Homeಮುಖಪುಟಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಈ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅಧಿಕಾರಿಯ ಬದಲು ಬಿಜೆಪಿ ಮುಖಂಡನೊಬ್ಬ ಪ್ರಮಾಣವಚನ ಬೋಧಿಸಿರುವುದು ಟೀಕೆಗೆ ಗುರಿಯಾಗಿದೆ.

- Advertisement -
- Advertisement -

ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದ ಸುಮಾರು ಹದಿನೈದು ಮಹಿಳೆಯರ ಬದಲಿಗೆ ಅವರ ಗಂಡಂದಿರು ಪ್ರಮಾಣ ವಚನ ಸ್ವೀಕರಿಸಿರುವ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿರುವ ಕುರಿತು ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಧಾರ್ ಮತ್ತು ದಾಮೋಹ್ ಜಿಲ್ಲೆಗಳಲ್ಲಿ ಪಂಚ್ ಹಾಗೂ ಸರಪಂಚ್ ಆಗಿ ಆಯ್ಕೆಯಾಗಿದ್ದ ಕನಿಷ್ಠ ಹದಿನೈದು ಮಹಿಳೆಯರು ಸಭಿಕರ ಸ್ಥಾನದಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರೆ ಅವರ ಗಂಡಂದಿರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಕ್ಕೆ ಅಧಿಕಾರಿಗಳೇ ಅವಕಾಶ ನೀಡಿದ್ದಾರೆಂಬ ಆರೋಪಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಘಟನೆಯು ಚುನಾವಣಾ ರಾಜಕೀಯದಲ್ಲಿ ಮಹಿಳಾ ಮೀಸಲಾತಿಯನ್ನು ಅಪಹಾಸ್ಯ ಮಾಡುತ್ತಿವೆ. ಅದಕ್ಕಿಂತ ಹೆಚ್ಚಾಗಿ, ಧಾರ್‌ನಲ್ಲಿ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಪ್ರಮಾಣ ವಚನ ಬೋಧಿಸುತ್ತಿರುವಾಗ ನಿಯೋಜಿತ ಸರ್ಕಾರಿ ಅಧಿಕಾರಿ ಪಕ್ಕದಲ್ಲೇ ಇದ್ದದ್ದು ಟೀಕೆಗೆ ಗುರಿಯಾಗಿದೆ.

ಈ ಸುದ್ದಿ ಹೊರಬಿದ್ದ ಬಳಿಕ ದಾಮೋಹ್‌ನಲ್ಲಿ ಪಂಚಾಯತ್ ಕಾರ್ಯದರ್ಶಿಯನ್ನು ಅಮಾನತುಗೊಳಿಸಲಾಯಿತು. ಧಾರ್ ಜಿಲ್ಲೆಯ ಸುಂದ್ರೇಲ್‌‌ ಗ್ರಾಮ ಪಂಚಾಯತ್ ಮತ್ತು ದಾಮೋಹ್‌ನ ಗೈಸಾಬಾದ್ ಪಂಚಾಯತ್‌ನಲ್ಲಿ ಘಟನೆಗಳು ನಡೆದಿವೆ.

ಗುರುವಾರ ಸುಂದ್ರೇಲ್‌ನಲ್ಲಿ, ಸ್ಥಳೀಯ ಬಿಜೆಪಿ ಮುಖಂಡ ರಾಧೇಶ್ಯಾಮ್ ಕಾಸರವಾಡಿಯ ಅವರು ವೇದಿಕೆಯ ಮೇಲೆ ಪ್ರಮಾಣ ವಚನ ಬೋಧಿಸುತ್ತಿರುವಾಗ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ರಾಧಾಬಾಯಿ, ಲಕ್ಷ್ಮೀಬಾಯಿ ಮತ್ತು ಕಿರಣ್ ಬಾಯಿ ಪ್ರೇಕ್ಷಕರಾಗಿ ಕುಳಿತುಕೊಂಡಿದ್ದರು. ಇವರ ಬದಲಿಗೆ ಲಖನ್, ದಿಲೀಪ್ ಮತ್ತು ಜೀವನ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ವೇದಿಕೆಯ ದೂರದ ಮೂಲೆಯಲ್ಲಿ ನಿಂತು ಐವರು ಮಹಿಳೆಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮೇಲಧಿಕಾರಿಗಳು ಇದನ್ನು ‘ಕಾರ್ಯವಿಧಾನದ ಲೋಪ’ ಎಂದು ಕರೆದಿದ್ದಾರೆ. “ಮಹಿಳೆಯರು ದೂರು ನೀಡಿದರೆ, ಅವರ ಹಕ್ಕುಗಳನ್ನು ಪ್ರತಿಪಾದಿಸಲಾಗುವುದು” ಎಂದಿದ್ದಾರೆ.

