Homeಮುಖಪುಟಮಹಿಳೆಯರು ಎನ್‌ಡಿಎ ಪರೀಕ್ಷೆ ಬರೆಯಬಹುದು: ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು

ಮಹಿಳೆಯರು ಎನ್‌ಡಿಎ ಪರೀಕ್ಷೆ ಬರೆಯಬಹುದು: ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು

- Advertisement -
- Advertisement -

ಸೆಪ್ಟೆಂಬರ್ 5 ರಂದು ನಡೆಯಲಿರುವ ಎನ್‌ಡಿಎ (ರಾಷ್ಟ್ರೀಯ ರಕ್ಷಣಾ ಅಕಾಡೆಮಿ) ಪರೀಕ್ಷೆಗೆ ಮಹಿಳೆಯರು ಕುಳಿತುಕೊಳ್ಳಬಹುದು ಎಂದು ಸುಪ್ರೀಂಕೋರ್ಟ್ ಬುಧವಾರದಂದು ಮಹತ್ವದ ಮಧ್ಯಂತರ ಆದೇಶ ನೀಡಿದೆ. ನ್ಯಾಯಾಲಯದ ಈ ತೀರ್ಪು ಭಾರತದ ಸಶಸ್ತ್ರ ಪಡೆಗಳಲ್ಲಿ ಹೆಚ್ಚಿನ ಮಹಿಳೆಯರಿಗೆ ಸೇವೆ ಸಲ್ಲಿಸಲು ಅನುವು ಮಾಡಿಕೊಡುತ್ತದೆ.

ದೇಶದ ಸಶಸ್ತ್ರ ಪಡೆಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಸಮಾನ ಸೇವಾ ಅವಕಾಶಗಳ ವಿಷಯದಲ್ಲಿನ “ಮನಸ್ಥಿತಿಯ ಸಮಸ್ಯೆ”ಯನ್ನು ನ್ಯಾಯಾಲಯವು ದೂಷಿಸಿದೆ. ಜೊತೆಗೆ ಸರ್ಕಾರಕ್ಕೆ “ನೀವು ಇದನ್ನು ಉತ್ತಮವಾಗಿ ಬದಲಿಸಿ” ಎಂದು ಎಚ್ಚರಿಸಿದೆ.

ಇದನ್ನೂ ಓದಿ: ಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂಕೋರ್ಟ್ ತಾಕೀತು

“ಇದು ಮನಸ್ಥಿತಿಯ ವಿಷಯವಾಗಿದೆ. ಸರ್ಕಾರ ಅದನ್ನು ಬದಲಾಯಿಸಬೇಕು… ಆದೇಶಗಳನ್ನು ನೀಡುವಂತೆ ನಮ್ಮನ್ನು ಒತ್ತಾಯಿಸಬೇಡಿ. ಈ ನೀತಿ ನಿರ್ಧಾರವು ಲಿಂಗ ಆಧಾರಿತವಾಗಿದೆ. ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ನಾವು ಪ್ರತಿವಾದಿಗಳಿಗೆ ರಚನಾತ್ಮಕ ನೋಟವನ್ನು ನೀಡುತ್ತೇವೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

“ಇದು ಸೇನೆಯು ತಾನಾಗಿಯೇ ಏನನ್ನಾದರೂ ಮಾಡುವಂತೆ ಮನವೊಲಿಸುವ ಪ್ರಯತ್ನವಾಗಿದೆ… ನಾವು ಆದೇಶಗಳನ್ನು ನೀಡುವುದಕ್ಕಿಂತ ಸೈನ್ಯವೆ ಸ್ವತಃ ಏನನ್ನಾದರೂ ಮಾಡುವುದು ಉತ್ತಮ ಎಂದು ನಾನು ಭಾವಿಸುತ್ತೇನೆ” ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಕಳೆದ ವರ್ಷ ಫೆಬ್ರವರಿಯಲ್ಲಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರ ಮಹತ್ವದ ತೀರ್ಪು ಸೇರಿದಂತೆ ಈ ವಿಷಯದ ಕುರಿತು ವಿವಿಧ ತೀರ್ಪುಗಳ ಹೊರತಾಗಿಯೂ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನಿರಾಕರಿಸುತ್ತಿರುವುದಕ್ಕೆ ನ್ಯಾಯಮೂರ್ತಿ ಎಸ್‌ಕೆ ಕೌಲ್ ಮತ್ತು ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಅವರ ವಿಭಾಗೀಯ ಪೀಠವು ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಿರುದ್ಯೋಗದ ಸೈನ್ಯ ಮುಚ್ಚಿಹಾಕುವ ಹುನ್ನಾರ ಆರೋಪ: ನಾಲ್ಕು ವರ್ಷಗಳ ಪದವಿ ವ್ಯಾಸಂಗಕ್ಕೆ ವಿರೋಧ

ಸರ್ಕಾರದ ನೇಮಕಾತಿ ನೀತಿಯು ತಾರತಮ್ಯವಲ್ಲ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಲು ಹಲವು ಮಾರ್ಗಗಳಿವೆ ಎಂದು ಒಕ್ಕೂಟ ಸರ್ಕಾರ ವಾದಿಸಿತ್ತು.

NDA ಯಿಂದ ಅರ್ಹ ಮಹಿಳಾ ಅಭ್ಯರ್ಥಿಗಳನ್ನು ವರ್ಗೀಕರಿಸುವುದು ಅಸಂವಿಧಾನಿಕ ಮತ್ತು ಸಂಪೂರ್ಣವಾಗಿ ಅವರ ಲಿಂಗದ ಆಧಾರದ ಮೇಲೆ ಮಾಡಲಾಗಿದೆ ಎಂದು ವಾದಿಸಿ ಸಾರ್ವಜನಿ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇದಕ್ಕೆ ನ್ಯಾಯಾಲಯವು ಪ್ರತಿಕ್ರಿಯಿಸುತ್ತಿತ್ತು.

NDA ಪರೀಕ್ಷೆಗಳ ಮೂಲಕ ನೇಮಕಗೊಂಡ ಪುರುಷರು ಪ್ರಸ್ತುತ ಭಾರತೀಯ ಮಿಲಿಟರಿಯಲ್ಲಿ ಶಾಶ್ವತ ಕಾರ್ಯಾಚರಣೆಯಲ್ಲಿದ್ದಾರೆ. ಆದಾಗ್ಯೂ, ಮಹಿಳಾ ಅಭ್ಯರ್ಥಿಗಳನ್ನು ಈಗ ಅಲ್ಪಾವಧಿಯ ಸೇವಾ ಸಮಿತಿಯ ಅಧಿಕಾರಿಗಳಾಗಿ ನೇಮಿಸಿಕೊಳ್ಳಲಾಗುತ್ತದೆ, ನಂತರ ಅವರ ವೃತ್ತಿಜೀವನದಲ್ಲಿ ಶಾಶ್ವತ ಸಮಿತಿಯಲ್ಲಿ ಸೇರಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಮತ್ತೆ 147 ಮಹಿಳಾ ಎಸ್‌ಎಸ್‌ಸಿ ಅಧಿಕಾರಿಗಳಿಗೆ ಶಾಶ್ವತ ಆಯೋಗ ನೀಡಿದ ಭಾರತೀಯ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...