Homeಮುಖಪುಟಮಾಂಸಾಹಾರ ತ್ಯಜಿಸುವಂತೆ ಪ್ರಿಯಕರನಿಂದ ಕಿರುಕುಳ ಆರೋಪ : ಮಹಿಳಾ ಪೈಲಟ್ ಆತ್ಮಹತ್ಯೆ

ಮಾಂಸಾಹಾರ ತ್ಯಜಿಸುವಂತೆ ಪ್ರಿಯಕರನಿಂದ ಕಿರುಕುಳ ಆರೋಪ : ಮಹಿಳಾ ಪೈಲಟ್ ಆತ್ಮಹತ್ಯೆ

- Advertisement -
- Advertisement -

ಏರ್ ಇಂಡಿಯಾ ವಿಮಾನದ ಮಹಿಳಾ ಪೈಲಟ್ ಒಬ್ಬರು ಮುಂಬೈನ ತನ್ನ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಪ್ರಿಯಕರನ ಕಿರುಕುಳಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ವಾಣಿಜ್ಯ ಪೈಲಟ್ ಸೃಷ್ಟಿ ತುಲಿ ಸಾವನ್ನಪ್ಪಿದವರು. ಈಕೆಯ ಪ್ರಿಯಕರ ಆದಿತ್ಯ ಪಂಡಿತ್ ಎಂಬಾತ ಮಾಂಸಾಹಾರ ತ್ಯಜಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗೋರಖ್‌ಪುರ ಮೂಲದ ಸೃಷ್ಟಿ ತುಲಿ, ಮುಂಬೈನ ಮರೋಲ್ ಪ್ರದೇಶದ ಕನಕಿಯಾ ರೈನ್ ಫಾರೆಸ್ಟ್ ಅಪಾರ್ಟ್‌ಮೆಂಟ್‌ನ ತನ್ನ ಫ್ಲಾಟ್‌ನಲ್ಲಿ ಮಂಗಳವಾರ (26) ತಡರಾತ್ರಿ ಡೇಟಾ ಕೇಬಲ್‌ನಿಂದ ನೇಣು ಬಿಗಿದುಕೊಂಡಿದ್ದಾರೆ. ದೆಹಲಿಯಲ್ಲಿ ನೆಲೆಸಿದ್ದ ಆಕೆಯ ಪ್ರಿಯಕರ ಆದಿತ್ಯ ಪಂಡಿತ್ ಜೊತೆ ಜಗಳವಾಡಿದ ನಂತರ ಈ ಘಟನೆ ನಡೆದಿದೆ.

ಪೊಲೀಸರು ಆದಿತ್ಯ ಪಂಡಿತ್‌ನನ್ನು ಬಂಧಿಸಿ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. “ಪೊವೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಪೈಲಟ್ ಎಂದು ಹೇಳಲಾದ ಸೃಷ್ಟಿ ತುಲಿ ಎಂಬ ಯುವತಿ ನವೆಂಬರ್ 24 ಮತ್ತು 25ರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಆಕೆಯ ಗೆಳೆಯ ಆದಿತ್ಯ ಪಂಡಿತ್‌ನನ್ನು ಬಂಧಿಸಿದ್ದಾರೆ” ಎಂದು ಮುಂಬೈ ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸೃಷ್ಟಿ ತುಲಿ ಅವರು ಗೋರಖ್‌ಪುರದ ಮೊದಲ ಮಹಿಳಾ ಪೈಲಟ್ ಆಗಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಸನ್ಮಾನಿಸಲ್ಪಟ್ಟಿದ್ದರು. ಈ ವಿಚಾರವನ್ನು ಸೃಷ್ಟಿ ತುಲಿಯ ಚಿಕ್ಕಪ್ಪ ವಿವೇಕ್ ತುಲಿ ಇಂಡಿಯಾ ಟುಡೇ ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ವರದಿಗಳು ವಿವರಿಸಿವೆ.

