Homeಮುಖಪುಟಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

ಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

- Advertisement -
“ಭೀತಿ ಮತ್ತು ದ್ವೇಷದ ವಿರುದ್ಧ ಮಹಿಳೆಯರು” ಎಂಬ ಘೋಷವಾಕ್ಯದಡಿ ಏಪ್ರಿಲ್ 04ರಂದು ದೇಶಾದ್ಯಂತ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಈ ಐದು ವರ್ಷದಲ್ಲಿ ಮೋದಿ ಸರ್ಕಾರದ ತಂದ ಫಾಸಿವಾದ ಮತ್ತು ನವ ಉದಾರೀಕರಣದ ನೀತಿಗಳು ಮಹಿಳೆಯರು ಮತ್ತು ಅಂಚಿಗೆ ತಳಲ್ಪಟ್ಟವರ ಮೇಲೆ ಭಾರೀ ದುಷ್ಪರಿಣಾಮಗಳನ್ನು ಬೀರಿದ್ದು, ಈ ಬಾರಿ ನಮ್ಮ ಸಮುದಾಯಗಳ ಬದಲಾವಣೆಗಾಗಿ ಮತ ಚಲಾಯಿಸೋಣ ಎಂದು ಸಂಕಲ್ಪ ಮಾಡಿದ್ದಾರೆ.
ಮಹಿಳೆ ಮತ್ತು ಅಂಚಿಕೆ ದೂಡಲ್ಪಟ್ಟ ಸಮುದಾಯಗಳ ನಡಿಗೆ (ವುಮೆನ್ಸ್ ಮಾರ್ಚ್ – ವುಮೆನ್ ವೋಟ್ ಫಾರ್ ಚೇಂಜ್) ಹೆಸರಿನಲ್ಲಿ ಇಂದು ದೇಶಾದ್ಯಂತ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಕಾರ್ಯಕ್ರಮಗಳು ನಡೆದಿದ್ದು ಲಕ್ಷಾಂತರ ಮಹಿಳೆಯರು ಪಾಲ್ಗೊಂಡಿದ್ದಾರೆ. ಆ ಮೂಲಕ ಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ನಿರ್ಣಯ ಕೈಗೊಂಡಿದ್ದಾರೆ.
ಅಲ್ಪಸಂಖ್ಯಾತರ ಮೇಲೆ ಅದರಲ್ಲೂ ಮುಸ್ಲಿಮರು, ದಲಿತರು ಮತ್ತು ಕ್ರೈಸ್ತರ ವಿರುದ್ಧ ಸುಳ್ಳು ಎನ್‍ಕೌಂಟರ್‍ಗಳು, ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಸಾಮೂಹಿಕ ಹತ್ಯೆಗಳನ್ನು ನಡೆಸುವುದಲ್ಲದೇ ಭಯ ಮತ್ತು ಅಸುರಕ್ಷತೆಯ ವಾತವಾರಣ ನಿರ್ಮಿಸಿರುವುದು, ಅದರೊಟ್ಟಿಗೆ ಟ್ರಾನ್ಸ್ ಜನರಿಗೆ ಪ್ರಜೆಯ ಸ್ಥಾನಮಾನ ನೀಡದೆ ಟ್ರಾನ್ಸ್ ಪೋಬಿಯಾ ಬೆಳೆಸುವ ನಿಟ್ಟಿನಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಮಹಿಳಾ ಸಬಲೀಕರಣ ಮತ್ತು ಭೇಟಿ ಬಚಾವೋ ಎಂಬ ಖಾಲಿ ಮತ್ತು ಕೆಲಸಕ್ಕೆ ಬಾರದ ಆಶ್ವಾಸನೆಗಳ ವಿರುದ್ಧ ಭಾರತದ ಮಹಿಳೆಯರು ದನಿ ಎತ್ತಿ ಪ್ರಶ್ನೆಗಳನ್ನು ಕೇಳಬೇಕಾಗಿದೆ, ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರವು ಮಹಿಳೆಯರಿಗಾಗಿ ಸುರಕ್ಷಿತ ಮತ್ತು ಘನತೆಯುಕ್ತ ಕೆಲಸವಾಗಲಿ, ಅಥವಾ ವೇತನವಾಗಲಿ ನೀಡುವುದರಲ್ಲಿ ವಿಫಲರಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.