“ನಮಗೆ ವಿಷಯ ತಿಳಿಯಿತು. ಘಟನೆಯನ್ನು ಗಂಭೀರವಾಗಿ ತೆಗೆದಕೊಂಡಿದ್ದೇವೆ. ಇದು ಕಾರ್ಯವಿಧಾನದ ಲೋಪವಾಗಿದೆ” ಎಂದು ಧಾರ್ ಜಿಲ್ಲಾ ಪಂಚಾಯತ್ ಸಿಇಒ ಕೆ.ಎಲ್.ಮೀನಾ ಅವರು ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದ್ದಾರೆ.

ಸುಂದ್ರೇಲ್ ಗ್ರಾಮ ಪಂಚಾಯತ್ ಕಾರ್ಯದರ್ಶಿ ಬಾದಮ್ ಸಿಂಗ್ ನಿಂಗ್ವಾಲ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಸ್ಥಳೀಯ ರಾಜಕಾರಣಿಯೊಬ್ಬರು ಹೇಗೆ ಪ್ರಮಾಣ ವಚನ ಬೋಧಿಸಿದರು ಎಂದು ನಾವು ಅವರನ್ನು ಕೇಳಿದ್ದೇವೆ ಎಂದು ಮೀನಾ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

ಶೋಕಾಸ್ ನೋಟೀಸ್ ಕುರಿತು ಪ್ರತಿಕ್ರಿಯೆ ನೀಡಿರುವ ನಿಂಗ್ವಾಲ್‌, “ಸ್ಥಳೀಯ ನಾಯಕನೇ ಪ್ರಮಾಣ ವಚನ ಬೋಧಿಸಬೇಕೆಂದು ಪ್ರೇಕ್ಷಕರು ಒತ್ತಾಯಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಹಳ್ಳಿಯ ಗಂಡಸರೆಲ್ಲರೂ ಮಹಿಳೆಯರು ಪ್ರಮಾಣ ವಚನ ಸ್ವೀಕರಿಸುವುದನ್ನು ಒಪ್ಪಲು ಸಿದ್ಧರಿರಲಿಲ್ಲ. ಕೌಟುಂಬಿಕ ಪದ್ಧತಿಯನ್ನು ಮೀರಲು ಅವರು ಮುಂದಾಗಲಿಲ್ಲ” ಎಂದಿದ್ದಾರೆ.

“ಪಂಚಾಯತ್ ಚಟುವಟಿಕೆಗಳಲ್ಲಿ ಅವರ ಗಂಡಂದಿರು ಭಾಗವಹಿಸಲು ನಾವು ಅನುಮತಿಸುವುದಿಲ್ಲ ಎಂಬ ಭರವಸೆಯನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದೇನೆ” ಎಂದಿದ್ದಾರೆ.

“ಯಾವುದೇ ವಿಜೇತ ಅಭ್ಯರ್ಥಿಯು ಆಕ್ಷೇಪಣೆಯನ್ನು ಎತ್ತಿದರೆ ಅಥವಾ ಅವರ ಹಕ್ಕುಗಳ ಉಲ್ಲಂಘನೆಯ ಬಗ್ಗೆ ದೂರು ಸಲ್ಲಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಗೆದ್ದ ಅಭ್ಯರ್ಥಿಗಳಿಗೆ ಅವರ ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ನಾವು ತರಬೇತಿಗಳನ್ನು ಆಯೋಜಿಸುತ್ತಿದ್ದೇವೆ” ಎಂದು ಅಧಿಕಾರಿ ಮೀನಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...