Homeಮುಖಪುಟಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಈ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅಧಿಕಾರಿಯ ಬದಲು ಬಿಜೆಪಿ ಮುಖಂಡನೊಬ್ಬ ಪ್ರಮಾಣವಚನ ಬೋಧಿಸಿರುವುದು ಟೀಕೆಗೆ ಗುರಿಯಾಗಿದೆ.

- Advertisement -
- Advertisement -

ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದ ಸುಮಾರು ಹದಿನೈದು ಮಹಿಳೆಯರ ಬದಲಿಗೆ ಅವರ ಗಂಡಂದಿರು ಪ್ರಮಾಣ ವಚನ ಸ್ವೀಕರಿಸಿರುವ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿರುವ ಕುರಿತು ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಧಾರ್ ಮತ್ತು ದಾಮೋಹ್ ಜಿಲ್ಲೆಗಳಲ್ಲಿ ಪಂಚ್ ಹಾಗೂ ಸರಪಂಚ್ ಆಗಿ ಆಯ್ಕೆಯಾಗಿದ್ದ ಕನಿಷ್ಠ ಹದಿನೈದು ಮಹಿಳೆಯರು ಸಭಿಕರ ಸ್ಥಾನದಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರೆ ಅವರ ಗಂಡಂದಿರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಕ್ಕೆ ಅಧಿಕಾರಿಗಳೇ ಅವಕಾಶ ನೀಡಿದ್ದಾರೆಂಬ ಆರೋಪಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಘಟನೆಯು ಚುನಾವಣಾ ರಾಜಕೀಯದಲ್ಲಿ ಮಹಿಳಾ ಮೀಸಲಾತಿಯನ್ನು ಅಪಹಾಸ್ಯ ಮಾಡುತ್ತಿವೆ. ಅದಕ್ಕಿಂತ ಹೆಚ್ಚಾಗಿ, ಧಾರ್‌ನಲ್ಲಿ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಪ್ರಮಾಣ ವಚನ ಬೋಧಿಸುತ್ತಿರುವಾಗ ನಿಯೋಜಿತ ಸರ್ಕಾರಿ ಅಧಿಕಾರಿ ಪಕ್ಕದಲ್ಲೇ ಇದ್ದದ್ದು ಟೀಕೆಗೆ ಗುರಿಯಾಗಿದೆ.

ಈ ಸುದ್ದಿ ಹೊರಬಿದ್ದ ಬಳಿಕ ದಾಮೋಹ್‌ನಲ್ಲಿ ಪಂಚಾಯತ್ ಕಾರ್ಯದರ್ಶಿಯನ್ನು ಅಮಾನತುಗೊಳಿಸಲಾಯಿತು. ಧಾರ್ ಜಿಲ್ಲೆಯ ಸುಂದ್ರೇಲ್‌‌ ಗ್ರಾಮ ಪಂಚಾಯತ್ ಮತ್ತು ದಾಮೋಹ್‌ನ ಗೈಸಾಬಾದ್ ಪಂಚಾಯತ್‌ನಲ್ಲಿ ಘಟನೆಗಳು ನಡೆದಿವೆ.

ಗುರುವಾರ ಸುಂದ್ರೇಲ್‌ನಲ್ಲಿ, ಸ್ಥಳೀಯ ಬಿಜೆಪಿ ಮುಖಂಡ ರಾಧೇಶ್ಯಾಮ್ ಕಾಸರವಾಡಿಯ ಅವರು ವೇದಿಕೆಯ ಮೇಲೆ ಪ್ರಮಾಣ ವಚನ ಬೋಧಿಸುತ್ತಿರುವಾಗ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ರಾಧಾಬಾಯಿ, ಲಕ್ಷ್ಮೀಬಾಯಿ ಮತ್ತು ಕಿರಣ್ ಬಾಯಿ ಪ್ರೇಕ್ಷಕರಾಗಿ ಕುಳಿತುಕೊಂಡಿದ್ದರು. ಇವರ ಬದಲಿಗೆ ಲಖನ್, ದಿಲೀಪ್ ಮತ್ತು ಜೀವನ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ವೇದಿಕೆಯ ದೂರದ ಮೂಲೆಯಲ್ಲಿ ನಿಂತು ಐವರು ಮಹಿಳೆಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮೇಲಧಿಕಾರಿಗಳು ಇದನ್ನು ‘ಕಾರ್ಯವಿಧಾನದ ಲೋಪ’ ಎಂದು ಕರೆದಿದ್ದಾರೆ. “ಮಹಿಳೆಯರು ದೂರು ನೀಡಿದರೆ, ಅವರ ಹಕ್ಕುಗಳನ್ನು ಪ್ರತಿಪಾದಿಸಲಾಗುವುದು” ಎಂದಿದ್ದಾರೆ.

