Homeಮುಖಪುಟಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಈ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅಧಿಕಾರಿಯ ಬದಲು ಬಿಜೆಪಿ ಮುಖಂಡನೊಬ್ಬ ಪ್ರಮಾಣವಚನ ಬೋಧಿಸಿರುವುದು ಟೀಕೆಗೆ ಗುರಿಯಾಗಿದೆ.

- Advertisement -
- Advertisement -

ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದ ಸುಮಾರು ಹದಿನೈದು ಮಹಿಳೆಯರ ಬದಲಿಗೆ ಅವರ ಗಂಡಂದಿರು ಪ್ರಮಾಣ ವಚನ ಸ್ವೀಕರಿಸಿರುವ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿರುವ ಕುರಿತು ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಧಾರ್ ಮತ್ತು ದಾಮೋಹ್ ಜಿಲ್ಲೆಗಳಲ್ಲಿ ಪಂಚ್ ಹಾಗೂ ಸರಪಂಚ್ ಆಗಿ ಆಯ್ಕೆಯಾಗಿದ್ದ ಕನಿಷ್ಠ ಹದಿನೈದು ಮಹಿಳೆಯರು ಸಭಿಕರ ಸ್ಥಾನದಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರೆ ಅವರ ಗಂಡಂದಿರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಕ್ಕೆ ಅಧಿಕಾರಿಗಳೇ ಅವಕಾಶ ನೀಡಿದ್ದಾರೆಂಬ ಆರೋಪಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಘಟನೆಯು ಚುನಾವಣಾ ರಾಜಕೀಯದಲ್ಲಿ ಮಹಿಳಾ ಮೀಸಲಾತಿಯನ್ನು ಅಪಹಾಸ್ಯ ಮಾಡುತ್ತಿವೆ. ಅದಕ್ಕಿಂತ ಹೆಚ್ಚಾಗಿ, ಧಾರ್‌ನಲ್ಲಿ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಪ್ರಮಾಣ ವಚನ ಬೋಧಿಸುತ್ತಿರುವಾಗ ನಿಯೋಜಿತ ಸರ್ಕಾರಿ ಅಧಿಕಾರಿ ಪಕ್ಕದಲ್ಲೇ ಇದ್ದದ್ದು ಟೀಕೆಗೆ ಗುರಿಯಾಗಿದೆ.

ಈ ಸುದ್ದಿ ಹೊರಬಿದ್ದ ಬಳಿಕ ದಾಮೋಹ್‌ನಲ್ಲಿ ಪಂಚಾಯತ್ ಕಾರ್ಯದರ್ಶಿಯನ್ನು ಅಮಾನತುಗೊಳಿಸಲಾಯಿತು. ಧಾರ್ ಜಿಲ್ಲೆಯ ಸುಂದ್ರೇಲ್‌‌ ಗ್ರಾಮ ಪಂಚಾಯತ್ ಮತ್ತು ದಾಮೋಹ್‌ನ ಗೈಸಾಬಾದ್ ಪಂಚಾಯತ್‌ನಲ್ಲಿ ಘಟನೆಗಳು ನಡೆದಿವೆ.

ಗುರುವಾರ ಸುಂದ್ರೇಲ್‌ನಲ್ಲಿ, ಸ್ಥಳೀಯ ಬಿಜೆಪಿ ಮುಖಂಡ ರಾಧೇಶ್ಯಾಮ್ ಕಾಸರವಾಡಿಯ ಅವರು ವೇದಿಕೆಯ ಮೇಲೆ ಪ್ರಮಾಣ ವಚನ ಬೋಧಿಸುತ್ತಿರುವಾಗ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ರಾಧಾಬಾಯಿ, ಲಕ್ಷ್ಮೀಬಾಯಿ ಮತ್ತು ಕಿರಣ್ ಬಾಯಿ ಪ್ರೇಕ್ಷಕರಾಗಿ ಕುಳಿತುಕೊಂಡಿದ್ದರು. ಇವರ ಬದಲಿಗೆ ಲಖನ್, ದಿಲೀಪ್ ಮತ್ತು ಜೀವನ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ವೇದಿಕೆಯ ದೂರದ ಮೂಲೆಯಲ್ಲಿ ನಿಂತು ಐವರು ಮಹಿಳೆಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮೇಲಧಿಕಾರಿಗಳು ಇದನ್ನು ‘ಕಾರ್ಯವಿಧಾನದ ಲೋಪ’ ಎಂದು ಕರೆದಿದ್ದಾರೆ. “ಮಹಿಳೆಯರು ದೂರು ನೀಡಿದರೆ, ಅವರ ಹಕ್ಕುಗಳನ್ನು ಪ್ರತಿಪಾದಿಸಲಾಗುವುದು” ಎಂದಿದ್ದಾರೆ.