ನಿರುದ್ಯೋಗವೂ 45 ವರ್ಷಗಳಲ್ಲಿ ಅತಿ ಹೆಚ್ಚಾಗಿದೆ ಏಕೆ? ರೈತರು ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಏಕೆ? ಏಕಮುಖಿಯಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತಾ ಮೀಸಲಾತಿಯನ್ನು ತಳಸಮುದಾಯಗಳಿಂದ ಕಿತ್ತುಕೊಳ್ಳುತ್ತಿರುವುದು ಏಕೆ? ದೇವಸ್ಥಾನಗಳಿಗೆ ಮಹಿಳೆಯರಿಗೆ ಪ್ರವೇಶ ಏಕಿಲ್ಲ? ಕಥುವಾ ಮತ್ತು ಉನಾವ್ ಜಿಲ್ಲೆಗಳಲ್ಲಿ ನಡೆದ ಅತ್ಯಾಚಾರಗಳನ್ನು ಆಳುತ್ತಿರುವ ಬಿಜೆಪಿ ಸರ್ಕಾರವು ಏಕೆ ಸಮರ್ಥಿಸಿಕೊಂಡಿದೆ? ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನೀತಿಗಳನ್ನು ಜಾರಿ ಮಾಡುತ್ತಿರುವುದೇಕೆ? ಎಂಬ ಪ್ರಶ್ನೆಗಳನ್ನು ನಾವು ಕೇಳುತ್ತಿದ್ದೇವೆ ಎಂದು ಸಾರಿ ಹೇಳಿದ್ದಾರೆ.
ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು, ಯೋಜನಾ ಕಾರ್ಮಿಕರುಗಳ ಮತ್ತು ಗುತ್ತಿಗೆ ಕಾರ್ಮಿಕರ ಖಾಯಮಾತಿಯಾಗಲಿ ಅಥವಾ ಕನಿಷ್ಠ ವೇತನವಾಗಲಿ ಸರ್ಕಾರಗಳು ಏಕೆ ಪೂರೈಸುತ್ತಿಲ್ಲ? ಮಲದ ಗುಂಡಿಗಳಲ್ಲಿ ಪೌರಕಾರ್ಮಿಕರು ಸತ್ತರು ಅವರಿಗೆ ಏನು ಮಾಡಿಲ್ಲ? ಮಧ್ಯ ನಿಷೇಧಕ್ಕಾಗಿ ಮಹಿಳೆಯರ ಪಾದಯಾತ್ರೆಗೆ ಏಕೆ ಸ್ಪಂದಿಸಲಿಲ್ಲ? ನಿರ್ಭೀತ ಪತ್ರಕರ್ತೆ ಗೌರಿ ಲಂಕೇಶರನ್ನು ಹತ್ಯೆ ಮಾಡಿದ್ದಲ್ಲದೆ, ಟ್ರೋಲ್ ಮಾಡಿ ಚಾರಿತ್ರ್ಯವಧೆ ಮಾಡುತ್ತಿರುವ ಪಕ್ಷ ಯಾವುದು? ಮಹಿಳಾ ಹೋರಾಟಗಾರರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಅತ್ಯಾಚಾರ ಎಸೆಗುವಂತಹ ಟೀಕೆಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಯಾವ ಪಕ್ಷ ಪ್ರೋತ್ಸಾಹಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಮನುವಾದಿ, ಕೋಮುವಾದಿ ಮತ್ತು ಜಾತಿವಾದಿ ಶಕ್ತಿಗಳನ್ನು ಸೋಲಿಸುವ ದಿಕ್ಕಿನಲ್ಲಿ ನಮ್ಮ ಮತವನ್ನು ಹಾಕಬೇಕಾಗಿರುವ ಸಂದರ್ಭವು ಈಗ ಬಂದಿರುತ್ತದೆ! ನಮ್ಮ ಮತವನ್ನು ಜಾತ್ಯಾತೀತತೆಯನ್ನು, ಸಮಾನತೆಯನ್ನು ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮತ ಚಲಾಯಿಸೋಣ. ನಮ್ಮ ಮಾನವೀಯತೆಯನ್ನು ಮರಳಿ ತರಲು ನಾವು ಮತ ಚಲಾಯಿಸೋಣ, ನೆನಪಿಡಿ ಇಂದು ಪಣಕ್ಕೆ ಒಡ್ಡಿರುವುದು ಪ್ರಜಾಪ್ರಭುತ್ವ ಮಾತ್ರವಲ್ಲ, ಮಾನವೀಯತೆಯೂ ಸಹ ಎಂದು ಘೋಷಿಸಿದ್ದಾರೆ.
ನೂರಾರು ಮಹಿಳಾ ಮತ್ತು ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳ ನಡಿಗೆ – ಬೆಂಗಳೂರು ಸಹ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ನೂರಾರು ಮಹಿಳೆಯರು, ಪ್ರಜ್ಞಾವಂತರು ಭಾಗವಹಿಸಿ ದನಿ ಎತ್ತಿದ್ದಾರೆ. ಚಿತ್ರನಿರ್ದೇಶಕಿ ಕವಿತಾ ಲಂಕೇಶ್, ಅಕೈ ಪದ್ಮಶಾಲಿ ಮುಂತಾದವರು ನೇತೃತ್ವ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...