Homeಮುಖಪುಟನಾಳೆ ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ನಾಳೆ ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ದೇಶದ ವಿವಿಧ ಮಹಿಳಾ ರೈತ ಸಂಘಟನೆಗಳು ಸೇರಿ ಜನವರಿ 18 ಅನ್ನು (ಸೋಮವಾರ) ರೈತ ಮಹಿಳಾ ದಿನಾಚರಣೆ ಆಚರಿಸಲು ನಿರ್ಧರಿಸಿವೆ.

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬಿರುಸು ನೀಡುವ ಹಿನ್ನಲೆಯಲ್ಲಿ ಸೋಮವಾರ ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ತೀರ್ಮಾನಿಸಿದೆ.

ಕಳೆದ 54 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿಯೂ ಮಹಿಳಾ ರೈತರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ. ಈಗಾಗಲೇ ನೂರಾರು ರೈತ ಪುತ್ರಿಯರು ಟ್ರಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದು, ಸಾಲ ಮನ್ನಾ, ಆರೋಗ್ಯ ಸೇವೆಗಳು, ಕಿರು ಬಂಡವಾಳ ಸಂಸ್ಥೆಗಳ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ರೈತ ಹೋರಾಟಕ್ಕೆ ಬೆಂಬಲ ಸೂಚಿಸುವುದು ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ನಾಳೆ ಹೋರಾಟ ನಡೆಸಲಿದ್ದಾರೆ.

ಈ ಜಾಥದಲ್ಲಿ ಭಾರತೀಯ ಮಹಿಳಾ ಒಕ್ಕೂಟ (ಎನ್ಎಫ್ಐಡಬ್ಯೂ), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (ಎಐಡಿಡಬ್ಲ್ಯೂಎ), ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ (ಎಐಪಿಡಬ್ಲ್ಯೂಎ) ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಭಾಗವಹಿಸುತ್ತಿದ್ದಾರೆ.

ಎಐಡಿಡಬ್ಲ್ಯೂಎ ಅಧ್ಯಕ್ಷರಾದ ಮರಿಯಂ ದವಾಲೆ ಅವರು, ’ನಾವು ದೇಶದಾದ್ಯಂತ ಪ್ರತಿಭಟನೆಯನ್ನು ಆಯೋಜಸುತ್ತಿದ್ದೇವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಹಿಳಾ ಪ್ರತಿಭಟನಾಕಾರರು ರಾಜ್‌ಭವನದತ್ತ ಮೆರವಣಿಗೆ ನಡೆಸಲಿದ್ದಾರೆ’ ಎಂದಿದ್ದಾರೆ.

ಅಖಿಲ ಭಾರತ ಕಿಸಾನ್‌ ಸಭಾದ (ಎಐಕೆಎಸ್) ಅಧ್ಯಕ್ಷರಾದ ಅಶೋಕ್‌ ದವಾಲೆ ಮಾತನಾಡಿ ’ನಾಳೆ ನಡೆಯಲಿರುವ ಜಾಥದಲ್ಲಿ ಪುರುಷರು ಮತ್ತು ಮಹಿಳೆಯರೆಲ್ಲರೂ ಭಾವಹಿಸಲಿದ್ದು, ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಲಿದ್ದಾರೆ’ ಎಂದರು.


ಇದನ್ನೂ ಓದಿ; ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...