Homeಮುಖಪುಟನಾಳೆ ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ನಾಳೆ ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ದೇಶದ ವಿವಿಧ ಮಹಿಳಾ ರೈತ ಸಂಘಟನೆಗಳು ಸೇರಿ ಜನವರಿ 18 ಅನ್ನು (ಸೋಮವಾರ) ರೈತ ಮಹಿಳಾ ದಿನಾಚರಣೆ ಆಚರಿಸಲು ನಿರ್ಧರಿಸಿವೆ.

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬಿರುಸು ನೀಡುವ ಹಿನ್ನಲೆಯಲ್ಲಿ ಸೋಮವಾರ ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ತೀರ್ಮಾನಿಸಿದೆ.

ಕಳೆದ 54 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿಯೂ ಮಹಿಳಾ ರೈತರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ. ಈಗಾಗಲೇ ನೂರಾರು ರೈತ ಪುತ್ರಿಯರು ಟ್ರಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದು, ಸಾಲ ಮನ್ನಾ, ಆರೋಗ್ಯ ಸೇವೆಗಳು, ಕಿರು ಬಂಡವಾಳ ಸಂಸ್ಥೆಗಳ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ರೈತ ಹೋರಾಟಕ್ಕೆ ಬೆಂಬಲ ಸೂಚಿಸುವುದು ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ನಾಳೆ ಹೋರಾಟ ನಡೆಸಲಿದ್ದಾರೆ.

ಈ ಜಾಥದಲ್ಲಿ ಭಾರತೀಯ ಮಹಿಳಾ ಒಕ್ಕೂಟ (ಎನ್ಎಫ್ಐಡಬ್ಯೂ), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (ಎಐಡಿಡಬ್ಲ್ಯೂಎ), ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ (ಎಐಪಿಡಬ್ಲ್ಯೂಎ) ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಭಾಗವಹಿಸುತ್ತಿದ್ದಾರೆ.

ಎಐಡಿಡಬ್ಲ್ಯೂಎ ಅಧ್ಯಕ್ಷರಾದ ಮರಿಯಂ ದವಾಲೆ ಅವರು, ’ನಾವು ದೇಶದಾದ್ಯಂತ ಪ್ರತಿಭಟನೆಯನ್ನು ಆಯೋಜಸುತ್ತಿದ್ದೇವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಹಿಳಾ ಪ್ರತಿಭಟನಾಕಾರರು ರಾಜ್‌ಭವನದತ್ತ ಮೆರವಣಿಗೆ ನಡೆಸಲಿದ್ದಾರೆ’ ಎಂದಿದ್ದಾರೆ.

ಅಖಿಲ ಭಾರತ ಕಿಸಾನ್‌ ಸಭಾದ (ಎಐಕೆಎಸ್) ಅಧ್ಯಕ್ಷರಾದ ಅಶೋಕ್‌ ದವಾಲೆ ಮಾತನಾಡಿ ’ನಾಳೆ ನಡೆಯಲಿರುವ ಜಾಥದಲ್ಲಿ ಪುರುಷರು ಮತ್ತು ಮಹಿಳೆಯರೆಲ್ಲರೂ ಭಾವಹಿಸಲಿದ್ದು, ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಲಿದ್ದಾರೆ’ ಎಂದರು.


ಇದನ್ನೂ ಓದಿ; ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...