Homeಕರ್ನಾಟಕವರ್ಷಕ್ಕೆ 6 ಮುಟ್ಟಿನ ರಜೆ ಜಾರಿ ಮಾಡಲಿರುವ ರಾಜ್ಯ ಸರ್ಕಾರ: ವರದಿ

ವರ್ಷಕ್ಕೆ 6 ಮುಟ್ಟಿನ ರಜೆ ಜಾರಿ ಮಾಡಲಿರುವ ರಾಜ್ಯ ಸರ್ಕಾರ: ವರದಿ

- Advertisement -
- Advertisement -

ರಾಜ್ಯದ ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಇರುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪರಿಚಯಿಸಲು ರಾಜ್ಯ ಸರ್ಕಾರವು ಸಿದ್ಧವಾಗಿದೆ. ಮಹಿಳೆಯರಿಗೆ ಮುಟ್ಟಿನ ರಜೆಯ ಬಗ್ಗೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಬೆನ್ನಿಗೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಈ ಬಗ್ಗೆ ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿದ್ದು, ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ರಜೆಯ ಒಪ್ಪಿಗೆಗಾಗಿ ಅದನ್ನು ಶಾಸಕಾಂಗದ ಮುಂದೆ ಇಡಲಾಗುವುದು” ಎಂದು ಕಾರ್ಮಿಕ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ.ಮುಟ್ಟಿನ ರಜೆ

ಇದನ್ನೂ ಓದಿ:ಸಿಖ್ಖರ ವಿರುದ್ಧ ಹೇಳಿಕೆ ಆರೋಪ | ರಾಹುಲ್ ಗಾಂಧಿ ವಿರುದ್ಧ ಛತ್ತೀಸ್‌ಗಢದಲ್ಲಿ ಮೂರು FIR 

ಸರ್ಕಾರವು ಈ ಕ್ರಮವನ್ನು ಮೊದಲು ಖಾಸಗಿ ವಲಯಕ್ಕೆ ಪರಿಚಯಿಸಲು ಯೋಜಿಸಿದ್ದು, ಅದನ್ನು ನೀತಿ ಮಾಡಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯವಾಗಿ ಮಾಡಲು ಯೋಜಿಸಿದೆ ಎಂದು ಅವರು ಹೇಳಿದ್ದಾರೆ. ಈ ವಿಷಯದ ಬಗ್ಗೆ ಒಂದು ನೀತಿ ಇರಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ಮೊಹ್ಸಿನ್ ಹೇಳಿದ್ದಾರೆ.

ಈ ವರ್ಷದ ಜುಲೈನಲ್ಲಿ, ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆಯ ಬಗ್ಗೆ ಮಾದರಿ ನೀತಿಯನ್ನು ರೂಪಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವು ಕೇಳಿತ್ತು. ಉದ್ಯೋಗದಾತರು ಅಂತಹ ರಜೆಯನ್ನು ನೀಡುವುದನ್ನು ಕಡ್ಡಾಯಗೊಳಿಸುವುದು ಮಹಿಳೆಯರಿಗೆ ಅವರ ಉದ್ಯೋಗಗಳಲ್ಲಿ ಭಾಗವಹಿಸುವುದಕ್ಕೆ ಅನುಕೂಲವಾಗುತ್ತದೆ ಎಂದು ಅದು ಹೇಳಿತ್ತು.

ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೂಡಾ ಕರ್ನಾಟಕದಲ್ಲಿ ಮುಟ್ಟಿನ ರಜೆಯನ್ನು ಪರಿಚಯಿಸುವ ಪ್ರಸ್ತಾಪದ ಬಗ್ಗೆ ಮಾಧ್ಯಮದ ಜೊತೆಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಕಾರ್ಮಿಕ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ ಮಾತನಾಡಿ, ಪ್ರಸ್ತಾವನೆ ಚರ್ಚೆ ಹಂತದಲ್ಲಿದೆ. ಸಚಿವರು ಅದನ್ನು ತರಲು ಯೋಜಿಸಿದ್ದರು. ಆದರೆ ಅದನ್ನು ಮೊದಲು ಕಾರ್ಮಿಕ ಇಲಾಖೆಯು ಕೆಲವೇ ದಿನಗಳಲ್ಲಿ ಪರಿಶೀಲಿಸುತ್ತದೆ. ಅದರ ನಂತರ, ಇದು ಇಲಾಖೆ ಮತ್ತು ಸರ್ಕಾರಿ ಹಂತಗಳಲ್ಲಿ ಚಲಿಸುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, IT-BT, ಆರೋಗ್ಯ, ವಾಣಿಜ್ಯ ಮತ್ತು ಕೈಗಾರಿಕೆಗಳ ಇಲಾಖೆಗಳು ಮತ್ತು ಇತರ ಸಂಬಂಧಿತ ವಲಯಗಳ ಜೊತೆಗೆ ಕೂಡಾ ಸಲಹೆ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ, “ನಮ್ಮ ಉದ್ಯೋಗಿಗಳಲ್ಲಿ ಮಹಿಳೆಯರು ಗಮನಾರ್ಹವಾಗಿ ಇದ್ದಾರೆ. ಅವರ ಅಗತ್ಯತೆಗಳು ಪುರುಷರಿಗಿಂತ ಭಿನ್ನವಾಗಿವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವೇದನಾಶೀಲವಾಗಿರುವ ಸರ್ಕಾರವಾಗಿ ಈ ಅಗತ್ಯಗಳಿಗೆ ನಾವು ಈ ಸಮಸ್ಯೆಯನ್ನು ಆದ್ಯತೆಯಾಗಿ ತೆಗೆದುಕೊಳ್ಳುತ್ತಿದ್ದೇವೆ. ಮಹಿಳೆಯರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮವನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

1992 ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿ ಬಿಹಾರ ಹೊರಹೊಮ್ಮಿತ್ತು. ಅಲ್ಲಿ ಪ್ರತಿ ತಿಂಗಳು ಎರಡು ದಿನಗಳ ರಜೆಯನ್ನು ಮಹಿಳೆಯರಿಗೆ ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ಸರ್ಕಾರಗಳು ಮಹಿಳೆಯರಿಗೆ ಮುಟ್ಟಿನ ರಜೆಯನ್ನು ನೀಡುತ್ತವೆ. ಜಾಗತಿಕವಾಗಿ, ಸ್ವೀಡನ್, ಇಟಲಿ, ದಕ್ಷಿಣ ಕೊರಿಯಾ, ತೈವಾನ್ ಮತ್ತು ಜಪಾನ್ ಮಹಿಳೆಯರಿಗೆ ಮುಟ್ಟಿನ ರಜೆಗಳನ್ನು ನೀಡುತ್ತವೆ.

ವಿಡಿಯೊ ನೊಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...