Homeಮುಖಪುಟಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

ಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

- Advertisement -
“ಭೀತಿ ಮತ್ತು ದ್ವೇಷದ ವಿರುದ್ಧ ಮಹಿಳೆಯರು” ಎಂಬ ಘೋಷವಾಕ್ಯದಡಿ ಏಪ್ರಿಲ್ 04ರಂದು ದೇಶಾದ್ಯಂತ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಈ ಐದು ವರ್ಷದಲ್ಲಿ ಮೋದಿ ಸರ್ಕಾರದ ತಂದ ಫಾಸಿವಾದ ಮತ್ತು ನವ ಉದಾರೀಕರಣದ ನೀತಿಗಳು ಮಹಿಳೆಯರು ಮತ್ತು ಅಂಚಿಗೆ ತಳಲ್ಪಟ್ಟವರ ಮೇಲೆ ಭಾರೀ ದುಷ್ಪರಿಣಾಮಗಳನ್ನು ಬೀರಿದ್ದು, ಈ ಬಾರಿ ನಮ್ಮ ಸಮುದಾಯಗಳ ಬದಲಾವಣೆಗಾಗಿ ಮತ ಚಲಾಯಿಸೋಣ ಎಂದು ಸಂಕಲ್ಪ ಮಾಡಿದ್ದಾರೆ.
ಮಹಿಳೆ ಮತ್ತು ಅಂಚಿಕೆ ದೂಡಲ್ಪಟ್ಟ ಸಮುದಾಯಗಳ ನಡಿಗೆ (ವುಮೆನ್ಸ್ ಮಾರ್ಚ್ – ವುಮೆನ್ ವೋಟ್ ಫಾರ್ ಚೇಂಜ್) ಹೆಸರಿನಲ್ಲಿ ಇಂದು ದೇಶಾದ್ಯಂತ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಕಾರ್ಯಕ್ರಮಗಳು ನಡೆದಿದ್ದು ಲಕ್ಷಾಂತರ ಮಹಿಳೆಯರು ಪಾಲ್ಗೊಂಡಿದ್ದಾರೆ. ಆ ಮೂಲಕ ಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ನಿರ್ಣಯ ಕೈಗೊಂಡಿದ್ದಾರೆ.
ಅಲ್ಪಸಂಖ್ಯಾತರ ಮೇಲೆ ಅದರಲ್ಲೂ ಮುಸ್ಲಿಮರು, ದಲಿತರು ಮತ್ತು ಕ್ರೈಸ್ತರ ವಿರುದ್ಧ ಸುಳ್ಳು ಎನ್‍ಕೌಂಟರ್‍ಗಳು, ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಸಾಮೂಹಿಕ ಹತ್ಯೆಗಳನ್ನು ನಡೆಸುವುದಲ್ಲದೇ ಭಯ ಮತ್ತು ಅಸುರಕ್ಷತೆಯ ವಾತವಾರಣ ನಿರ್ಮಿಸಿರುವುದು, ಅದರೊಟ್ಟಿಗೆ ಟ್ರಾನ್ಸ್ ಜನರಿಗೆ ಪ್ರಜೆಯ ಸ್ಥಾನಮಾನ ನೀಡದೆ ಟ್ರಾನ್ಸ್ ಪೋಬಿಯಾ ಬೆಳೆಸುವ ನಿಟ್ಟಿನಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಮಹಿಳಾ ಸಬಲೀಕರಣ ಮತ್ತು ಭೇಟಿ ಬಚಾವೋ ಎಂಬ ಖಾಲಿ ಮತ್ತು ಕೆಲಸಕ್ಕೆ ಬಾರದ ಆಶ್ವಾಸನೆಗಳ ವಿರುದ್ಧ ಭಾರತದ ಮಹಿಳೆಯರು ದನಿ ಎತ್ತಿ ಪ್ರಶ್ನೆಗಳನ್ನು ಕೇಳಬೇಕಾಗಿದೆ, ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರವು ಮಹಿಳೆಯರಿಗಾಗಿ ಸುರಕ್ಷಿತ ಮತ್ತು ಘನತೆಯುಕ್ತ ಕೆಲಸವಾಗಲಿ, ಅಥವಾ ವೇತನವಾಗಲಿ ನೀಡುವುದರಲ್ಲಿ ವಿಫಲರಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.
