Homeಮುಖಪುಟಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

ಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

- Advertisement -
“ಭೀತಿ ಮತ್ತು ದ್ವೇಷದ ವಿರುದ್ಧ ಮಹಿಳೆಯರು” ಎಂಬ ಘೋಷವಾಕ್ಯದಡಿ ಏಪ್ರಿಲ್ 04ರಂದು ದೇಶಾದ್ಯಂತ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಈ ಐದು ವರ್ಷದಲ್ಲಿ ಮೋದಿ ಸರ್ಕಾರದ ತಂದ ಫಾಸಿವಾದ ಮತ್ತು ನವ ಉದಾರೀಕರಣದ ನೀತಿಗಳು ಮಹಿಳೆಯರು ಮತ್ತು ಅಂಚಿಗೆ ತಳಲ್ಪಟ್ಟವರ ಮೇಲೆ ಭಾರೀ ದುಷ್ಪರಿಣಾಮಗಳನ್ನು ಬೀರಿದ್ದು, ಈ ಬಾರಿ ನಮ್ಮ ಸಮುದಾಯಗಳ ಬದಲಾವಣೆಗಾಗಿ ಮತ ಚಲಾಯಿಸೋಣ ಎಂದು ಸಂಕಲ್ಪ ಮಾಡಿದ್ದಾರೆ.
ಮಹಿಳೆ ಮತ್ತು ಅಂಚಿಕೆ ದೂಡಲ್ಪಟ್ಟ ಸಮುದಾಯಗಳ ನಡಿಗೆ (ವುಮೆನ್ಸ್ ಮಾರ್ಚ್ – ವುಮೆನ್ ವೋಟ್ ಫಾರ್ ಚೇಂಜ್) ಹೆಸರಿನಲ್ಲಿ ಇಂದು ದೇಶಾದ್ಯಂತ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಕಾರ್ಯಕ್ರಮಗಳು ನಡೆದಿದ್ದು ಲಕ್ಷಾಂತರ ಮಹಿಳೆಯರು ಪಾಲ್ಗೊಂಡಿದ್ದಾರೆ. ಆ ಮೂಲಕ ಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ನಿರ್ಣಯ ಕೈಗೊಂಡಿದ್ದಾರೆ.
ಅಲ್ಪಸಂಖ್ಯಾತರ ಮೇಲೆ ಅದರಲ್ಲೂ ಮುಸ್ಲಿಮರು, ದಲಿತರು ಮತ್ತು ಕ್ರೈಸ್ತರ ವಿರುದ್ಧ ಸುಳ್ಳು ಎನ್‍ಕೌಂಟರ್‍ಗಳು, ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಸಾಮೂಹಿಕ ಹತ್ಯೆಗಳನ್ನು ನಡೆಸುವುದಲ್ಲದೇ ಭಯ ಮತ್ತು ಅಸುರಕ್ಷತೆಯ ವಾತವಾರಣ ನಿರ್ಮಿಸಿರುವುದು, ಅದರೊಟ್ಟಿಗೆ ಟ್ರಾನ್ಸ್ ಜನರಿಗೆ ಪ್ರಜೆಯ ಸ್ಥಾನಮಾನ ನೀಡದೆ ಟ್ರಾನ್ಸ್ ಪೋಬಿಯಾ ಬೆಳೆಸುವ ನಿಟ್ಟಿನಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಮಹಿಳಾ ಸಬಲೀಕರಣ ಮತ್ತು ಭೇಟಿ ಬಚಾವೋ ಎಂಬ ಖಾಲಿ ಮತ್ತು ಕೆಲಸಕ್ಕೆ ಬಾರದ ಆಶ್ವಾಸನೆಗಳ ವಿರುದ್ಧ ಭಾರತದ ಮಹಿಳೆಯರು ದನಿ ಎತ್ತಿ ಪ್ರಶ್ನೆಗಳನ್ನು ಕೇಳಬೇಕಾಗಿದೆ, ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರವು ಮಹಿಳೆಯರಿಗಾಗಿ ಸುರಕ್ಷಿತ ಮತ್ತು ಘನತೆಯುಕ್ತ ಕೆಲಸವಾಗಲಿ, ಅಥವಾ ವೇತನವಾಗಲಿ ನೀಡುವುದರಲ್ಲಿ ವಿಫಲರಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.
