Homeಮುಖಪುಟಪಶ್ಚಿಮ ಬಂಗಾಳ | ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಆರೋಪ

ಪಶ್ಚಿಮ ಬಂಗಾಳ | ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ಮೇದಿನಿಪುರ ಕಾಲೇಜಿನ ವಿದ್ಯಾರ್ಥಿನಿಯರು ಮಾರ್ಚ್ 3 ರಂದು ತಮ್ಮ ಕ್ಯಾಂಪಸ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರ ಸ್ಥಳೀಯ ಪೊಲೀಸರಿಂದ ಕಸ್ಟಡಿಯಲ್ಲಿ ಚಿತ್ರಹಿಂಸೆ ಅನುಭವಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿದ್ಯಾರ್ಥಿಗಳು ಕಲ್ಕತ್ತಾ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಪೊಲೀಸರು ಅವರ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಮಾರ್ಚ್ 1ರಂದು ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ದ ವಿದ್ಯಾರ್ಥಿ ವಿಭಾಗವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ರಾಜ್ಯಾದ್ಯಂತದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ತರಗತಿ ಬಹಿಷ್ಕರಿಸಿ ಪ್ರತಿಭಟಿಸುವಂತೆ ಕರೆ ನೀಡಿತ್ತು.

ಅದರಂತೆ, ರಾಜ್ಯಾದ್ಯಂತ ಅನೇಕ ಕಾಲೇಜುಗಳಲ್ಲಿ ಪ್ರತಿಭಟನೆ ನಡೆದಿತ್ತು. ಅವುಗಳಲ್ಲಿ ಮೇದಿನಿಪುರ ಕಾಲೇಜಿನ ವಿದ್ಯಾರ್ಥಿನಿಯರ ಪ್ರತಿಭಟನೆಯೂ ಒಂದು. ರಾಜ್ಯಾದ್ಯಂತ ಹಲವೆಡೆಗಳಲ್ಲಿ ಪ್ರತಿಭಟನೆ ವೇಳೆ ರಾಜಕೀಯ ಘರ್ಷಣೆಗಳು ನಡೆದಿತ್ತು.

ಪ್ರತಿಭಟನೆ ಬಳಿಕ ಯಾವುದೇ ಸರಿಯಾದ ಕಾರಣ ನೀಡದೆ, ಸೂಕ್ತ ಪ್ರಕ್ರಿಯೆ ಇಲ್ಲದೆ ನಮ್ಮನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೇದಿನಿಪುರ ಕಾಲೇಜಿನ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿದ್ದಾಗ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡಲಾಗಿದೆ ಎಂದು ಸುಚರಿತ ದಾಸ್ ಎಂಬ ವಿದ್ಯಾರ್ಥಿನಿ ಪತ್ರಕರ್ತರಿಗೆ ತಿಳಿಸಿದ್ದಾರೆ.

