Homeಕರ್ನಾಟಕವರ್ಷಕ್ಕೆ 6 ಮುಟ್ಟಿನ ರಜೆ ಜಾರಿ ಮಾಡಲಿರುವ ರಾಜ್ಯ ಸರ್ಕಾರ: ವರದಿ

ವರ್ಷಕ್ಕೆ 6 ಮುಟ್ಟಿನ ರಜೆ ಜಾರಿ ಮಾಡಲಿರುವ ರಾಜ್ಯ ಸರ್ಕಾರ: ವರದಿ

- Advertisement -
- Advertisement -

ರಾಜ್ಯದ ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಇರುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪರಿಚಯಿಸಲು ರಾಜ್ಯ ಸರ್ಕಾರವು ಸಿದ್ಧವಾಗಿದೆ. ಮಹಿಳೆಯರಿಗೆ ಮುಟ್ಟಿನ ರಜೆಯ ಬಗ್ಗೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಬೆನ್ನಿಗೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಈ ಬಗ್ಗೆ ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿದ್ದು, ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ರಜೆಯ ಒಪ್ಪಿಗೆಗಾಗಿ ಅದನ್ನು ಶಾಸಕಾಂಗದ ಮುಂದೆ ಇಡಲಾಗುವುದು” ಎಂದು ಕಾರ್ಮಿಕ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ.ಮುಟ್ಟಿನ ರಜೆ

ಇದನ್ನೂ ಓದಿ:ಸಿಖ್ಖರ ವಿರುದ್ಧ ಹೇಳಿಕೆ ಆರೋಪ | ರಾಹುಲ್ ಗಾಂಧಿ ವಿರುದ್ಧ ಛತ್ತೀಸ್‌ಗಢದಲ್ಲಿ ಮೂರು FIR 

ಸರ್ಕಾರವು ಈ ಕ್ರಮವನ್ನು ಮೊದಲು ಖಾಸಗಿ ವಲಯಕ್ಕೆ ಪರಿಚಯಿಸಲು ಯೋಜಿಸಿದ್ದು, ಅದನ್ನು ನೀತಿ ಮಾಡಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯವಾಗಿ ಮಾಡಲು ಯೋಜಿಸಿದೆ ಎಂದು ಅವರು ಹೇಳಿದ್ದಾರೆ. ಈ ವಿಷಯದ ಬಗ್ಗೆ ಒಂದು ನೀತಿ ಇರಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ಮೊಹ್ಸಿನ್ ಹೇಳಿದ್ದಾರೆ.

ಈ ವರ್ಷದ ಜುಲೈನಲ್ಲಿ, ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆಯ ಬಗ್ಗೆ ಮಾದರಿ ನೀತಿಯನ್ನು ರೂಪಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವು ಕೇಳಿತ್ತು. ಉದ್ಯೋಗದಾತರು ಅಂತಹ ರಜೆಯನ್ನು ನೀಡುವುದನ್ನು ಕಡ್ಡಾಯಗೊಳಿಸುವುದು ಮಹಿಳೆಯರಿಗೆ ಅವರ ಉದ್ಯೋಗಗಳಲ್ಲಿ ಭಾಗವಹಿಸುವುದಕ್ಕೆ ಅನುಕೂಲವಾಗುತ್ತದೆ ಎಂದು ಅದು ಹೇಳಿತ್ತು.

ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೂಡಾ ಕರ್ನಾಟಕದಲ್ಲಿ ಮುಟ್ಟಿನ ರಜೆಯನ್ನು ಪರಿಚಯಿಸುವ ಪ್ರಸ್ತಾಪದ ಬಗ್ಗೆ ಮಾಧ್ಯಮದ ಜೊತೆಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಕಾರ್ಮಿಕ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ ಮಾತನಾಡಿ, ಪ್ರಸ್ತಾವನೆ ಚರ್ಚೆ ಹಂತದಲ್ಲಿದೆ. ಸಚಿವರು ಅದನ್ನು ತರಲು ಯೋಜಿಸಿದ್ದರು. ಆದರೆ ಅದನ್ನು ಮೊದಲು ಕಾರ್ಮಿಕ ಇಲಾಖೆಯು ಕೆಲವೇ ದಿನಗಳಲ್ಲಿ ಪರಿಶೀಲಿಸುತ್ತದೆ. ಅದರ ನಂತರ, ಇದು ಇಲಾಖೆ ಮತ್ತು ಸರ್ಕಾರಿ ಹಂತಗಳಲ್ಲಿ ಚಲಿಸುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, IT-BT, ಆರೋಗ್ಯ, ವಾಣಿಜ್ಯ ಮತ್ತು ಕೈಗಾರಿಕೆಗಳ ಇಲಾಖೆಗಳು ಮತ್ತು ಇತರ ಸಂಬಂಧಿತ ವಲಯಗಳ ಜೊತೆಗೆ ಕೂಡಾ ಸಲಹೆ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ, “ನಮ್ಮ ಉದ್ಯೋಗಿಗಳಲ್ಲಿ ಮಹಿಳೆಯರು ಗಮನಾರ್ಹವಾಗಿ ಇದ್ದಾರೆ. ಅವರ ಅಗತ್ಯತೆಗಳು ಪುರುಷರಿಗಿಂತ ಭಿನ್ನವಾಗಿವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವೇದನಾಶೀಲವಾಗಿರುವ ಸರ್ಕಾರವಾಗಿ ಈ ಅಗತ್ಯಗಳಿಗೆ ನಾವು ಈ ಸಮಸ್ಯೆಯನ್ನು ಆದ್ಯತೆಯಾಗಿ ತೆಗೆದುಕೊಳ್ಳುತ್ತಿದ್ದೇವೆ. ಮಹಿಳೆಯರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮವನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

1992 ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿ ಬಿಹಾರ ಹೊರಹೊಮ್ಮಿತ್ತು. ಅಲ್ಲಿ ಪ್ರತಿ ತಿಂಗಳು ಎರಡು ದಿನಗಳ ರಜೆಯನ್ನು ಮಹಿಳೆಯರಿಗೆ ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ಸರ್ಕಾರಗಳು ಮಹಿಳೆಯರಿಗೆ ಮುಟ್ಟಿನ ರಜೆಯನ್ನು ನೀಡುತ್ತವೆ. ಜಾಗತಿಕವಾಗಿ, ಸ್ವೀಡನ್, ಇಟಲಿ, ದಕ್ಷಿಣ ಕೊರಿಯಾ, ತೈವಾನ್ ಮತ್ತು ಜಪಾನ್ ಮಹಿಳೆಯರಿಗೆ ಮುಟ್ಟಿನ ರಜೆಗಳನ್ನು ನೀಡುತ್ತವೆ.

ವಿಡಿಯೊ ನೊಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...