Homeಮುಖಪುಟರೈತ ಮಹಿಳಾ ದಿನ: IMF, WTO ಪ್ರತಿಕೃತಿ ಸುಟ್ಟು ಪ್ರತಿಭಟಿಸಿದ ರೈತ ಮಹಿಳೆಯರು

ರೈತ ಮಹಿಳಾ ದಿನ: IMF, WTO ಪ್ರತಿಕೃತಿ ಸುಟ್ಟು ಪ್ರತಿಭಟಿಸಿದ ರೈತ ಮಹಿಳೆಯರು

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಹಿನ್ನಲೆಯಲ್ಲಿ, ಇಂದು ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲಾಗಿದೆ.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ದೇಶದ ವಿವಿಧ ಮಹಿಳಾ ರೈತ ಸಂಘಟನೆಗಳು ಸೇರಿ ಇಂದು (ಜನವರಿ 18) ರೈತ ಮಹಿಳಾ ದಿನಾಚರಣೆ ಆಚರಿಸುತ್ತಿದ್ದು, ದೆಹಲಿಯ ಟಿಕ್ರಿ ಗಡಿಯಲ್ಲಿ ಅಂತರಾಷ್ಟ್ರೀಯ ಹಣಕಾಸು ನಿಧಿ (IMF), ವಿಶ್ವ ವ್ಯಾಪಾರ ಸಂಘಟನೆ (WTO) ಮತ್ತು ವಿಶ್ವ ಬ್ಯಾಂಕಿನ ಪ್ರತಿಕೃತಿಗಳನ್ನು ಸುಟ್ಟು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಈ ಕುರಿತ ವೀಡಿಯೋವೊಂದನ್ನು ಕರ್ನಾಟಕದ AICCTU ಟ್ವೀಟ್ ಮಾಡಿದೆ.

 

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಹಿನ್ನಲೆಯಲ್ಲಿ, ಇಂದೇ ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ರೈತ ಹೋರಾಟವನ್ನು ಬೆಂಬಲಿಸಿ #WomenFarmersAgainstFarmLaws ಎನ್ನುವ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಇದನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.

ಪಂಜಾಬ್ ವುಮೆನ್ ಕಲೆಕ್ಟೀವ್ ಟ್ವೀಟ್ ಮಾಡಿ, “ಭಾರತದ ರೈತ ಮಹಿಳೆಯರೊಂದಿಗೆ ಒಗ್ಗಟ್ಟನಿಂದ ನಿಂತಿದ್ದೇವೆ” ಎಂದು ಟ್ವೀಟ್ ಮಾಡಿದೆ.

ಮಂದೀಪ್ ಜಸ್ಸಿ ಟ್ವೀಟ್ ಮಾಡಿ, “ಇಂದು ನಮ್ಮ ತಾಯಂದಿರು ಮತ್ತು ಸಹೋದರಿಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನ ಕೊಡುಗೆ ನೀಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಸರ್ದಾರ್ ರಜಿಂದರ್ ಸಿಂಗ್ ಟ್ವೀಟ್ ಮಾಡಿ, “ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧದ ಈ ಯುದ್ಧದಲ್ಲಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಯನ್ನು ಸಂಭ್ರಮಿಸೋಣ. ಮಹಿಳಾ ಕಿಸಾನ್ ದಿವಸ್ ಆಚರಿಸೋಣ” ಎಂದು ಬರೆದುಕೊಂಡಿದ್ದಾರೆ.

“ದೆಹಲಿ ಗಡಿಯಲ್ಲಿರುವ 5 ಪ್ರತಿಭಟನಾ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ಮತ್ತು ನೈರ್ಮಲ್ಯದ ಕೊರತೆಯು ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. #WomenFarmersAgainstFarmlaws #MahilaKisanDiwas #Tractor2Twitter” ಎಂದು ಟ್ವೀಟ್ ಮಾಡಲಾಗಿದೆ.

ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿಯೂ ಮಹಿಳಾ ರೈತರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ. ಈಗಾಗಲೇ ನೂರಾರು ರೈತ ಪುತ್ರಿಯರು ಟ್ರಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದು, ಸಾಲ ಮನ್ನಾ, ಆರೋಗ್ಯ ಸೇವೆಗಳು, ಕಿರು ಬಂಡವಾಳ ಸಂಸ್ಥೆಗಳ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ರೈತ ಹೋರಾಟಕ್ಕೆ ಬೆಂಬಲ ಸೂಚಿಸುವುದು ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ಇಂದು ಹೋರಾಟ ನಡೆಸುತ್ತಿದ್ದಾರೆ.

ಈ ಜಾಥದಲ್ಲಿ ಭಾರತೀಯ ಮಹಿಳಾ ಒಕ್ಕೂಟ (ಎನ್ಎಫ್ಐಡಬ್ಯೂ), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (ಎಐಡಿಡಬ್ಲ್ಯೂಎ), ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ (ಎಐಪಿಡಬ್ಲ್ಯೂಎ) ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಗಳು (ಎಐಎಂಎಸ್ಎಸ್) ಭಾಗವಹಿಸಿವೆ.

ಎಐಡಿಡಬ್ಲ್ಯೂಎ ಅಧ್ಯಕ್ಷರಾದ ಮರಿಯಂ ದವಾಲೆ ಅವರು, “ನಾವು ದೇಶದಾದ್ಯಂತ ಪ್ರತಿಭಟನೆಯನ್ನು ಆಯೋಜಸುತ್ತಿದ್ದೇವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಹಿಳಾ ಪ್ರತಿಭಟನಾಕಾರರು ರಾಜ್‌ಭವನದತ್ತ ಮೆರವಣಿಗೆ ನಡೆಸಲಿದ್ದಾರೆ” ಎಂದಿದ್ದಾರೆ.

ಅಖಿಲ ಭಾರತ ಕಿಸಾನ್‌ ಸಭಾದ (ಎಐಕೆಎಸ್) ಅಧ್ಯಕ್ಷರಾದ ಅಶೋಕ್‌ ದವಾಲೆ ಮಾತನಾಡಿ “ಇಂದು ನಡೆಯಲಿರುವ ಜಾಥದಲ್ಲಿ ಪುರುಷರು ಮತ್ತು ಮಹಿಳೆಯರೆಲ್ಲರೂ ಭಾವಹಿಸಲಿದ್ದು, ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಲಿದ್ದಾರೆ” ಎಂದರು.

ರೈತ ಮಹಿಳಾ ದಿನದ ಕುರಿತು ದೆಹಲಿಯ ಸಿಂಘು ಗಡಿಯಲ್ಲಿನ ಹೋರಾಟಗಾರ್ತಿಯ ಮಾತುಗಳನ್ನು ಇಲ್ಲಿ ಕೇಳಿ…


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...