Homeಮುಖಪುಟಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

ಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

- Advertisement -
“ಭೀತಿ ಮತ್ತು ದ್ವೇಷದ ವಿರುದ್ಧ ಮಹಿಳೆಯರು” ಎಂಬ ಘೋಷವಾಕ್ಯದಡಿ ಏಪ್ರಿಲ್ 04ರಂದು ದೇಶಾದ್ಯಂತ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಈ ಐದು ವರ್ಷದಲ್ಲಿ ಮೋದಿ ಸರ್ಕಾರದ ತಂದ ಫಾಸಿವಾದ ಮತ್ತು ನವ ಉದಾರೀಕರಣದ ನೀತಿಗಳು ಮಹಿಳೆಯರು ಮತ್ತು ಅಂಚಿಗೆ ತಳಲ್ಪಟ್ಟವರ ಮೇಲೆ ಭಾರೀ ದುಷ್ಪರಿಣಾಮಗಳನ್ನು ಬೀರಿದ್ದು, ಈ ಬಾರಿ ನಮ್ಮ ಸಮುದಾಯಗಳ ಬದಲಾವಣೆಗಾಗಿ ಮತ ಚಲಾಯಿಸೋಣ ಎಂದು ಸಂಕಲ್ಪ ಮಾಡಿದ್ದಾರೆ.
ಮಹಿಳೆ ಮತ್ತು ಅಂಚಿಕೆ ದೂಡಲ್ಪಟ್ಟ ಸಮುದಾಯಗಳ ನಡಿಗೆ (ವುಮೆನ್ಸ್ ಮಾರ್ಚ್ – ವುಮೆನ್ ವೋಟ್ ಫಾರ್ ಚೇಂಜ್) ಹೆಸರಿನಲ್ಲಿ ಇಂದು ದೇಶಾದ್ಯಂತ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಕಾರ್ಯಕ್ರಮಗಳು ನಡೆದಿದ್ದು ಲಕ್ಷಾಂತರ ಮಹಿಳೆಯರು ಪಾಲ್ಗೊಂಡಿದ್ದಾರೆ. ಆ ಮೂಲಕ ಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ನಿರ್ಣಯ ಕೈಗೊಂಡಿದ್ದಾರೆ.
ಅಲ್ಪಸಂಖ್ಯಾತರ ಮೇಲೆ ಅದರಲ್ಲೂ ಮುಸ್ಲಿಮರು, ದಲಿತರು ಮತ್ತು ಕ್ರೈಸ್ತರ ವಿರುದ್ಧ ಸುಳ್ಳು ಎನ್‍ಕೌಂಟರ್‍ಗಳು, ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಸಾಮೂಹಿಕ ಹತ್ಯೆಗಳನ್ನು ನಡೆಸುವುದಲ್ಲದೇ ಭಯ ಮತ್ತು ಅಸುರಕ್ಷತೆಯ ವಾತವಾರಣ ನಿರ್ಮಿಸಿರುವುದು, ಅದರೊಟ್ಟಿಗೆ ಟ್ರಾನ್ಸ್ ಜನರಿಗೆ ಪ್ರಜೆಯ ಸ್ಥಾನಮಾನ ನೀಡದೆ ಟ್ರಾನ್ಸ್ ಪೋಬಿಯಾ ಬೆಳೆಸುವ ನಿಟ್ಟಿನಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಮಹಿಳಾ ಸಬಲೀಕರಣ ಮತ್ತು ಭೇಟಿ ಬಚಾವೋ ಎಂಬ ಖಾಲಿ ಮತ್ತು ಕೆಲಸಕ್ಕೆ ಬಾರದ ಆಶ್ವಾಸನೆಗಳ ವಿರುದ್ಧ ಭಾರತದ ಮಹಿಳೆಯರು ದನಿ ಎತ್ತಿ ಪ್ರಶ್ನೆಗಳನ್ನು ಕೇಳಬೇಕಾಗಿದೆ, ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರವು ಮಹಿಳೆಯರಿಗಾಗಿ ಸುರಕ್ಷಿತ ಮತ್ತು ಘನತೆಯುಕ್ತ ಕೆಲಸವಾಗಲಿ, ಅಥವಾ ವೇತನವಾಗಲಿ ನೀಡುವುದರಲ್ಲಿ ವಿಫಲರಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.
