Homeಕರ್ನಾಟಕಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

- Advertisement -
- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಶಾಸಕ ರೇವಣ್ಣ ಮನೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ನನ್ನ ತಾಯಿಯನ್ನು ಅಪಹರಿಸಲಾಗಿದೆ ಎಂದು ಆಕೆಯ ಪುತ್ರ ರಾಜು ಮೇ.2ರಂದು ನೀಡಿದ ದೂರು ಆಧರಿಸಿ ಸತೀಶ್ ಬಾಬಣ್ಣನನ್ನು ಅಂದು ರಾತ್ರಿಯೇ ಮೈಸೂರಿನ ಕೆಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಕೆಆರ್‌ ನಗರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ಕಾಲ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮನೆ ಕೆಲಸದ ಮಹಿಳೆಯನ್ನು ಬಲವಂತವಾಗಿ ಲೈಂಗಿಕ ಕ್ರಿಯೆಗೆ ಒಳಪಡಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಆ ಬಳಿಕ ಏಪ್ರಿಲ್ 29ರಂದು ಶಾಸಕ ಹೆಚ್‌.ಡಿ ರೇವಣ್ಣ ಅವರ ಸೂಚನೆ ಮೇರೆಗೆ ಸತೀಶ್ ಬಾಬಣ್ಣ ಮಹಿಳೆಯನ್ನು ಸುಳ್ಳು ಹೇಳಿ ರೇವಣ್ಣ ಮನೆಗೆ ಕರೆದುಕೊಂಡು ಹೋಗಿದ್ದರು. ಆ ಬಳಿಕ ಮಹಿಳೆ ನಾಪತ್ತೆಯಾಗಿದ್ದರು. ಈ ಸಂಬಂಧ ಮೇ 2ರಂದು ಮಹಿಳೆಯ ಮಗ ರಾಜು ಪೊಲೀಸರಿಗೆ ದೂರು ನೀಡಿ ತಾಯಿಯನ್ನು ಪತ್ತೆ ಹಚ್ಚುವಂತೆ ಮನವಿ ಮಾಡಿದ್ದರು.

ರಾಜು ನೀಡಿದ ದೂರಿನಲ್ಲಿ ಏನಿತ್ತು?

ನನ್ನ ತಂದೆಗೆ ಮೂವರು ಮಕ್ಕಳು, ನನ್ನ ತಾಯಿ ಹೊಳೇನರಸಿಪುರದ ಚೆನ್ನಾಂಬಿಕ ಥಿಯೇಟರ್ ಪಕ್ಕ ಇರುವ ಎಚ್‌ಡಿ ರೇವಣ್ಣ ಅವರ ಮನೆಯಲ್ಲಿ ಸುಮಾರು 6 ವರ್ಷ ಕೆಲಸ‌ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ನಮಗೆ ಪರಿಚಯಸ್ಥರಾಗದ್ದ ಸತೀಶ್ ಎಂಬವರು ಭವಾನಿ ಅಕ್ಕರವರು ಕರೆಯುತ್ತಿದ್ದಾರೆ ಎಂದು ಹೇಳಿ ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಚುನಾವಣೆಯ ದಿವಸ ಬೆಳಿಗ್ಗೆ ನನ್ನ ತಾಯಿಯನ್ನು ಸತೀಶ್ ವಾಪಸ್ಸು  ಕರೆದುಕೊಂಡು ಬಂದಿದ್ದಾರೆ. ನನ್ನ ತಂದೆ ಮತ್ತು ತಾಯಿಗೆ ಪೊಲೀಸ್ ಬಂದರೆ ಏನೂ ಹೇಳಬೇಡಿ, ಅವರಿಗೆ ಸಿಗಬೇಡಿ, ನಿಮ್ಮ ಮೇಲೆ ಕೇಸ್ ಆಗುತ್ತದೆ. ಬಂದರೆ ನನಗೆ ತಿಳಿಸಿ ನಾನು ಬಂದು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಏಪ್ರಿಲ್ 29ರಂದು 9ಗಂಟೆಗೆ ಮತ್ತೆ ಬಂದ ಸತೀಶ್, ನಿಮ್ಮ ತಾಯಿ ಪೊಲೀಸ್‌ನವರಿಗೆ ಸಿಕ್ಕಿ ಹಾಕಿಕೊಂಡರೆ ಕೇಸು ಆಗುತ್ತದೆ ಮತ್ತೆ ನೀವು ಸಹ ಜೈಲಿಗೆ ಹೋಗಬೇಕಾಗುತ್ತದೆ. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನನ್ನ ತಾಯಿಗೆ ಹೇಳಿ ನನ್ನ ತಾಯಿಯನ್ನು ಒತ್ತಾಯ ಮಾಡಿಕೊಂಡು ಸತೀಶ್ ಅವರು ಹೀರೋ ಹೊಂಡಾ ಸ್ಪ್ಲೆಂಡ‌ರ್ ಬೈಕಿನಲ್ಲಿ ಕರೆದುಕೊಂಡು ಹೋದರು. ನನ್ನ ತಾಯಿಯನ್ನು ಎಲ್ಲಿಗೆ ಕರೆದುಕೊಂಡು ಹೋದರು ಎಂಬುದು ನಮಗೆ ಗೊತ್ತಿಲ್ಲ. ಮೇ.1ರಂದು ನಮ್ಮ ತಾಯಿಯ ವಿಡಿಯೋ ಬಗ್ಗೆ ಸ್ನೇಹಿತರು ನನಗೆ ಮಾಹಿತಿ ನೀಡಿದ್ದಾರೆ. ನಿನ್ನ ಅಮ್ಮನ ಕಾಲು ಕಟ್ಟಿ ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಹೇಳಿದರು. ಈ ಬಗ್ಗೆ ದೊಡ್ಡ ಕೇಸಾಗಿರುವುದಾಗಿ ನನಗೆ ತಿಳಿಸಿದರು. ನಂತರ ನಾನು ರಾತ್ರಿ ಫೋನ್ ಮಾಡಿ ನನ್ನ ತಾಯಿ ಬಗ್ಗೆ ವಿಚಾರಿಸಿದೆ. ನನ್ನ ತಾಯಿಯನ್ನು ವಾಪಾಸು ಕರೆದುಕೊಂಡು ಬರುವಂತೆ ಹೇಳಿದೆ, ಆದರೆ ಹಲ್ಲೆ ಪ್ರಕರಣವೊಂದರಲ್ಲಿ ನಿಮ್ಮ ತಾಯಿ ಆರೋಪಿ ಎಂದು ಸುಳ್ಳು ಹೇಳಿದ್ದಾರೆ. ನನ್ನ ತಾಯಿಯನ್ನು ಹೆದರಿಸಿ ಒತ್ತಾಯವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆ, ನನ್ನ ತಾಯಿಯ ಜೀವಕ್ಕೆ ಅಪಾಯವಿದೆ, ಆದ್ದರಿಂದ ನನ್ನ ತಾಯಿಯನ್ನು ಪತ್ತೆ ಮಾಡಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದ ಹೆಚ್‌. ಡಿ ರೇವಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....