“ನಮಗೆ ವಿಷಯ ತಿಳಿಯಿತು. ಘಟನೆಯನ್ನು ಗಂಭೀರವಾಗಿ ತೆಗೆದಕೊಂಡಿದ್ದೇವೆ. ಇದು ಕಾರ್ಯವಿಧಾನದ ಲೋಪವಾಗಿದೆ” ಎಂದು ಧಾರ್ ಜಿಲ್ಲಾ ಪಂಚಾಯತ್ ಸಿಇಒ ಕೆ.ಎಲ್.ಮೀನಾ ಅವರು ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದ್ದಾರೆ.

ಸುಂದ್ರೇಲ್ ಗ್ರಾಮ ಪಂಚಾಯತ್ ಕಾರ್ಯದರ್ಶಿ ಬಾದಮ್ ಸಿಂಗ್ ನಿಂಗ್ವಾಲ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಸ್ಥಳೀಯ ರಾಜಕಾರಣಿಯೊಬ್ಬರು ಹೇಗೆ ಪ್ರಮಾಣ ವಚನ ಬೋಧಿಸಿದರು ಎಂದು ನಾವು ಅವರನ್ನು ಕೇಳಿದ್ದೇವೆ ಎಂದು ಮೀನಾ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

ಶೋಕಾಸ್ ನೋಟೀಸ್ ಕುರಿತು ಪ್ರತಿಕ್ರಿಯೆ ನೀಡಿರುವ ನಿಂಗ್ವಾಲ್‌, “ಸ್ಥಳೀಯ ನಾಯಕನೇ ಪ್ರಮಾಣ ವಚನ ಬೋಧಿಸಬೇಕೆಂದು ಪ್ರೇಕ್ಷಕರು ಒತ್ತಾಯಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಹಳ್ಳಿಯ ಗಂಡಸರೆಲ್ಲರೂ ಮಹಿಳೆಯರು ಪ್ರಮಾಣ ವಚನ ಸ್ವೀಕರಿಸುವುದನ್ನು ಒಪ್ಪಲು ಸಿದ್ಧರಿರಲಿಲ್ಲ. ಕೌಟುಂಬಿಕ ಪದ್ಧತಿಯನ್ನು ಮೀರಲು ಅವರು ಮುಂದಾಗಲಿಲ್ಲ” ಎಂದಿದ್ದಾರೆ.

“ಪಂಚಾಯತ್ ಚಟುವಟಿಕೆಗಳಲ್ಲಿ ಅವರ ಗಂಡಂದಿರು ಭಾಗವಹಿಸಲು ನಾವು ಅನುಮತಿಸುವುದಿಲ್ಲ ಎಂಬ ಭರವಸೆಯನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದೇನೆ” ಎಂದಿದ್ದಾರೆ.

“ಯಾವುದೇ ವಿಜೇತ ಅಭ್ಯರ್ಥಿಯು ಆಕ್ಷೇಪಣೆಯನ್ನು ಎತ್ತಿದರೆ ಅಥವಾ ಅವರ ಹಕ್ಕುಗಳ ಉಲ್ಲಂಘನೆಯ ಬಗ್ಗೆ ದೂರು ಸಲ್ಲಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಗೆದ್ದ ಅಭ್ಯರ್ಥಿಗಳಿಗೆ ಅವರ ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ನಾವು ತರಬೇತಿಗಳನ್ನು ಆಯೋಜಿಸುತ್ತಿದ್ದೇವೆ” ಎಂದು ಅಧಿಕಾರಿ ಮೀನಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...