Homeಚಳವಳಿಮದ್ಯ ನಿಷೇಧ ಆಂದೋಲನದಲ್ಲಿ ಮಡಿದ ರೇಣುಕಮ್ಮ ನೆನಪಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭ..

ಮದ್ಯ ನಿಷೇಧ ಆಂದೋಲನದಲ್ಲಿ ಮಡಿದ ರೇಣುಕಮ್ಮ ನೆನಪಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭ..

ಮಹಿಳೆಯರ ಸ್ವಾಭಿಮಾನ ಮತ್ತು ಕುಟುಂಬಗಳ ರಕ್ಷಣೆಗಾಗಿ ಅನಿರ್ದಿಷ್ಟ ಉಪವಾಸ ಮಾಡುತ್ತಿದ್ದೇವೆ ಎಂದು ಘೋಷಿಸಿದ್ದಾರೆ. ಬೀರ್ ಬೇಡ, ನೀರು ಬೇಕು. ಸರಾಯಿ ಬೇಡ, ಶಿಕ್ಷಣ ಬೇಕು ಎಂಬ ಘೋಷಣೆಗಳನ್ನು ಮೊಳಗಿಸಿದ್ದಾರೆ

- Advertisement -
- Advertisement -

ಕಳೆದ ವರ್ಷ ಇದೇ ತಿಂಗಳಲ್ಲಿ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಚಿತ್ರದುರ್ಗದಿಂದ ಬೆಂಗಳೂರುವರೆಗೆ ನಡೆದ ಪಾದ ಯಾತ್ರೆ ಸಮಯದಲ್ಲಿ ಅಪಘಾತದಿಂದ ಮಡಿದ ರೇಣುಕಮ್ಮ ನೆನಪಿನಲ್ಲಿ ಇಂದು ಕೂಡಲಸಂಗಮದಲ್ಲಿ ಉಪವಾಸ ಸತ್ಯಾಗ್ರಹ ಆರಂಭವಾಗಿದೆ.

ಭಾಗಲಕೋಟೆಯ ಕೂಡಲಸಂಗಮದಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ನೂರಾರು ಮಹಿಳೆಯರು ಹೋರಾಟ ಆರಂಭಿಸಿದ್ದು ಸಾಂಕೇತಿವಾಗಿ ಶಂಕರಮ್ಮ, ರಾಮಜಾನಬಿ, ರೇಣುಕಾ, ಕೊಟ್ರಮ್ಮ ಮತ್ತು ಅಭಯ್‌ ಸೇರಿದಂತೆ ಹಲವರು ಉಪವಾಸ ಕೈಗೊಂಡಿದ್ದಾರೆ.

ನವೆಂಬರ್ 2019ರ ನವೆಂಬರ್‌ 07ರಂದು ಬೆಂಗಳೂರಿನ ರೈಲ್ವೇ ನಿಲ್ದಾಣದ ಮುಂಭಾಗ ಮದ್ಯ ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರು ಹೋರಾಟ ನಡೆಸಿದಾಗ ಉಪ ಮುಖ್ಯ ಮಂತ್ರಿಗಳಾದ ಅಶ್ವತ್ ನಾರಾಯಣ ಅವರು ಆಗಮಿಸಿ, ಎರಡು ವಾರದೊಳಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಿ ಸಭೆ ನಡೆಸುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಮೂರು ತಿಂಗಳಾಗುತ್ತಾ ಬಂದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮಹಿಳೆಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಾವು ಮಹಿಳೆಯರು ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇಂದಿನಿಂದ ಉಪವಾಸ ಸತ್ಯಾಗ್ರಹದ ಜೊತೆಗೆ ನಾಳೆ ಜಲ ಸತ್ಯಾಗ್ರಹವನ್ನು ನಡೆಸುತ್ತೇವೆ. ಗಾಂಧಿ ಹುತಾತ್ಮರಾದ ಜನೆವರಿ ಜನವರಿ 30, 2020ರವರೆಗೆ ಹೋರಾಟ ಮುಂದುವರೆಸುತ್ತೇವೆ. ಸರ್ಕಾರ ಸ್ಪಂದಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವ ಕುರಿತು ನಿರ್ಣಯ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಹಿಳೆಯರ ರಕ್ಷಣೆಗೆ, ಮಕ್ಕಳ ಭವಷ್ಯಕ್ಕಾಗಿ, ಆರೋಗ್ಯಕರ ಸಮಾಜಕ್ಕಾಗಿ ಮದ್ಯ ನಿಷೇಧ ಆಗಬೇಕು. ಮಹಿಳೆಯರ ಸ್ವಾಭಿಮಾನ ಮತ್ತು ಕುಟುಂಬಗಳ ರಕ್ಷಣೆಗಾಗಿ ಅನಿರ್ದಿಷ್ಟ ಉಪವಾಸ ಮಾಡುತ್ತಿದ್ದೇವೆ ಎಂದು ಘೋಷಿಸಿದ್ದಾರೆ. ಬೀರ್ ಬೇಡ, ನೀರು ಬೇಕು. ಸರಾಯಿ ಬೇಡ, ಶಿಕ್ಷಣ ಬೇಕು ಎಂಬ ಘೋಷಣೆಗಳನ್ನು ಮೊಳಗಿಸಿದ್ದಾರೆ.

ಹಕ್ಕೊತ್ತಾಯಗಳು
ಸಂವಿಧಾನದ 73ನೇ ತಿದ್ದುಪಡಿಯ ಆಶಯದಂತೆ ಅನುಷ್ಠಾನಗೊಳಿಸುವುದು (ಗ್ರಾಮಗಳ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನ ಗ್ರಾಮ ಸಭೆಗೆ ನೀಡುವುದು) ಉದಾ: ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು. (ಕಾನೂನು ಬಾಹಿರ, ಖಾಸಗಿ ಅಥವಾ ಸರಕಾರಿ ಮಳಿಗೆಗಳಾಗಿರಬಹುದು) ಈಗಾಗಲೇ ಗ್ರಾಮಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಗ್ರಾಮ ಪಂಚಾಯತಿಗಳಲ್ಲಿ ತಕ್ಷಣ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು.

ರಾಜ್ಯಗಳಲ್ಲಿ ಮದ್ಯ ಸೇವನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಅನುಚ್ಛೇದ 47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ “ಮದ್ಯ ಮುಕ್ತ ಕರ್ನಾಟಕ ನೀತಿಯತ್ತ” ಸಾಗುವ ಸಲುವಾಗಿ ಮೂರು ತಿಂಗಳೊಳಗೆ ಸಮಿತಿ ರಚಿಸಿ ಸರಕಾರದ ನೀತಿಯನ್ನು ಜಾರಿಗೊಳಿಸಬೇಕು.

ಈ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಮದ್ಯ ನಿಷೇಧ ಆಂದೋಲನದ ಸಂಘಟಕರೊಂದಿಗೆ ಕೂಡಲೇ ಸಭೆ ಕರೆಯಬೇಕು.

ಈ ಹಕ್ಕೊತ್ತಾಯಗಳನ್ನು ಮದ್ಯ ನಿಷೇಧ ಆಂದೋಲನವು ಮುಂದಿಟ್ಟು ಹೋರಾಟವನ್ನು ರೂಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...