ನಿರುದ್ಯೋಗವೂ 45 ವರ್ಷಗಳಲ್ಲಿ ಅತಿ ಹೆಚ್ಚಾಗಿದೆ ಏಕೆ? ರೈತರು ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಏಕೆ? ಏಕಮುಖಿಯಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತಾ ಮೀಸಲಾತಿಯನ್ನು ತಳಸಮುದಾಯಗಳಿಂದ ಕಿತ್ತುಕೊಳ್ಳುತ್ತಿರುವುದು ಏಕೆ? ದೇವಸ್ಥಾನಗಳಿಗೆ ಮಹಿಳೆಯರಿಗೆ ಪ್ರವೇಶ ಏಕಿಲ್ಲ? ಕಥುವಾ ಮತ್ತು ಉನಾವ್ ಜಿಲ್ಲೆಗಳಲ್ಲಿ ನಡೆದ ಅತ್ಯಾಚಾರಗಳನ್ನು ಆಳುತ್ತಿರುವ ಬಿಜೆಪಿ ಸರ್ಕಾರವು ಏಕೆ ಸಮರ್ಥಿಸಿಕೊಂಡಿದೆ? ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನೀತಿಗಳನ್ನು ಜಾರಿ ಮಾಡುತ್ತಿರುವುದೇಕೆ? ಎಂಬ ಪ್ರಶ್ನೆಗಳನ್ನು ನಾವು ಕೇಳುತ್ತಿದ್ದೇವೆ ಎಂದು ಸಾರಿ ಹೇಳಿದ್ದಾರೆ.
ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು, ಯೋಜನಾ ಕಾರ್ಮಿಕರುಗಳ ಮತ್ತು ಗುತ್ತಿಗೆ ಕಾರ್ಮಿಕರ ಖಾಯಮಾತಿಯಾಗಲಿ ಅಥವಾ ಕನಿಷ್ಠ ವೇತನವಾಗಲಿ ಸರ್ಕಾರಗಳು ಏಕೆ ಪೂರೈಸುತ್ತಿಲ್ಲ? ಮಲದ ಗುಂಡಿಗಳಲ್ಲಿ ಪೌರಕಾರ್ಮಿಕರು ಸತ್ತರು ಅವರಿಗೆ ಏನು ಮಾಡಿಲ್ಲ? ಮಧ್ಯ ನಿಷೇಧಕ್ಕಾಗಿ ಮಹಿಳೆಯರ ಪಾದಯಾತ್ರೆಗೆ ಏಕೆ ಸ್ಪಂದಿಸಲಿಲ್ಲ? ನಿರ್ಭೀತ ಪತ್ರಕರ್ತೆ ಗೌರಿ ಲಂಕೇಶರನ್ನು ಹತ್ಯೆ ಮಾಡಿದ್ದಲ್ಲದೆ, ಟ್ರೋಲ್ ಮಾಡಿ ಚಾರಿತ್ರ್ಯವಧೆ ಮಾಡುತ್ತಿರುವ ಪಕ್ಷ ಯಾವುದು? ಮಹಿಳಾ ಹೋರಾಟಗಾರರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಅತ್ಯಾಚಾರ ಎಸೆಗುವಂತಹ ಟೀಕೆಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಯಾವ ಪಕ್ಷ ಪ್ರೋತ್ಸಾಹಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಮನುವಾದಿ, ಕೋಮುವಾದಿ ಮತ್ತು ಜಾತಿವಾದಿ ಶಕ್ತಿಗಳನ್ನು ಸೋಲಿಸುವ ದಿಕ್ಕಿನಲ್ಲಿ ನಮ್ಮ ಮತವನ್ನು ಹಾಕಬೇಕಾಗಿರುವ ಸಂದರ್ಭವು ಈಗ ಬಂದಿರುತ್ತದೆ! ನಮ್ಮ ಮತವನ್ನು ಜಾತ್ಯಾತೀತತೆಯನ್ನು, ಸಮಾನತೆಯನ್ನು ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮತ ಚಲಾಯಿಸೋಣ. ನಮ್ಮ ಮಾನವೀಯತೆಯನ್ನು ಮರಳಿ ತರಲು ನಾವು ಮತ ಚಲಾಯಿಸೋಣ, ನೆನಪಿಡಿ ಇಂದು ಪಣಕ್ಕೆ ಒಡ್ಡಿರುವುದು ಪ್ರಜಾಪ್ರಭುತ್ವ ಮಾತ್ರವಲ್ಲ, ಮಾನವೀಯತೆಯೂ ಸಹ ಎಂದು ಘೋಷಿಸಿದ್ದಾರೆ.
ನೂರಾರು ಮಹಿಳಾ ಮತ್ತು ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳ ನಡಿಗೆ – ಬೆಂಗಳೂರು ಸಹ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ನೂರಾರು ಮಹಿಳೆಯರು, ಪ್ರಜ್ಞಾವಂತರು ಭಾಗವಹಿಸಿ ದನಿ ಎತ್ತಿದ್ದಾರೆ. ಚಿತ್ರನಿರ್ದೇಶಕಿ ಕವಿತಾ ಲಂಕೇಶ್, ಅಕೈ ಪದ್ಮಶಾಲಿ ಮುಂತಾದವರು ನೇತೃತ್ವ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...