Homeಮುಖಪುಟಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

ಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

- Advertisement -
“ಭೀತಿ ಮತ್ತು ದ್ವೇಷದ ವಿರುದ್ಧ ಮಹಿಳೆಯರು” ಎಂಬ ಘೋಷವಾಕ್ಯದಡಿ ಏಪ್ರಿಲ್ 04ರಂದು ದೇಶಾದ್ಯಂತ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಈ ಐದು ವರ್ಷದಲ್ಲಿ ಮೋದಿ ಸರ್ಕಾರದ ತಂದ ಫಾಸಿವಾದ ಮತ್ತು ನವ ಉದಾರೀಕರಣದ ನೀತಿಗಳು ಮಹಿಳೆಯರು ಮತ್ತು ಅಂಚಿಗೆ ತಳಲ್ಪಟ್ಟವರ ಮೇಲೆ ಭಾರೀ ದುಷ್ಪರಿಣಾಮಗಳನ್ನು ಬೀರಿದ್ದು, ಈ ಬಾರಿ ನಮ್ಮ ಸಮುದಾಯಗಳ ಬದಲಾವಣೆಗಾಗಿ ಮತ ಚಲಾಯಿಸೋಣ ಎಂದು ಸಂಕಲ್ಪ ಮಾಡಿದ್ದಾರೆ.
ಮಹಿಳೆ ಮತ್ತು ಅಂಚಿಕೆ ದೂಡಲ್ಪಟ್ಟ ಸಮುದಾಯಗಳ ನಡಿಗೆ (ವುಮೆನ್ಸ್ ಮಾರ್ಚ್ – ವುಮೆನ್ ವೋಟ್ ಫಾರ್ ಚೇಂಜ್) ಹೆಸರಿನಲ್ಲಿ ಇಂದು ದೇಶಾದ್ಯಂತ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಕಾರ್ಯಕ್ರಮಗಳು ನಡೆದಿದ್ದು ಲಕ್ಷಾಂತರ ಮಹಿಳೆಯರು ಪಾಲ್ಗೊಂಡಿದ್ದಾರೆ. ಆ ಮೂಲಕ ಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ನಿರ್ಣಯ ಕೈಗೊಂಡಿದ್ದಾರೆ.
ಅಲ್ಪಸಂಖ್ಯಾತರ ಮೇಲೆ ಅದರಲ್ಲೂ ಮುಸ್ಲಿಮರು, ದಲಿತರು ಮತ್ತು ಕ್ರೈಸ್ತರ ವಿರುದ್ಧ ಸುಳ್ಳು ಎನ್‍ಕೌಂಟರ್‍ಗಳು, ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಸಾಮೂಹಿಕ ಹತ್ಯೆಗಳನ್ನು ನಡೆಸುವುದಲ್ಲದೇ ಭಯ ಮತ್ತು ಅಸುರಕ್ಷತೆಯ ವಾತವಾರಣ ನಿರ್ಮಿಸಿರುವುದು, ಅದರೊಟ್ಟಿಗೆ ಟ್ರಾನ್ಸ್ ಜನರಿಗೆ ಪ್ರಜೆಯ ಸ್ಥಾನಮಾನ ನೀಡದೆ ಟ್ರಾನ್ಸ್ ಪೋಬಿಯಾ ಬೆಳೆಸುವ ನಿಟ್ಟಿನಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಮಹಿಳಾ ಸಬಲೀಕರಣ ಮತ್ತು ಭೇಟಿ ಬಚಾವೋ ಎಂಬ ಖಾಲಿ ಮತ್ತು ಕೆಲಸಕ್ಕೆ ಬಾರದ ಆಶ್ವಾಸನೆಗಳ ವಿರುದ್ಧ ಭಾರತದ ಮಹಿಳೆಯರು ದನಿ ಎತ್ತಿ ಪ್ರಶ್ನೆಗಳನ್ನು ಕೇಳಬೇಕಾಗಿದೆ, ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರವು ಮಹಿಳೆಯರಿಗಾಗಿ ಸುರಕ್ಷಿತ ಮತ್ತು ಘನತೆಯುಕ್ತ ಕೆಲಸವಾಗಲಿ, ಅಥವಾ ವೇತನವಾಗಲಿ ನೀಡುವುದರಲ್ಲಿ ವಿಫಲರಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.