“ಅವರು ನನ್ನನ್ನು ಉದ್ದೇಶಿಸಿ ಲೈಂಗಿಕ ಹೇಳಿಕೆಗಳನ್ನು ನೀಡಿದ್ದಾರೆ. ಮೌಖಿಕವಾಗಿ ನಿಂದಿಸಿದ್ದಾರೆ. ಪೊಲೀಸರು ಆಡಳಿತ ಪಕ್ಷದ ತೋಳುಗಳಾಗಿ ಮಾರ್ಪಟ್ಟಿದ್ದಾರೆ. ಅವರಿಗೆ ಸ್ವಾತಂತ್ರ್ಯದಿಂದ ಪಕ್ಷಪಾತವಿಲ್ಲದೆ ಕೆಲಸ ಮಾಡಲು ಆಗುತ್ತಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಸುಚರಿತ ದಾಸ್ ಮತ್ತು ಅವರ ಗೆಳೆಯರು ಪ್ರತಿಭಟನೆ ನಡೆಸುತ್ತಿದ್ದಾಗ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೂಂಡಾಗಳು ಹಲವಾರು ವಿದ್ಯಾರ್ಥಿನಿಯರಿಗೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಟಿಎಂಸಿ ಗೂಂಡಾಗಳ ಮೇಲೆ ಕ್ರಮ ಕೈಗೊಳ್ಳುವ ಬದಲು, ಸ್ಥಳೀಯ ಪೊಲೀಸರು ವಿದ್ಯಾರ್ಥಿನಿಯರನ್ನು ಹಿಂಸಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ಹಲವು ಗಂಟೆಗಳ ಚಿತ್ರಹಿಂಸೆಯ ನಂತರ, ಮಾರ್ಚ್ 4ರಂದು ಬೆಳಗಿನ ಜಾವ 2:30ಕ್ಕೆ ಸುಚರಿತ ದಾಸ್ ಅವರು ಅಂತಿಮವಾಗಿ ಬಿಡುಗಡೆ ಮಾಡಲಾಯಿತು” ಎಂದು ಪಶ್ಚಿಮ ಬಂಗಾಳದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ದೇಬಂಜನ್ ಡೇ ತಿಳಿಸಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಪಶ್ಚಿಮ ಮೇದಿನಿಪುರದ ಪೊಲೀಸ್ ವರಿಷ್ಠಾಧಿಕಾರಿ ದೃತಿಮಾನ್ ಸರ್ಕಾರ್ ಪೊಲೀಸರ ವಿರುದ್ದದ ಆರೋಪಗಳನ್ನು ನಿರಾಕರಿಸಿದ್ದಾರೆ. “ಎಡಪಂಥೀಯ ವಿದ್ಯಾರ್ಥಿ ಸಂಘಟನೆಯವರು ವಿಷಯವನ್ನು ದೊಡ್ಡದು ಮಾಡಲು ಪ್ರಯತ್ನಿಸುತ್ತಿದ್ದಾರೆ. ‘ನಮಗೆ ಒಳ್ಳೆಯ ವಿಷಯ ಸಿಕ್ಕಿದೆ. ಪೊಲೀಸರ ಮೇಲೆ ಒತ್ತಡ ಹೇರಿ ಇದನ್ನು ಕೋರ್ಟ್‌ಗೆ ಕೊಂಡೊಯ್ಯಬೇಕು’ ಎಂದು ಅದರ ಜಿಲ್ಲಾ ಕಾರ್ಯದರ್ಶಿ ಹೇಳಿರುವ ವೈರಲ್ ವಿಡಿಯೋ ನಮಗೆ ದೊರೆತಿದೆ” ಎಂದಿದ್ದಾರೆ.

ಮೇದಿನಿಪುರ ಕಾಲೇಜಿನ ವಿದ್ಯಾರ್ಥಿಗಳು ಕಸ್ಟಡಿ ಪೊಲೀಸ್ ಚಿತ್ರಹಿಂಸೆಯ ವಿರುದ್ಧ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ನ್ಯಾಯಮೂರ್ತಿ ತೀರ್ಥಂಕರ ಘೋಷ್ ಅವರು ಶೀಘ್ರದಲ್ಲೇ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಆದರೆ, ದಿನಾಂಕವನ್ನು ಇನ್ನೂ ನಿಗದಿಪಡಿಸಲಾಗಿಲ್ಲ.

ಈ ಹಿಂದೆ, ಮಾರ್ಚ್ 1ರ ಪ್ರತಿಭಟನೆಯ ಸಮಯದಲ್ಲಿ ‘ಪೊಲೀಸರ ನಿಷ್ಕ್ರಿಯತೆ’ ಮತ್ತು ‘ತಟಸ್ಥವಲ್ಲದ ನಿಲುವು’ ಬಗ್ಗೆ ಆರೋಪಿಸಿ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು ಸಲ್ಲಿಸಲಾಗಿತ್ತು.

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...