ಸೃಷ್ಟಿ ಕಳೆದ ವರ್ಷ ಜೂನ್‌ನಿಂದ ಕೆಲಸದ ನಿಮಿತ್ತ ಮುಂಬೈನಲ್ಲಿ ನೆಲೆಸಿದ್ದರು. ಎರಡು ವರ್ಷಗಳ ಹಿಂದೆ ದೆಹಲಿಯಲ್ಲಿ ಕಮರ್ಷಿಯಲ್ ಪೈಲಟ್ ಕೋರ್ಸ್ ಓದುತ್ತಿದ್ದಾಗ ಆಕೆ ಮತ್ತು ಆದಿತ್ಯ ಪಂಡಿತ್ ಭೇಟಿಯಾಗಿದ್ದರು. ಅಲ್ಲಿಂದ ಅವರಿಬ್ಬರ ನಡುವೆ ಪ್ರೀತಿಯಾಗಿತ್ತು ಎಂದು ಪೊವೈ ಪೊಲೀಸ್ ಠಾಣೆಯ ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಆತ್ಮಹತ್ಯೆಗೂ ಮುನ್ನ ತುಲಿ ಮತ್ತು ಪಂಡಿತ್ ನಡುವೆ ಜಗಳ ನಡೆದಿತ್ತು. ಬಳಿಕ ಪಂಡಿತ್ ಕಾರಿನಲ್ಲಿ ದೆಹಲಿಗೆ ಹೊರಟಿದ್ದರು. ಪ್ರಯಾಣದ ಮಧ್ಯೆ ಪಂಡಿತ್‌ಗೆ ಕರೆ ಮಾಡಿದ್ದ ತುಲಿ, ತಾನು ಜೀವನವನ್ನು ಕೊನೆಗೊಳಿಸುವುದಾಗಿ ಹೇಳಿದ್ದಾರೆ. ತಕ್ಷಣ ಕಾರು ತಿರುಗಿಸಿದ ಪಂಡಿತ್ ಮುಂಬೈಗೆ ಆಗಮಿಸಿದ್ದಾರೆ. ಈ ವೇಳೆ ತುಲಿ ಅವರ ಮನೆಯ ಬಾಗಿಲು ಲಾಕ್ ಆಗಿತ್ತು. ಬಳಿಕ ಕೀ ಮಾಡುವವರ ಸಹಾಯದಿಂದ ಬಾಗಿಲು ತೆರೆಯಲಾಯಿತು. ಈ ವೇಳೆ ತುಲಿ ಡೇಟಾ ಕೇಬಲ್‌ನಿಂದ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ತಕ್ಷಣ ಆಕೆಯನ್ನು ಇಳಿಸಿ ಸೆವೆನ್ ಹಿಲ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆಕೆ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಮನೆಯಲ್ಲಿ ಯಾವುದೇ ಆತ್ಮಹತ್ಯಾ ಪತ್ರ ಕಂಡು ಬಂದಿಲ್ಲ ಎಂದು ಕೆಲ ವರದಿಗಳು ವಿವರಿಸಿವೆ.

ಆಹಾರ ಪದ್ದತಿಯನ್ನು ಬದಲಾಯಿಸುವಂತೆ ಆದಿತ್ಯ ಪಂಡಿತ್ ಸೃಷ್ಟಿ ತುಲಿಗೆ ಒತ್ತಡ ಹೇರುತ್ತಿದ್ದ. ಸಾರ್ವಜನಿಕವಾಗಿ ಅವಮಾನಿಸುತ್ತಿದ್ದ. ಆತನ ಕಿರುಕುಳಕ್ಕೆ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ಬಳಿಕ ಪಂಡಿತ್ ಸಾಕ್ಷ್ಯ ನಾಶ ಮಾಡಿದ್ದಾನೆ ಎಂದು ಆರೋಪಿಸಿ ಸೃಷ್ಟಿ ತುಲಿಯ ಚಿಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಇದನ್ನೂ ಓದಿ : ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...