Homeಮುಖಪುಟನಾಳೆ ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ನಾಳೆ ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ದೇಶದ ವಿವಿಧ ಮಹಿಳಾ ರೈತ ಸಂಘಟನೆಗಳು ಸೇರಿ ಜನವರಿ 18 ಅನ್ನು (ಸೋಮವಾರ) ರೈತ ಮಹಿಳಾ ದಿನಾಚರಣೆ ಆಚರಿಸಲು ನಿರ್ಧರಿಸಿವೆ.

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬಿರುಸು ನೀಡುವ ಹಿನ್ನಲೆಯಲ್ಲಿ ಸೋಮವಾರ ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ತೀರ್ಮಾನಿಸಿದೆ.

ಕಳೆದ 54 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿಯೂ ಮಹಿಳಾ ರೈತರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ. ಈಗಾಗಲೇ ನೂರಾರು ರೈತ ಪುತ್ರಿಯರು ಟ್ರಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದು, ಸಾಲ ಮನ್ನಾ, ಆರೋಗ್ಯ ಸೇವೆಗಳು, ಕಿರು ಬಂಡವಾಳ ಸಂಸ್ಥೆಗಳ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ರೈತ ಹೋರಾಟಕ್ಕೆ ಬೆಂಬಲ ಸೂಚಿಸುವುದು ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ನಾಳೆ ಹೋರಾಟ ನಡೆಸಲಿದ್ದಾರೆ.

ಈ ಜಾಥದಲ್ಲಿ ಭಾರತೀಯ ಮಹಿಳಾ ಒಕ್ಕೂಟ (ಎನ್ಎಫ್ಐಡಬ್ಯೂ), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (ಎಐಡಿಡಬ್ಲ್ಯೂಎ), ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ (ಎಐಪಿಡಬ್ಲ್ಯೂಎ) ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಭಾಗವಹಿಸುತ್ತಿದ್ದಾರೆ.

ಎಐಡಿಡಬ್ಲ್ಯೂಎ ಅಧ್ಯಕ್ಷರಾದ ಮರಿಯಂ ದವಾಲೆ ಅವರು, ’ನಾವು ದೇಶದಾದ್ಯಂತ ಪ್ರತಿಭಟನೆಯನ್ನು ಆಯೋಜಸುತ್ತಿದ್ದೇವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಹಿಳಾ ಪ್ರತಿಭಟನಾಕಾರರು ರಾಜ್‌ಭವನದತ್ತ ಮೆರವಣಿಗೆ ನಡೆಸಲಿದ್ದಾರೆ’ ಎಂದಿದ್ದಾರೆ.

ಅಖಿಲ ಭಾರತ ಕಿಸಾನ್‌ ಸಭಾದ (ಎಐಕೆಎಸ್) ಅಧ್ಯಕ್ಷರಾದ ಅಶೋಕ್‌ ದವಾಲೆ ಮಾತನಾಡಿ ’ನಾಳೆ ನಡೆಯಲಿರುವ ಜಾಥದಲ್ಲಿ ಪುರುಷರು ಮತ್ತು ಮಹಿಳೆಯರೆಲ್ಲರೂ ಭಾವಹಿಸಲಿದ್ದು, ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಲಿದ್ದಾರೆ’ ಎಂದರು.


ಇದನ್ನೂ ಓದಿ; ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...