Homeಮುಖಪುಟರೈತ ಮಹಿಳಾ ದಿನ: IMF, WTO ಪ್ರತಿಕೃತಿ ಸುಟ್ಟು ಪ್ರತಿಭಟಿಸಿದ ರೈತ ಮಹಿಳೆಯರು

ರೈತ ಮಹಿಳಾ ದಿನ: IMF, WTO ಪ್ರತಿಕೃತಿ ಸುಟ್ಟು ಪ್ರತಿಭಟಿಸಿದ ರೈತ ಮಹಿಳೆಯರು

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಹಿನ್ನಲೆಯಲ್ಲಿ, ಇಂದು ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲಾಗಿದೆ.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ದೇಶದ ವಿವಿಧ ಮಹಿಳಾ ರೈತ ಸಂಘಟನೆಗಳು ಸೇರಿ ಇಂದು (ಜನವರಿ 18) ರೈತ ಮಹಿಳಾ ದಿನಾಚರಣೆ ಆಚರಿಸುತ್ತಿದ್ದು, ದೆಹಲಿಯ ಟಿಕ್ರಿ ಗಡಿಯಲ್ಲಿ ಅಂತರಾಷ್ಟ್ರೀಯ ಹಣಕಾಸು ನಿಧಿ (IMF), ವಿಶ್ವ ವ್ಯಾಪಾರ ಸಂಘಟನೆ (WTO) ಮತ್ತು ವಿಶ್ವ ಬ್ಯಾಂಕಿನ ಪ್ರತಿಕೃತಿಗಳನ್ನು ಸುಟ್ಟು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಈ ಕುರಿತ ವೀಡಿಯೋವೊಂದನ್ನು ಕರ್ನಾಟಕದ AICCTU ಟ್ವೀಟ್ ಮಾಡಿದೆ.

 

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಹಿನ್ನಲೆಯಲ್ಲಿ, ಇಂದೇ ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ರೈತ ಹೋರಾಟವನ್ನು ಬೆಂಬಲಿಸಿ #WomenFarmersAgainstFarmLaws ಎನ್ನುವ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಇದನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.

ಪಂಜಾಬ್ ವುಮೆನ್ ಕಲೆಕ್ಟೀವ್ ಟ್ವೀಟ್ ಮಾಡಿ, “ಭಾರತದ ರೈತ ಮಹಿಳೆಯರೊಂದಿಗೆ ಒಗ್ಗಟ್ಟನಿಂದ ನಿಂತಿದ್ದೇವೆ” ಎಂದು ಟ್ವೀಟ್ ಮಾಡಿದೆ.

ಮಂದೀಪ್ ಜಸ್ಸಿ ಟ್ವೀಟ್ ಮಾಡಿ, “ಇಂದು ನಮ್ಮ ತಾಯಂದಿರು ಮತ್ತು ಸಹೋದರಿಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನ ಕೊಡುಗೆ ನೀಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಸರ್ದಾರ್ ರಜಿಂದರ್ ಸಿಂಗ್ ಟ್ವೀಟ್ ಮಾಡಿ, “ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧದ ಈ ಯುದ್ಧದಲ್ಲಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಯನ್ನು ಸಂಭ್ರಮಿಸೋಣ. ಮಹಿಳಾ ಕಿಸಾನ್ ದಿವಸ್ ಆಚರಿಸೋಣ” ಎಂದು ಬರೆದುಕೊಂಡಿದ್ದಾರೆ.

“ದೆಹಲಿ ಗಡಿಯಲ್ಲಿರುವ 5 ಪ್ರತಿಭಟನಾ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ಮತ್ತು ನೈರ್ಮಲ್ಯದ ಕೊರತೆಯು ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. #WomenFarmersAgainstFarmlaws #MahilaKisanDiwas #Tractor2Twitter” ಎಂದು ಟ್ವೀಟ್ ಮಾಡಲಾಗಿದೆ.

ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿಯೂ ಮಹಿಳಾ ರೈತರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ. ಈಗಾಗಲೇ ನೂರಾರು ರೈತ ಪುತ್ರಿಯರು ಟ್ರಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದು, ಸಾಲ ಮನ್ನಾ, ಆರೋಗ್ಯ ಸೇವೆಗಳು, ಕಿರು ಬಂಡವಾಳ ಸಂಸ್ಥೆಗಳ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ರೈತ ಹೋರಾಟಕ್ಕೆ ಬೆಂಬಲ ಸೂಚಿಸುವುದು ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ಇಂದು ಹೋರಾಟ ನಡೆಸುತ್ತಿದ್ದಾರೆ.

ಈ ಜಾಥದಲ್ಲಿ ಭಾರತೀಯ ಮಹಿಳಾ ಒಕ್ಕೂಟ (ಎನ್ಎಫ್ಐಡಬ್ಯೂ), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (ಎಐಡಿಡಬ್ಲ್ಯೂಎ), ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ (ಎಐಪಿಡಬ್ಲ್ಯೂಎ) ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಗಳು (ಎಐಎಂಎಸ್ಎಸ್) ಭಾಗವಹಿಸಿವೆ.

ಎಐಡಿಡಬ್ಲ್ಯೂಎ ಅಧ್ಯಕ್ಷರಾದ ಮರಿಯಂ ದವಾಲೆ ಅವರು, “ನಾವು ದೇಶದಾದ್ಯಂತ ಪ್ರತಿಭಟನೆಯನ್ನು ಆಯೋಜಸುತ್ತಿದ್ದೇವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಹಿಳಾ ಪ್ರತಿಭಟನಾಕಾರರು ರಾಜ್‌ಭವನದತ್ತ ಮೆರವಣಿಗೆ ನಡೆಸಲಿದ್ದಾರೆ” ಎಂದಿದ್ದಾರೆ.

ಅಖಿಲ ಭಾರತ ಕಿಸಾನ್‌ ಸಭಾದ (ಎಐಕೆಎಸ್) ಅಧ್ಯಕ್ಷರಾದ ಅಶೋಕ್‌ ದವಾಲೆ ಮಾತನಾಡಿ “ಇಂದು ನಡೆಯಲಿರುವ ಜಾಥದಲ್ಲಿ ಪುರುಷರು ಮತ್ತು ಮಹಿಳೆಯರೆಲ್ಲರೂ ಭಾವಹಿಸಲಿದ್ದು, ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಲಿದ್ದಾರೆ” ಎಂದರು.

ರೈತ ಮಹಿಳಾ ದಿನದ ಕುರಿತು ದೆಹಲಿಯ ಸಿಂಘು ಗಡಿಯಲ್ಲಿನ ಹೋರಾಟಗಾರ್ತಿಯ ಮಾತುಗಳನ್ನು ಇಲ್ಲಿ ಕೇಳಿ…


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...