Homeಮುಖಪುಟವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

- Advertisement -
- Advertisement -

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಅಖಿಲ ಭಾರತೀಯ ಸಂತ ಪರಿಷತ್ ಅಧ್ಯಕ್ಷರಾಗಿರುವ ವಿವಾದಿತ ಯತಿ ನರಸಿಂಗಾನಂದ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗವು (NCW) ಆಗಸ್ಟ್‌‌ 7 ರ ಶನಿವಾರದಂದು ಉತ್ತರ ಪ್ರದೇಶ ಪೊಲೀಸರಿಗೆ ಒತ್ತಾಯಿಸಿದೆ.

ಮಹಿಳೆಯರನ್ನು ಅತೀ ಕೀಳಾಗಿ ಬಿಂಬಿಸಿ ಹೇಳಿಕೆ ನೀಡುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರ ವಿರುದ್ದ ಕ್ರಮ ಕೈಗೊಳ್ಳುವಂತೆ ಎನ್‌ಸಿಡಬ್ಲ್ಯೂ ಪೊಲೀಸರಿಗೆ ಪತ್ರ ಬರೆದಿದೆ. ನರಸಿಂಗಾನಂದ್, “ಚಿತ್ರರಂಗದಲ್ಲಿ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ವೇಶ್ಯಾವಾಟಿಕೆಯತ್ತ ಆಕರ್ಷಿಸುತ್ತಿದ್ದಾರೆ” ಎಂದು ವಿಡಿಯೊದಲ್ಲಿ ಹೇಳಿದ್ದರು.

ಇದನ್ನೂ ಓದಿ: ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸ; ಆರೋಪಿಗಳು ನರಸಿಂಗಾನಂದ್‌ ಆಪ್ತರು?

ಉತ್ತರ ಪ್ರದೇಶ ಡಿಜಿಪಿ ಮುಕುಲ್ ಗೋಯೆಲ್‌ಗೆ ಎನ್‌ಸಿಡಬ್ಲ್ಯೂ ಬರೆದ ಪತ್ರದಲ್ಲಿ, ಭಾರತೀಯ ದಂಡ ಸಂಹಿತೆಯ ಸಂಬಂಧಿತ ಆರೋಪಗಳ ಅಡಿಯಲ್ಲಿ ನರಸಿಂಗಾನಂದ್‌ ವಿರುದ್ಧ ಶೀಘ್ರವೆ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದೆ.

“ಆಯೋಗವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌‌ ಕುರಿತು ಮತ್ತು ನರಸಿಂಗಾನಂದ್‌ ಮಹಿಳೆಯರ ವಿರುದ್ಧ ಮಾಡಿದ ಟೀಕೆಗಳಿಂದ ಗೊಂದಲಕ್ಕೊಳಗಾಗಿದೆ. ಆದ್ದರಿಂದ ನೀವು ನರಸಿಂಗಾನಂದ್‌ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಆರೋಪಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಬೇಕು” ಎಂದು ಹೇಳಿದೆ.

ವಿವಾದಾತ್ಮ ಹೇಳಿಕೆ ಇದೇ ಮೊದಲೇನಲ್ಲ

ನರಸಿಂಗಾನಂದ್ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಮತ್ತು ಕೋಮುವಾದಿ ಟೀಕೆಗಳನ್ನು ಮಾಡುವುದು ಇದೇ ಮೊದಲಲ್ಲ.ದಾಸ್ನಾ ದೇವಾಲಯದ ಅರ್ಚಕರೂ ಆಗಿರುವ ನರಸಿಂಗಾನಂದ್ ಈ ಹಿಂದೆ ಮುಸ್ಲಿಮರ ವಿರುದ್ಧ ಯುದ್ಧಕ್ಕೆ ಕರೆ ನೀಡಿದ್ದರು.

ಇದನ್ನೂ ಓದಿ: ಬಾರಬಂಕಿ ಮಸೀದಿ ಧ್ವಂಸದ ಸಾಕ್ಷ್ಯಚಿತ್ರ: ದಿ ವೈರ್‌ ಮೇಲೆ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌

ಇಷ್ಟೆ ಅಲ್ಲದೆ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಕೂಡಾ ನರಸಿಂಗಾನಂದ್ ಕೈವಾಡವಿದೆ ಎಂದು ದಿವೈರ್‌ ತನಿಖಾ ವರದಿ ಮಾಡಿತ್ತು. ಖ್ಯಾತ ಪತ್ರಕರ್ತ ರವೀಶ್ ಕುಮಾರ್‌ಗೆ ಕೊಲೆ ಬೆದರಿಕೆಯೊಡ್ಡಿದ ಆರೋಪಿಯ ಹಿಂದೆ ನರಸಿಂಗಾನಂದ್ ಕೈವಾಡವಿದೆ ಎನ್ನಲಾಗಿದೆ.

ಮಾರ್ಚ್ 12 ರಂದು ಗಾಜಿಯಾಬಾದ್‌ನ ದಾಸನ ದೇವಿ ಮಂದಿರಕ್ಕೆ ಕುಡಿಯುವ ನೀರಿಗೆ ತೆರಳಿದ್ದ ಅಪ್ರಾಪ್ತ ಮುಸ್ಲಿಂ ಬಾಲಕನನ್ನು ಭೀಕರವಾಗಿ ಥಳಿಸಿದ್ದ ಘಟನೆಯನ್ನು ನರಸಿಂಗಾನಂದ್ ಸಮರ್ಥಿಸಿಕೊಂಡಿದ್ದರು. ಆರೋಪಿಯನ್ನು ತನ್ನ ಅನುಯಾಯಿ ಎಂದಿದ್ದ ಅವರು ’ಅತಿಕ್ರಮಣಕಾರನಿಗೆ ಸೂಕ್ತ ಉತ್ತರ ನೀಡಿದ್ದಾರೆ’ ಎಂದು ಶ್ಲಾಘಿಸಿದ್ದರು.

ಇಷ್ಟೇ ಅಲ್ಲದೆ ದೆಹಲಿ ಗಲಭೆಯ ನಂತರ ಕೂಡಾ ಇವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು. ಗಲಭೆಯ ನಂತರ ಅವರು, ‘‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’’ ಎಂದು ಬಹಿರಂಗವಾಗಿ ಭಯೋತ್ಪಾದನೆಗೆ ಕರೆ ನೀಡಿದ್ದರು.

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...