Homeಕರ್ನಾಟಕವರ್ಷಕ್ಕೆ 6 ಮುಟ್ಟಿನ ರಜೆ ಜಾರಿ ಮಾಡಲಿರುವ ರಾಜ್ಯ ಸರ್ಕಾರ: ವರದಿ

ವರ್ಷಕ್ಕೆ 6 ಮುಟ್ಟಿನ ರಜೆ ಜಾರಿ ಮಾಡಲಿರುವ ರಾಜ್ಯ ಸರ್ಕಾರ: ವರದಿ

- Advertisement -
- Advertisement -

ರಾಜ್ಯದ ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಇರುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪರಿಚಯಿಸಲು ರಾಜ್ಯ ಸರ್ಕಾರವು ಸಿದ್ಧವಾಗಿದೆ. ಮಹಿಳೆಯರಿಗೆ ಮುಟ್ಟಿನ ರಜೆಯ ಬಗ್ಗೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಬೆನ್ನಿಗೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಈ ಬಗ್ಗೆ ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿದ್ದು, ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ರಜೆಯ ಒಪ್ಪಿಗೆಗಾಗಿ ಅದನ್ನು ಶಾಸಕಾಂಗದ ಮುಂದೆ ಇಡಲಾಗುವುದು” ಎಂದು ಕಾರ್ಮಿಕ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ.ಮುಟ್ಟಿನ ರಜೆ

ಇದನ್ನೂ ಓದಿ:ಸಿಖ್ಖರ ವಿರುದ್ಧ ಹೇಳಿಕೆ ಆರೋಪ | ರಾಹುಲ್ ಗಾಂಧಿ ವಿರುದ್ಧ ಛತ್ತೀಸ್‌ಗಢದಲ್ಲಿ ಮೂರು FIR 

ಸರ್ಕಾರವು ಈ ಕ್ರಮವನ್ನು ಮೊದಲು ಖಾಸಗಿ ವಲಯಕ್ಕೆ ಪರಿಚಯಿಸಲು ಯೋಜಿಸಿದ್ದು, ಅದನ್ನು ನೀತಿ ಮಾಡಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯವಾಗಿ ಮಾಡಲು ಯೋಜಿಸಿದೆ ಎಂದು ಅವರು ಹೇಳಿದ್ದಾರೆ. ಈ ವಿಷಯದ ಬಗ್ಗೆ ಒಂದು ನೀತಿ ಇರಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ಮೊಹ್ಸಿನ್ ಹೇಳಿದ್ದಾರೆ.

ಈ ವರ್ಷದ ಜುಲೈನಲ್ಲಿ, ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆಯ ಬಗ್ಗೆ ಮಾದರಿ ನೀತಿಯನ್ನು ರೂಪಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವು ಕೇಳಿತ್ತು. ಉದ್ಯೋಗದಾತರು ಅಂತಹ ರಜೆಯನ್ನು ನೀಡುವುದನ್ನು ಕಡ್ಡಾಯಗೊಳಿಸುವುದು ಮಹಿಳೆಯರಿಗೆ ಅವರ ಉದ್ಯೋಗಗಳಲ್ಲಿ ಭಾಗವಹಿಸುವುದಕ್ಕೆ ಅನುಕೂಲವಾಗುತ್ತದೆ ಎಂದು ಅದು ಹೇಳಿತ್ತು.

ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೂಡಾ ಕರ್ನಾಟಕದಲ್ಲಿ ಮುಟ್ಟಿನ ರಜೆಯನ್ನು ಪರಿಚಯಿಸುವ ಪ್ರಸ್ತಾಪದ ಬಗ್ಗೆ ಮಾಧ್ಯಮದ ಜೊತೆಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಕಾರ್ಮಿಕ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ ಮಾತನಾಡಿ, ಪ್ರಸ್ತಾವನೆ ಚರ್ಚೆ ಹಂತದಲ್ಲಿದೆ. ಸಚಿವರು ಅದನ್ನು ತರಲು ಯೋಜಿಸಿದ್ದರು. ಆದರೆ ಅದನ್ನು ಮೊದಲು ಕಾರ್ಮಿಕ ಇಲಾಖೆಯು ಕೆಲವೇ ದಿನಗಳಲ್ಲಿ ಪರಿಶೀಲಿಸುತ್ತದೆ. ಅದರ ನಂತರ, ಇದು ಇಲಾಖೆ ಮತ್ತು ಸರ್ಕಾರಿ ಹಂತಗಳಲ್ಲಿ ಚಲಿಸುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, IT-BT, ಆರೋಗ್ಯ, ವಾಣಿಜ್ಯ ಮತ್ತು ಕೈಗಾರಿಕೆಗಳ ಇಲಾಖೆಗಳು ಮತ್ತು ಇತರ ಸಂಬಂಧಿತ ವಲಯಗಳ ಜೊತೆಗೆ ಕೂಡಾ ಸಲಹೆ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ, “ನಮ್ಮ ಉದ್ಯೋಗಿಗಳಲ್ಲಿ ಮಹಿಳೆಯರು ಗಮನಾರ್ಹವಾಗಿ ಇದ್ದಾರೆ. ಅವರ ಅಗತ್ಯತೆಗಳು ಪುರುಷರಿಗಿಂತ ಭಿನ್ನವಾಗಿವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವೇದನಾಶೀಲವಾಗಿರುವ ಸರ್ಕಾರವಾಗಿ ಈ ಅಗತ್ಯಗಳಿಗೆ ನಾವು ಈ ಸಮಸ್ಯೆಯನ್ನು ಆದ್ಯತೆಯಾಗಿ ತೆಗೆದುಕೊಳ್ಳುತ್ತಿದ್ದೇವೆ. ಮಹಿಳೆಯರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮವನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

1992 ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿ ಬಿಹಾರ ಹೊರಹೊಮ್ಮಿತ್ತು. ಅಲ್ಲಿ ಪ್ರತಿ ತಿಂಗಳು ಎರಡು ದಿನಗಳ ರಜೆಯನ್ನು ಮಹಿಳೆಯರಿಗೆ ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ಸರ್ಕಾರಗಳು ಮಹಿಳೆಯರಿಗೆ ಮುಟ್ಟಿನ ರಜೆಯನ್ನು ನೀಡುತ್ತವೆ. ಜಾಗತಿಕವಾಗಿ, ಸ್ವೀಡನ್, ಇಟಲಿ, ದಕ್ಷಿಣ ಕೊರಿಯಾ, ತೈವಾನ್ ಮತ್ತು ಜಪಾನ್ ಮಹಿಳೆಯರಿಗೆ ಮುಟ್ಟಿನ ರಜೆಗಳನ್ನು ನೀಡುತ್ತವೆ.

ವಿಡಿಯೊ ನೊಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...