತೇನೆ” ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಕಳೆದ ವರ್ಷ ಫೆಬ್ರವರಿಯಲ್ಲಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರ ಮಹತ್ವದ ತೀರ್ಪು ಸೇರಿದಂತೆ ಈ ವಿಷಯದ ಕುರಿತು ವಿವಿಧ ತೀರ್ಪುಗಳ ಹೊರತಾಗಿಯೂ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನಿರಾಕರಿಸುತ್ತಿರುವುದಕ್ಕೆ ನ್ಯಾಯಮೂರ್ತಿ ಎಸ್‌ಕೆ ಕೌಲ್ ಮತ್ತು ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಅವರ ವಿಭಾಗೀಯ ಪೀಠವು ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಿರುದ್ಯೋಗದ ಸೈನ್ಯ ಮುಚ್ಚಿಹಾಕುವ ಹುನ್ನಾರ ಆರೋಪ: ನಾಲ್ಕು ವರ್ಷಗಳ ಪದವಿ ವ್ಯಾಸಂಗಕ್ಕೆ ವಿರೋಧ

ಸರ್ಕಾರದ ನೇಮಕಾತಿ ನೀತಿಯು ತಾರತಮ್ಯವಲ್ಲ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಲು ಹಲವು ಮಾರ್ಗಗಳಿವೆ ಎಂದು ಒಕ್ಕೂಟ ಸರ್ಕಾರ ವಾದಿಸಿತ್ತು.

NDA ಯಿಂದ ಅರ್ಹ ಮಹಿಳಾ ಅಭ್ಯರ್ಥಿಗಳನ್ನು ವರ್ಗೀಕರಿಸುವುದು ಅಸಂವಿಧಾನಿಕ ಮತ್ತು ಸಂಪೂರ್ಣವಾಗಿ ಅವರ ಲಿಂಗದ ಆಧಾರದ ಮೇಲೆ ಮಾಡಲಾಗಿದೆ ಎಂದು ವಾದಿಸಿ ಸಾರ್ವಜನಿ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇದಕ್ಕೆ ನ್ಯಾಯಾಲಯವು ಪ್ರತಿಕ್ರಿಯಿಸುತ್ತಿತ್ತು.

NDA ಪರೀಕ್ಷೆಗಳ ಮೂಲಕ ನೇಮಕಗೊಂಡ ಪುರುಷರು ಪ್ರಸ್ತುತ ಭಾರತೀಯ ಮಿಲಿಟರಿಯಲ್ಲಿ ಶಾಶ್ವತ ಕಾರ್ಯಾಚರಣೆಯಲ್ಲಿದ್ದಾರೆ. ಆದಾಗ್ಯೂ, ಮಹಿಳಾ ಅಭ್ಯರ್ಥಿಗಳನ್ನು ಈಗ ಅಲ್ಪಾವಧಿಯ ಸೇವಾ ಸಮಿತಿಯ ಅಧಿಕಾರಿಗಳಾಗಿ ನೇಮಿಸಿಕೊಳ್ಳಲಾಗುತ್ತದೆ, ನಂತರ ಅವರ ವೃತ್ತಿಜೀವನದಲ್ಲಿ ಶಾಶ್ವತ ಸಮಿತಿಯಲ್ಲಿ ಸೇರಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಮತ್ತೆ 147 ಮಹಿಳಾ ಎಸ್‌ಎಸ್‌ಸಿ ಅಧಿಕಾರಿಗಳಿಗೆ ಶಾಶ್ವತ ಆಯೋಗ ನೀಡಿದ ಭಾರತೀಯ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...