“ನಮಗೆ ವಿಷಯ ತಿಳಿಯಿತು. ಘಟನೆಯನ್ನು ಗಂಭೀರವಾಗಿ ತೆಗೆದಕೊಂಡಿದ್ದೇವೆ. ಇದು ಕಾರ್ಯವಿಧಾನದ ಲೋಪವಾಗಿದೆ” ಎಂದು ಧಾರ್ ಜಿಲ್ಲಾ ಪಂಚಾಯತ್ ಸಿಇಒ ಕೆ.ಎಲ್.ಮೀನಾ ಅವರು ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದ್ದಾರೆ.

ಸುಂದ್ರೇಲ್ ಗ್ರಾಮ ಪಂಚಾಯತ್ ಕಾರ್ಯದರ್ಶಿ ಬಾದಮ್ ಸಿಂಗ್ ನಿಂಗ್ವಾಲ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಸ್ಥಳೀಯ ರಾಜಕಾರಣಿಯೊಬ್ಬರು ಹೇಗೆ ಪ್ರಮಾಣ ವಚನ ಬೋಧಿಸಿದರು ಎಂದು ನಾವು ಅವರನ್ನು ಕೇಳಿದ್ದೇವೆ ಎಂದು ಮೀನಾ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

ಶೋಕಾಸ್ ನೋಟೀಸ್ ಕುರಿತು ಪ್ರತಿಕ್ರಿಯೆ ನೀಡಿರುವ ನಿಂಗ್ವಾಲ್‌, “ಸ್ಥಳೀಯ ನಾಯಕನೇ ಪ್ರಮಾಣ ವಚನ ಬೋಧಿಸಬೇಕೆಂದು ಪ್ರೇಕ್ಷಕರು ಒತ್ತಾಯಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಹಳ್ಳಿಯ ಗಂಡಸರೆಲ್ಲರೂ ಮಹಿಳೆಯರು ಪ್ರಮಾಣ ವಚನ ಸ್ವೀಕರಿಸುವುದನ್ನು ಒಪ್ಪಲು ಸಿದ್ಧರಿರಲಿಲ್ಲ. ಕೌಟುಂಬಿಕ ಪದ್ಧತಿಯನ್ನು ಮೀರಲು ಅವರು ಮುಂದಾಗಲಿಲ್ಲ” ಎಂದಿದ್ದಾರೆ.

“ಪಂಚಾಯತ್ ಚಟುವಟಿಕೆಗಳಲ್ಲಿ ಅವರ ಗಂಡಂದಿರು ಭಾಗವಹಿಸಲು ನಾವು ಅನುಮತಿಸುವುದಿಲ್ಲ ಎಂಬ ಭರವಸೆಯನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದೇನೆ” ಎಂದಿದ್ದಾರೆ.

“ಯಾವುದೇ ವಿಜೇತ ಅಭ್ಯರ್ಥಿಯು ಆಕ್ಷೇಪಣೆಯನ್ನು ಎತ್ತಿದರೆ ಅಥವಾ ಅವರ ಹಕ್ಕುಗಳ ಉಲ್ಲಂಘನೆಯ ಬಗ್ಗೆ ದೂರು ಸಲ್ಲಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಗೆದ್ದ ಅಭ್ಯರ್ಥಿಗಳಿಗೆ ಅವರ ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ನಾವು ತರಬೇತಿಗಳನ್ನು ಆಯೋಜಿಸುತ್ತಿದ್ದೇವೆ” ಎಂದು ಅಧಿಕಾರಿ ಮೀನಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...