ನಿರುದ್ಯೋಗವೂ 45 ವರ್ಷಗಳಲ್ಲಿ ಅತಿ ಹೆಚ್ಚಾಗಿದೆ ಏಕೆ? ರೈತರು ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಏಕೆ? ಏಕಮುಖಿಯಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತಾ ಮೀಸಲಾತಿಯನ್ನು ತಳಸಮುದಾಯಗಳಿಂದ ಕಿತ್ತುಕೊಳ್ಳುತ್ತಿರುವುದು ಏಕೆ? ದೇವಸ್ಥಾನಗಳಿಗೆ ಮಹಿಳೆಯರಿಗೆ ಪ್ರವೇಶ ಏಕಿಲ್ಲ? ಕಥುವಾ ಮತ್ತು ಉನಾವ್ ಜಿಲ್ಲೆಗಳಲ್ಲಿ ನಡೆದ ಅತ್ಯಾಚಾರಗಳನ್ನು ಆಳುತ್ತಿರುವ ಬಿಜೆಪಿ ಸರ್ಕಾರವು ಏಕೆ ಸಮರ್ಥಿಸಿಕೊಂಡಿದೆ? ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನೀತಿಗಳನ್ನು ಜಾರಿ ಮಾಡುತ್ತಿರುವುದೇಕೆ? ಎಂಬ ಪ್ರಶ್ನೆಗಳನ್ನು ನಾವು ಕೇಳುತ್ತಿದ್ದೇವೆ ಎಂದು ಸಾರಿ ಹೇಳಿದ್ದಾರೆ.
ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು, ಯೋಜನಾ ಕಾರ್ಮಿಕರುಗಳ ಮತ್ತು ಗುತ್ತಿಗೆ ಕಾರ್ಮಿಕರ ಖಾಯಮಾತಿಯಾಗಲಿ ಅಥವಾ ಕನಿಷ್ಠ ವೇತನವಾಗಲಿ ಸರ್ಕಾರಗಳು ಏಕೆ ಪೂರೈಸುತ್ತಿಲ್ಲ? ಮಲದ ಗುಂಡಿಗಳಲ್ಲಿ ಪೌರಕಾರ್ಮಿಕರು ಸತ್ತರು ಅವರಿಗೆ ಏನು ಮಾಡಿಲ್ಲ? ಮಧ್ಯ ನಿಷೇಧಕ್ಕಾಗಿ ಮಹಿಳೆಯರ ಪಾದಯಾತ್ರೆಗೆ ಏಕೆ ಸ್ಪಂದಿಸಲಿಲ್ಲ? ನಿರ್ಭೀತ ಪತ್ರಕರ್ತೆ ಗೌರಿ ಲಂಕೇಶರನ್ನು ಹತ್ಯೆ ಮಾಡಿದ್ದಲ್ಲದೆ, ಟ್ರೋಲ್ ಮಾಡಿ ಚಾರಿತ್ರ್ಯವಧೆ ಮಾಡುತ್ತಿರುವ ಪಕ್ಷ ಯಾವುದು? ಮಹಿಳಾ ಹೋರಾಟಗಾರರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಅತ್ಯಾಚಾರ ಎಸೆಗುವಂತಹ ಟೀಕೆಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಯಾವ ಪಕ್ಷ ಪ್ರೋತ್ಸಾಹಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಮನುವಾದಿ, ಕೋಮುವಾದಿ ಮತ್ತು ಜಾತಿವಾದಿ ಶಕ್ತಿಗಳನ್ನು ಸೋಲಿಸುವ ದಿಕ್ಕಿನಲ್ಲಿ ನಮ್ಮ ಮತವನ್ನು ಹಾಕಬೇಕಾಗಿರುವ ಸಂದರ್ಭವು ಈಗ ಬಂದಿರುತ್ತದೆ! ನಮ್ಮ ಮತವನ್ನು ಜಾತ್ಯಾತೀತತೆಯನ್ನು, ಸಮಾನತೆಯನ್ನು ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮತ ಚಲಾಯಿಸೋಣ. ನಮ್ಮ ಮಾನವೀಯತೆಯನ್ನು ಮರಳಿ ತರಲು ನಾವು ಮತ ಚಲಾಯಿಸೋಣ, ನೆನಪಿಡಿ ಇಂದು ಪಣಕ್ಕೆ ಒಡ್ಡಿರುವುದು ಪ್ರಜಾಪ್ರಭುತ್ವ ಮಾತ್ರವಲ್ಲ, ಮಾನವೀಯತೆಯೂ ಸಹ ಎಂದು ಘೋಷಿಸಿದ್ದಾರೆ.
ನೂರಾರು ಮಹಿಳಾ ಮತ್ತು ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳ ನಡಿಗೆ – ಬೆಂಗಳೂರು ಸಹ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ನೂರಾರು ಮಹಿಳೆಯರು, ಪ್ರಜ್ಞಾವಂತರು ಭಾಗವಹಿಸಿ ದನಿ ಎತ್ತಿದ್ದಾರೆ. ಚಿತ್ರನಿರ್ದೇಶಕಿ ಕವಿತಾ ಲಂಕೇಶ್, ಅಕೈ ಪದ್ಮಶಾಲಿ ಮುಂತಾದವರು ನೇತೃತ್ವ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...