ನಿರುದ್ಯೋಗವೂ 45 ವರ್ಷಗಳಲ್ಲಿ ಅತಿ ಹೆಚ್ಚಾಗಿದೆ ಏಕೆ? ರೈತರು ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಏಕೆ? ಏಕಮುಖಿಯಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತಾ ಮೀಸಲಾತಿಯನ್ನು ತಳಸಮುದಾಯಗಳಿಂದ ಕಿತ್ತುಕೊಳ್ಳುತ್ತಿರುವುದು ಏಕೆ? ದೇವಸ್ಥಾನಗಳಿಗೆ ಮಹಿಳೆಯರಿಗೆ ಪ್ರವೇಶ ಏಕಿಲ್ಲ? ಕಥುವಾ ಮತ್ತು ಉನಾವ್ ಜಿಲ್ಲೆಗಳಲ್ಲಿ ನಡೆದ ಅತ್ಯಾಚಾರಗಳನ್ನು ಆಳುತ್ತಿರುವ ಬಿಜೆಪಿ ಸರ್ಕಾರವು ಏಕೆ ಸಮರ್ಥಿಸಿಕೊಂಡಿದೆ? ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನೀತಿಗಳನ್ನು ಜಾರಿ ಮಾಡುತ್ತಿರುವುದೇಕೆ? ಎಂಬ ಪ್ರಶ್ನೆಗಳನ್ನು ನಾವು ಕೇಳುತ್ತಿದ್ದೇವೆ ಎಂದು ಸಾರಿ ಹೇಳಿದ್ದಾರೆ.
ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು, ಯೋಜನಾ ಕಾರ್ಮಿಕರುಗಳ ಮತ್ತು ಗುತ್ತಿಗೆ ಕಾರ್ಮಿಕರ ಖಾಯಮಾತಿಯಾಗಲಿ ಅಥವಾ ಕನಿಷ್ಠ ವೇತನವಾಗಲಿ ಸರ್ಕಾರಗಳು ಏಕೆ ಪೂರೈಸುತ್ತಿಲ್ಲ? ಮಲದ ಗುಂಡಿಗಳಲ್ಲಿ ಪೌರಕಾರ್ಮಿಕರು ಸತ್ತರು ಅವರಿಗೆ ಏನು ಮಾಡಿಲ್ಲ? ಮಧ್ಯ ನಿಷೇಧಕ್ಕಾಗಿ ಮಹಿಳೆಯರ ಪಾದಯಾತ್ರೆಗೆ ಏಕೆ ಸ್ಪಂದಿಸಲಿಲ್ಲ? ನಿರ್ಭೀತ ಪತ್ರಕರ್ತೆ ಗೌರಿ ಲಂಕೇಶರನ್ನು ಹತ್ಯೆ ಮಾಡಿದ್ದಲ್ಲದೆ, ಟ್ರೋಲ್ ಮಾಡಿ ಚಾರಿತ್ರ್ಯವಧೆ ಮಾಡುತ್ತಿರುವ ಪಕ್ಷ ಯಾವುದು? ಮಹಿಳಾ ಹೋರಾಟಗಾರರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಅತ್ಯಾಚಾರ ಎಸೆಗುವಂತಹ ಟೀಕೆಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಯಾವ ಪಕ್ಷ ಪ್ರೋತ್ಸಾಹಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಮನುವಾದಿ, ಕೋಮುವಾದಿ ಮತ್ತು ಜಾತಿವಾದಿ ಶಕ್ತಿಗಳನ್ನು ಸೋಲಿಸುವ ದಿಕ್ಕಿನಲ್ಲಿ ನಮ್ಮ ಮತವನ್ನು ಹಾಕಬೇಕಾಗಿರುವ ಸಂದರ್ಭವು ಈಗ ಬಂದಿರುತ್ತದೆ! ನಮ್ಮ ಮತವನ್ನು ಜಾತ್ಯಾತೀತತೆಯನ್ನು, ಸಮಾನತೆಯನ್ನು ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮತ ಚಲಾಯಿಸೋಣ. ನಮ್ಮ ಮಾನವೀಯತೆಯನ್ನು ಮರಳಿ ತರಲು ನಾವು ಮತ ಚಲಾಯಿಸೋಣ, ನೆನಪಿಡಿ ಇಂದು ಪಣಕ್ಕೆ ಒಡ್ಡಿರುವುದು ಪ್ರಜಾಪ್ರಭುತ್ವ ಮಾತ್ರವಲ್ಲ, ಮಾನವೀಯತೆಯೂ ಸಹ ಎಂದು ಘೋಷಿಸಿದ್ದಾರೆ.
ನೂರಾರು ಮಹಿಳಾ ಮತ್ತು ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳ ನಡಿಗೆ – ಬೆಂಗಳೂರು ಸಹ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ನೂರಾರು ಮಹಿಳೆಯರು, ಪ್ರಜ್ಞಾವಂತರು ಭಾಗವಹಿಸಿ ದನಿ ಎತ್ತಿದ್ದಾರೆ. ಚಿತ್ರನಿರ್ದೇಶಕಿ ಕವಿತಾ ಲಂಕೇಶ್, ಅಕೈ ಪದ್ಮಶಾಲಿ ಮುಂತಾದವರು ನೇತೃತ್ವ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...