Homeಮುಖಪುಟಎನ್‌ಡಿಎ ಪ್ರಚಾರ ಸಭೆಗೆ 500ರೂ. ಹಣದ ಆಮಿಷ ನೀಡಿ ಕರೆದುಕೊಂಡು ಬಂದು ವಂಚನೆ: ಮಹಿಳೆಯರ ಆರೋಪ

ಎನ್‌ಡಿಎ ಪ್ರಚಾರ ಸಭೆಗೆ 500ರೂ. ಹಣದ ಆಮಿಷ ನೀಡಿ ಕರೆದುಕೊಂಡು ಬಂದು ವಂಚನೆ: ಮಹಿಳೆಯರ ಆರೋಪ

- Advertisement -
- Advertisement -

ಎನ್‌ಡಿಎ ಪ್ರಚಾರ ಸಭೆಗೆ 500ರೂ.ಹಣದ ಆಮಿಷ ನೀಡಿ ಕರೆದುಕೊಂಡು ಬಂದು ಹಣ ಕೊಡದೆ ವಂಚನೆ ಮಾಡಲಾಗಿದೆ ಎಂದು ಮಹಿಳೆಯರು ಮಹರಾಷ್ಟ್ರದ ಔರಂಗಾಬಾದ್‌ನಲ್ಲಿ ಆರೋಪಿಸಿದ್ದಾರೆ. ನವನೀತ್‌ರಾಣಾ ಮತ್ತು ಎನ್‌ಡಿಎಯ ಶಿವಸೇನಾ ಅಭ್ಯರ್ಥಿ ಸಂದೀಪನ್ ಭೂಮಾರೆ ಅವರ ರ್ಯಾಲಿಯಲ್ಲಿ ಭಾಗವಹಿಸಲು ಹಣದ ಆಮಿಷ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಮಹಿಳೆಯರ ಆಕ್ರೋಶದ ವಿಡಿಯೋ ವೈರಲ್‌ ಆಗಿದ್ದು, ವ್ಯಕ್ತಿಯೋರ್ವ ಕೇಳುತ್ತಿರುವ ಪ್ರಶ್ನೆಗೆ ಮಹಿಳೆಯರು ಉತ್ತರಿಸುತ್ತಾ, ನಮಗೆ ವಂಚನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಪ್ರಚಾರ ಸಭೆಯಲ್ಲಿ ಭಾಗವಹಿಸಿದರೆ ನಮಗೆ ತಲಾ ರೂ. 500 ನೀಡಲಾಗುವುದು ಎಂದು ಭರವಸೆ ನೀಡಿ ಇಲ್ಲಿಗೆ ಕರೆ ತರಲಾಗಿತ್ತು. ಆದರೆ ಸಭೆ ಮುಗಿದ ನಂತರ ನಮಗೆ ಹಣ ಕೊಡದೆ ವಂಚಿಸಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ವಿಡಿಯೋದಲ್ಲಿ ಪುರುಷರು ಸೇರಿದಂತೆ ನೂರಾರು ಮಂದಿ ಇರುವುದು ಸೆರೆಯಾಗಿದೆ. ಇವರೆಲ್ಲರನ್ನು ಹಣದ ಆಮಿಷ ನೀಡಿ ಕಾರ್ಯಕ್ರಮಕ್ಕೆ ಕರೆದುಕೊಂಡು ಬರಲಾಗಿದೆ ಎಂದು ಹೇಳಲಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಪತ್ರಕರ್ತ ಮುಹಮ್ಮದ್‌ ಆಕಿಫ್‌, ಔರಂಗಾಬಾದ್‌ನಲ್ಲಿ ಆಯೋಜಿಸಲಾಗಿದ್ದ ನವನೀತ್ ರಾಣಾ ಹಾಗೂ NDA ಶಿವಸೇನೆಯ ಅಭ್ಯರ್ಥಿ ಸಂದೀಪನ್ ಭೂಮರೆ ಅವರ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರೆ ತಲಾ 500 ಕೊಡುವುದಾಗಿ ಹೇಳಲಾಗಿತ್ತು. ಆದರೆ ಎಂದಿನಂತೆ ಬಡ ಜನರನ್ನು ಮೂರ್ಖರನ್ನಾಗಿಸಲಾಗಿದೆ, ಅವರಿಗೆ ನಯಾಪೈಸೆ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಈ ಕುರಿತ ವಿಡಿಯೋವನ್ನು ಪತ್ರಕರ್ತ ಮೊಹಮ್ಮದ್‌ ಝಬೈರ್‌ ಕೂಡ ಎಕ್ಸ್‌ನಲ್ಲಿ ಮರು ಹಂಚಿಕೊಂಡಿದ್ದಾರೆ. ಹಣದ ಆಮಿಷ ನೀಡಿ ಜನರನ್ನು ಚುನಾವಣಾ ಪ್ರಚಾರಕ್ಕೆ ಕರೆದುಕೊಂಡು ಬಂದಿರುವುದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟವಾದ ಉಲ್ಲಂಘನೆಯಾಗಿದೆ. ಇದೀಗ ಸ್ವತಃ ಮಹಿಳೆಯರೇ ಆರೋಪ ಮಾಡುತ್ತಿರುವ ಹಿನ್ನೆಲೆ ಚುನಾವಣಾ ಆಯೋಗ ಈ ಬಗ್ಗೆ ಯಾವ ಕ್ರಮವನ್ನು ತೆಗೆದುಕೊಳ್ಳುತ್ತೆ ಎಂದು ಕಾದು ನೋಡಬೇಕಿದೆ.

ಔರಂಗಾಬಾದ್‌ನಲ್ಲಿ 4ನೇ ಹಂತದಲ್ಲಿ ಮೇ.13ರಂದು ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. ನಿನ್ನೆ ಕ್ಷೇತ್ರದಲ್ಲಿ ನಾಲ್ಕನೇ ಹಂತದ ಚುನಾವಣಾ ಪ್ರಚಾರದ ಕೊನೆಯ ದಿನವಾಗಿತ್ತು.

 

ಇದನ್ನು ಓದಿ: ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಸುವರ್ಣ ನ್ಯೂಸ್, ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...