Homeಮುಖಪುಟತಾಳಿ, ರಾಖಿಗಳ ನಡುವೆ ಕಳೆದುಹೋಗುತ್ತವೆ ಹೆಣ್ಣಿನ ಘನತೆ ಮತ್ತು ಹಕ್ಕುಗಳು!

ತಾಳಿ, ರಾಖಿಗಳ ನಡುವೆ ಕಳೆದುಹೋಗುತ್ತವೆ ಹೆಣ್ಣಿನ ಘನತೆ ಮತ್ತು ಹಕ್ಕುಗಳು!

ಗುಜರಾತಿನಲ್ಲಿ ನೀರು ಕೇಳಿದ್ದಳೆಂದು ಶಾಸಕನೊಬ್ಬ ಮಹಿಳೆಯ ಮೇಲೆ ಅಮಾನವೀಯ ಥಳಿಸುವ ವಿಡಿಯೊ ವೈರಲ್ ಆಗಿತ್ತು. ಆದರೆ ಈಗ ಅದೇ ಮಹಿಳೆ ಆತನ ಕೈಗೆ ರಾಖೀ ಕಟ್ಟಿ ರಾಜೀ ಮಾಡಿಕೊಳ್ಳುವಂತೆ ಮಾಡಲಾಗಿದೆ. ಅಂದರೆ ಥಳಿಸಿದವೇ ರಕ್ಷಕನೆಂದು ಬಿಂಬಿಸುವ ಪರಿ ಏನನ್ನು ಸೂಚಿಸುತ್ತದೆ?

- Advertisement -
- Advertisement -

| ಮಲ್ಲಿಗೆ ಸಿರಿಮನೆ |

ಮಹಿಳೆಯರ ಮೇಲೆ ಅಥವಾ ಇನ್ನಿತರ ಶೋಷಿತರ ಮೇಲೆ ನಡೆಯುವ ದೌರ್ಜನ್ಯದ ಘಟನೆಗಳನ್ನು ಅನ್ಯಾಯದ ವಿರುದ್ಧದ ಹೋರಾಟದ ರೂಪ ಪಡೆಯದಂತೆ ತಡೆಯುವ ವಿಧಾನವನ್ನು ನಮ್ಮ ಶ್ರೇಣೀಕೃತ ಸಮಾಜ ವ್ಯವಸ್ಥೆ ಗಟ್ಟಿಯಾಗಿ ರೂಪಿಸಿಕೊಂಡಿದೆ. ತನ್ನ ಸ್ಥಾಪಿತ ಸಿದ್ಧ ಮಾದರಿಯೊಳಗೇ ಆ ದೌರ್ಜನ್ಯವನ್ನೂ ಅದಕ್ಕೆ ಬಲಿಯಾದವರನ್ನೂ ಸೆಳೆದುಕೊಂಡು, ಅರಗಿಸಿಕೊಂಡು ಏನೂ ಆಗಿಯೇ ಇಲ್ಲವೆಂಬಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವ ತಂತ್ರಗಾರಿಕೆಯನ್ನು ರೂಢಿಸಿಕೊಂಡಿದೆ.

ಹೆಣ್ಣುಮಕ್ಕಳ ಮೇಲೆ ಯಾರಾದರೊಬ್ಬ ದುಷ್ಟ ಅತ್ಯಾಚಾರ ಎಸಗಿದರೆ, ಆತನ ಕೃತ್ಯವನ್ನು ಬಯಲಿಗೆಳೆದು ಶಿಕ್ಷಿಸುವ ಬದಲು, ಶೀಲ, ಮಾನ, ಮರ್ಯಾದೆಗಳ ಹೆಸರಿನಲ್ಲಿ ಆ ಹೆಣ್ಣುಮಗಳಿಗೆ ಆತನ ಕೈಯ್ಯಲ್ಲೇ ತಾಳಿ ಕಟ್ಟಿಸಲಾಗುತ್ತದೆ. ಆತನೋ, ತಾನೇನೋ ದೊಡ್ಡ ತ್ಯಾಗ ಮಾಡಿ ಆಕೆಗೆ ‘ಬಾಳು’ ಕೊಡುತ್ತಿದ್ದೇನೆಂಬ ಅಹಂನಲ್ಲಿ ತಾಳಿಕಟ್ಟುತ್ತಾನೆ. ಅಸಹನೀಯವಾದ ಕ್ರೌರ್ಯಕ್ಕೆ ತುತ್ತಾಗಿದ್ದು ಮಾತ್ರವಲ್ಲದೆ ಹೆಣ್ಣುಮಕ್ಕಳು ಜೀವನಪಯರ್ಂತ ಅದರ ನೆನಪು ಮತ್ತು ನೆರಳಿನಲ್ಲೇ ಕೊರಗುತ್ತಾ ಬದುಕು ಸವೆಸಬೇಕಾಗುತ್ತದೆ. ಆದರೆ, ಸಂಪ್ರದಾಯನಿಷ್ಠ ಮನಸ್ಥಿತಿ, ಕಟ್ಟುಪಾಡುಗಳ ಕಬಂಧ ಬಾಹುಗಳು ಎಷ್ಟು ಬಲವಾಗಿವೆಯೆಂದರೆ ಇದನ್ನು ವಿರೋಧಿಸುವ ಮಾನಸಿಕ ಸ್ಥೈರ್ಯವೂ ಮಹಿಳಾ ಸಮುದಾಯಕ್ಕೆ ದಕ್ಕುವುದು ಕಷ್ಟಸಾಧ್ಯ!

ಅತ್ಯಾಚಾರದ ಪ್ರಕರಣ ಅಲ್ಲದಿದ್ದರೂ, ಇಂತಹದ್ದೇ ಕಟ್ಟುಪಾಡಿನ ಕಪಿಮುಷ್ಠಿಯೊಳಕ್ಕೆ ಮಹಿಳಾ ಹಕ್ಕುಗಳನ್ನು ಸೆಳೆದುಕೊಳ್ಳುವಂತಹ ಘಟನೆಯೊಂದು ಗುಜರಾತ್‍ನಿಂದ ವರದಿಯಾಗಿದೆ. ಗುಜರಾತ್‍ನ ಅಹಮದಾಬಾದ್‍ನ ನರೋಡಾ ವಿಧಾನಸಭಾ ಕ್ಷೇತ್ರದ ಶಾಸಕ ಬಲರಾಮ್ ತವಾನಿ ಮತ್ತು ಆತನ ಸಹೋದರ ಅಲ್ಲಿನ ಕಾರ್ಪೊರೇಟರ್ ಕಿಶೋರ್ ತವಾನಿ ಇಬ್ಬರೂ ಸೇರಿ, ಸ್ಥಳೀಯ ಎನ್‍ಸಿಪಿ ನಾಯಕಿ ನೀತು ತೇಜ್ವಾನಿ ಮೇಲೆ ಸಾರ್ವಜನಿಕವಾಗಿ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ; ಅಮಾನುಷವಾಗಿ ನೆಲಕ್ಕೆ ತಳ್ಳಿ ಒದ್ದು ಹಾಕಿ ಸ್ಟಿಕ್‍ಗಳಿಂದ ಥಳಿಸಿದ್ದಾರೆ; ಇದರ ಮೇಲೆ ಗಂಭೀರವಾದ ಕಾನೂನು ಕ್ರಮ ನಡೆಯಬೇಕಿತ್ತು; ಅದರ ಬದಲು ಪತ್ರಿಕಾ ಗೋಷ್ಠಿಯಲ್ಲಿ ನೀತು ತೇಜ್ವಾನಿ ಕೈಯ್ಯಲ್ಲಿ ಬಲರಾಮ್ ತವಾನಿಗೆ ‘ರಾಖಿ ಕಟ್ಟಿಸುವ’ ಮೂಲಕ ಪ್ರಕರಣಕ್ಕೆ ಅಂತ್ಯ ಹಾಡಲಾಗಿದೆ!! ಆ ಮೂಲಕ, ಆಕ್ರಮಣ ನಡೆಸಿದವನ ಕೈಗೇ ದಾಳಿಗೆ ತುತ್ತಾದವಳನ್ನು ‘ರಕ್ಷಿಸುವ ಜವಾಬ್ದಾರಿ’ ನೀಡಲಾಗಿದೆ!?

ನಡೆದದ್ದಿಷ್ಟು

ನರೋಡದ ಎನ್‍ಸಿಪಿ ನಾಯಕಿ ನೀತು ಅವರ ಮನೆಯ ಹತ್ತಿರ ಒಂದಷ್ಟು ಹೆಣ್ಣುಮಕ್ಕಳು ನೀರಿನ ಸಮಸ್ಯೆ ಹೇಳಿಕೊಂಡು ಬಂದಿದ್ದಾರೆ. ಹಲವು ದಿನಗಳಿಂದ ತಮ್ಮ ಮನೆಗಳಿಗೆ ನೀರಿನ ಸಂಪರ್ಕ ಕಡಿತಗೊಂಡಿದ್ದು, ನೀರಿನ ತೊಂದರೆ ತೀವ್ರವಾಗಿದೆಯೆಂದೂ, ಆ ಪ್ರದೇಶದ ಮಹಿಳಾ ನಾಯಕಿಯಾದ ನೀತು ಈ ಬಗ್ಗೆ ಏನಾದರೂ ಮಾಡಿ ಸಮಸ್ಯೆ ಪರಿಹರಿಸಬೇಕೆಂದೂ ಕೇಳಿದ್ದಾರೆ. ಅದಕ್ಕೆ ಸ್ಪಂದಿಸಿದ ನೀತು ತೆಜ್ವಾನಿಯವರು, ಸ್ಥಳೀಯ ಕಾರ್ಪೊರೇಟರ್ ಕಿಶೋರ್ ತವಾನಿಯನ್ನು ಭೇಟಿಯಾಗಿ ಸಮಸ್ಯೆ ಹೇಳಿಕೊಳ್ಳಲು ಈ ಹೆಣ್ಣುಮಕ್ಕಳನ್ನೂ ಕರೆದುಕೊಂಡು ಹೋಗಿದ್ದಾರೆ.

ನಿತು ತೇಜ್ವಾನಿ, ಚಿತ್ರ ಕೃಪೆ: ಎ.ಎನ್.ಐ

ಆದರೆ, ಸ್ಥಳೀಯ ಜನಪ್ರತಿನಿಧಿಯಾದ ಕಿಶೋರ್ ತವಾನಿ (ನರೋಡಾದ ಎಂಎಲ್‍ಎ ಬಲರಾಮ್ ತವಾನಿಯ ಸಹೋದರ), ಹೆಣ್ಣುಮಕ್ಕಳ ಮಾತನ್ನೂ ಪೂರ್ತಿ ಕೇಳದೆಯೇ ನೀತು ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಅತ್ಯಂತ ಅವಾಚ್ಯವಾಗಿ ನಿಂದಿಸುತ್ತಾ ಅಮಾನುಷವಾಗಿ ನೀತು, ಆಕೆಯ ಪತಿ ಮತ್ತು ಜೊತೆಗೆ ಬಂದಿದ್ದ ಮಹಿಳೆಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಕಿಶೋರ್ ಮೇಲೆ ಇವರುಗಳು ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ.

ಇದರಿಂದ ಆಕ್ರೋಶಗೊಂಡ ನೀತು ತೇಜ್ವಾನಿ ಮತ್ತು ಸಂಗಡಿಗರು, ಕಾರ್ಪೊರೇಟರ್‍ನ ಸಹೋದರನೇ ಆದ ಎಂಎಲ್‍ಎಯನ್ನು ಭೇಟಿಯಾಗಿ ನ್ಯಾಯ ಕೇಳಲಿಕ್ಕೆಂದು ಭಾನುವಾರ ಬೆಳಿಗ್ಗೆ ಸ್ಥಳೀಯ ಬಿಜೆಪಿ ಕಛೇರಿಗೆ ಹೋಗಿದ್ದಾರೆ. ಎಂಎಲ್‍ಎ ಇಲ್ಲದ್ದರಿಂದ ಕಾಯುತ್ತಿದ್ದಾಗ, ಕಛೇರಿಯಲ್ಲಿದ್ದ ಬಿಜೆಪಿ ಕಾರ್ಯಕರ್ತರ ಉದ್ಧಟ ನಡವಳಿಕೆಯಿಂದ ರೋಸಿ ಹೋಗಿ, ಕಿಶೋರ್ ವಿರುದ್ಧ ನೀತು ಮತ್ತು ಇತರ ಮಹಿಳೆಯರು ಘೋಷಣೆಗಳನ್ನು ಕೂಗಲಾರಂಭಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಎಂಎಲ್‍ಎ ಬಲರಾಮ್ ಮತ್ತು ಆತನ ಸಂಗಡಿಗರು ಏಕಾಏಕಿ ನೀತು ಅವರ ಮುಖಕ್ಕೆ ಹೊಡೆದು ಅವರನ್ನು ನೆಲಕ್ಕೆ ಕೆಡವಿದ್ದಲ್ಲದೆ ಕಾಲಿನಿಂದ ಪದೇ ಪದೇ ಬಲವಾಗಿ ಒದ್ದಿದ್ದಾರೆ. ನಂತರ ಹಾಕಿ ಸ್ಟಿಕ್‍ಗಳನ್ನು ತರಿಸಿಕೊಂಡು ಕಾಲುಗಳನ್ನು ಥಳಿಸಿದ್ದಾರೆ. ಇವೆಲ್ಲವನ್ನೂ ನೀತು ಅವರ ಪತಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಯಾವಾಗ ನೀತು ಅವರನ್ನು ಸ್ಟಿಕ್‍ಗಳಿಂದ ಥಳಿಸಲಾರಂಭಿಸಿದರೋ ಅವರನ್ನು ಬಿಡಿಸಿಕೊಳ್ಳಲೆಂದು ಮುನ್ನುಗ್ಗಿದ ಆಕೆಯ ಪತಿಯನ್ನು ಕೂಡಾ ಬಿಜೆಪಿ ಕಾರ್ಯಕರ್ತರು ಥಳಿಸಿದ್ದಾರೆ. ಈ ಬಗ್ಗೆ ನೀತು ಪೊಲೀಸ್ ಠಾಣೆಯಲ್ಲಿ ಎಂಎಲ್‍ಎ ಬಲರಾಮ್ ತವಾಣಿ ವಿರುದ್ಧ ದೂರು ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆದ ನಂತರ, ಪತ್ರಿಕಾ ಗೋಷ್ಠಿ ನಡೆಸಿದ ಶಾಸಕ ತವಾನಿ, ಮೊದಲಿಗೆ ತನ್ನನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದಾನೆ, ಆದರೆ ನಂತರ ಇದು ಉದ್ವಿಗ್ನ ಮನಸ್ಥಿತಿಯಲ್ಲಿ ಆದ ಘಟನೆ, ಅದಕ್ಕಾಗಿ ಕ್ಷಮೆ ಕೋರುವುದಾಗಿಯೂ ಹೇಳಿದ್ದಾನೆ. ಅಂದರೆ, ತಾನು ಆಕ್ರಮಣ ನಡೆಸಿದ್ದು ನಿಜವೆಂದು ಮಾಧ್ಯಮಗಳ ಮುಂದೆಯೇ ಒಪ್ಪಿಕೊಂಡಿದ್ದಾನೆ. ಅಷ್ಟಾದರೂ ಗುಜರಾತಿನ ಕಾನೂನು ಪರಿಪಾಲಕರು ಕಣ್ಣು ಮುಚ್ಚಿಕೊಂಡು ಸುಮ್ಮನೆ ಕೂತಿದ್ದಾರೆ. ರಾಜ್ಯ ಬಿಜೆಪಿ ಮುಖಂಡರು ತಮ್ಮ ಪಕ್ಷದ ಶಾಸಕನ ಕೃತ್ಯವನ್ನು ಖಂಡಿಸುವ ಅನಿವಾರ್ಯತೆ ಬಂದಿದೆ. ಈ ಹಂತದಲ್ಲಿ ಆಘಾತಕಾರಿ ರೀತಿಯಲ್ಲಿ ತಕ್ಷಣದಲ್ಲೇ ಒಂದು ಸಾರ್ವಜನಿಕ ಸಭೆಯನ್ನು ಏರ್ಪಡಿಸಿದ ಶಾಸಕ, ಆ ಸಭೆಯಲ್ಲಿ ತನ್ನಿಂದ ಹಲ್ಲೆಗೊಳಗಾಗ ನೀತು ತವಾನಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತಾನೆ ಮತ್ತು ಆಕೆ ತನ್ನ ಸಹೋದರಿಯಿದ್ದಂತೆ, ಆಕೆಯ ರಕ್ಷಣೆ ತನ್ನ ಹೊಣೆಯೆಂದು ಭಾಷಣ ಕೊಡುತ್ತಾನೆ!!!

ರಾಖೀ ಕಟ್ಟುತ್ತಿರುವ ದೃಶ್ಯ

ಅದೇ ರೀತಿ, ಅದೇ ದಿನ ಡೆಹ್ರಾಡೂನ್‍ನ ಅತ್ಯಾಚಾರಕ್ಕೊಳಗಾದ ದಲಿತ ಬಾಲಕಿಯ ವಿಚಾರದಲ್ಲೂ ಸಾರಾಸಗಟು ಕಾನೂನು ಉಲ್ಲಂಘನೆ ನಡೆದಿರುವುದು ಪತ್ರಿಕೆಯಲ್ಲಿ ವರದಿಯಾಗಿದೆ. ಮೇಲ್ಜಾತಿ ಗಂಡಸೊಬ್ಬನಿಂದ ಅತ್ಯಾಚಾರಕ್ಕೊಳಗಾಗಿದ್ದ, ಡೆಹ್ರಾಡೂನ್‍ನ ತೆಹರಿ ಜಿಲ್ಲೆಯ 9 ವರ್ಷದ ದಲಿತ ಬಾಲಕಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಆರೋಪಿಯೂ ಇದ್ದ ಅದೇ ಪೊಲೀಸ್ ಜೀಪಿನಲ್ಲಿ ಪೊಲೀಸರು ಕರೆದೊಯ್ದಿದ್ದಾರೆ.

ಹೀಗೆ ಅಪ್ರಾಪ್ತ ಸಂತ್ರಸ್ತೆಯರನ್ನು ಆರೋಪಿಯ ಕೈಯಳತೆಗೆ ನಿಲುವುಕುವಂತೆ ಸಿಲುಕಿಸಬಾರದೆಂಬ ಸ್ಪಷ್ಟವಾದ ನಿರ್ದೇಶನಗಳನ್ನು ಮಕ್ಕಳ ರಕ್ಷಣೆಗಿರುವ ಪೊಕ್ಸೋ ಕಾಯ್ದೆ ನೀಡಿದೆಯಾದರೂ, ಎಲ್ಲ ನಿಯಮಗಳನ್ನೂ ಗಾಳಿಗೆ ತೂರಿ, ಪೊಲೀಸರೇ ಹೀಗೆ ನಡೆದುಕೊಳ್ಳುತ್ತಾರೆ. ಜೀಪಿನಲ್ಲಿ ಏನು ನಡೆಯಿತೋ ಗೊತ್ತಿಲ್ಲ. ಒಟ್ಟಿನಲ್ಲಿ ನ್ಯಾಯಾಧೀಶರ ಎದುರು ಹಾಜರುಪಡಿಸುವ ಹೊತ್ತಿಗೆ ತಮ್ಮ ಮಗಳು ಮಾನಸಿಕವಾಗಿ ಅತ್ಯಂತ ಕ್ಷೋಭೆಗೊಳಗಾಗಿದ್ದಳು, ಅದರಿಂದ ಆಕೆಗೆ ಸರಿಯಾಗಿ ಹೇಳಿಕೆ ದಾಖಲಿಸಲೂ ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆಯ ಪೋಷಕರು ನೊಂದು ನುಡಿದಿದ್ದಾರೆ.

ಇದೆಲ್ಲವೂ, ಕಾನೂನಿನ ನೆರಳಿನಲ್ಲೇ ನಡೆದು ಮುಗಿದು ಹೋಗುತ್ತದೆ!? ದಾಳಿ ಮಾಡಿದವರು ನೊಂದವರ ರಕ್ಷಕರಾಗಿ ಪ್ರೊಮೋಷನ್ ದೊರಕಿಸಿಕೊಳ್ಳುವ ಈ ವ್ಯವಸ್ಥೆಯಲ್ಲಿ ಕಾನೂನುಗಳಿಗೆ ಅರ್ಥವಾದರೂ ಏನಿದೆ?
ದೌರ್ಜನ್ಯಕ್ಕೊಳಗಾದವರಿಗೆ ನ್ಯಾಯದ ಬದಲು, ತಮ್ಮನ್ನು ತುಳಿದವರಿಂದಲೇ ‘ತಾಳಿ ಭಾಗ್ಯ’ಗಳು, ‘ರಾಖಿ ಭಾಗ್ಯ’ಗಳು ದೊರಕಿಸಲ್ಪಡುವ ಈ ವ್ಯವಸ್ಥೆಗೆ ಒಂದು ಧಿಕ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...