ನಿರುದ್ಯೋಗವೂ 45 ವರ್ಷಗಳಲ್ಲಿ ಅತಿ ಹೆಚ್ಚಾಗಿದೆ ಏಕೆ? ರೈತರು ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಏಕೆ? ಏಕಮುಖಿಯಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತಾ ಮೀಸಲಾತಿಯನ್ನು ತಳಸಮುದಾಯಗಳಿಂದ ಕಿತ್ತುಕೊಳ್ಳುತ್ತಿರುವುದು ಏಕೆ? ದೇವಸ್ಥಾನಗಳಿಗೆ ಮಹಿಳೆಯರಿಗೆ ಪ್ರವೇಶ ಏಕಿಲ್ಲ? ಕಥುವಾ ಮತ್ತು ಉನಾವ್ ಜಿಲ್ಲೆಗಳಲ್ಲಿ ನಡೆದ ಅತ್ಯಾಚಾರಗಳನ್ನು ಆಳುತ್ತಿರುವ ಬಿಜೆಪಿ ಸರ್ಕಾರವು ಏಕೆ ಸಮರ್ಥಿಸಿಕೊಂಡಿದೆ? ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನೀತಿಗಳನ್ನು ಜಾರಿ ಮಾಡುತ್ತಿರುವುದೇಕೆ? ಎಂಬ ಪ್ರಶ್ನೆಗಳನ್ನು ನಾವು ಕೇಳುತ್ತಿದ್ದೇವೆ ಎಂದು ಸಾರಿ ಹೇಳಿದ್ದಾರೆ.
ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು, ಯೋಜನಾ ಕಾರ್ಮಿಕರುಗಳ ಮತ್ತು ಗುತ್ತಿಗೆ ಕಾರ್ಮಿಕರ ಖಾಯಮಾತಿಯಾಗಲಿ ಅಥವಾ ಕನಿಷ್ಠ ವೇತನವಾಗಲಿ ಸರ್ಕಾರಗಳು ಏಕೆ ಪೂರೈಸುತ್ತಿಲ್ಲ? ಮಲದ ಗುಂಡಿಗಳಲ್ಲಿ ಪೌರಕಾರ್ಮಿಕರು ಸತ್ತರು ಅವರಿಗೆ ಏನು ಮಾಡಿಲ್ಲ? ಮಧ್ಯ ನಿಷೇಧಕ್ಕಾಗಿ ಮಹಿಳೆಯರ ಪಾದಯಾತ್ರೆಗೆ ಏಕೆ ಸ್ಪಂದಿಸಲಿಲ್ಲ? ನಿರ್ಭೀತ ಪತ್ರಕರ್ತೆ ಗೌರಿ ಲಂಕೇಶರನ್ನು ಹತ್ಯೆ ಮಾಡಿದ್ದಲ್ಲದೆ, ಟ್ರೋಲ್ ಮಾಡಿ ಚಾರಿತ್ರ್ಯವಧೆ ಮಾಡುತ್ತಿರುವ ಪಕ್ಷ ಯಾವುದು? ಮಹಿಳಾ ಹೋರಾಟಗಾರರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಅತ್ಯಾಚಾರ ಎಸೆಗುವಂತಹ ಟೀಕೆಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಯಾವ ಪಕ್ಷ ಪ್ರೋತ್ಸಾಹಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಮನುವಾದಿ, ಕೋಮುವಾದಿ ಮತ್ತು ಜಾತಿವಾದಿ ಶಕ್ತಿಗಳನ್ನು ಸೋಲಿಸುವ ದಿಕ್ಕಿನಲ್ಲಿ ನಮ್ಮ ಮತವನ್ನು ಹಾಕಬೇಕಾಗಿರುವ ಸಂದರ್ಭವು ಈಗ ಬಂದಿರುತ್ತದೆ! ನಮ್ಮ ಮತವನ್ನು ಜಾತ್ಯಾತೀತತೆಯನ್ನು, ಸಮಾನತೆಯನ್ನು ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮತ ಚಲಾಯಿಸೋಣ. ನಮ್ಮ ಮಾನವೀಯತೆಯನ್ನು ಮರಳಿ ತರಲು ನಾವು ಮತ ಚಲಾಯಿಸೋಣ, ನೆನಪಿಡಿ ಇಂದು ಪಣಕ್ಕೆ ಒಡ್ಡಿರುವುದು ಪ್ರಜಾಪ್ರಭುತ್ವ ಮಾತ್ರವಲ್ಲ, ಮಾನವೀಯತೆಯೂ ಸಹ ಎಂದು ಘೋಷಿಸಿದ್ದಾರೆ.
ನೂರಾರು ಮಹಿಳಾ ಮತ್ತು ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳ ನಡಿಗೆ – ಬೆಂಗಳೂರು ಸಹ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ನೂರಾರು ಮಹಿಳೆಯರು, ಪ್ರಜ್ಞಾವಂತರು ಭಾಗವಹಿಸಿ ದನಿ ಎತ್ತಿದ್ದಾರೆ. ಚಿತ್ರನಿರ್ದೇಶಕಿ ಕವಿತಾ ಲಂಕೇಶ್, ಅಕೈ ಪದ್ಮಶಾಲಿ ಮುಂತಾದವರು ನೇತೃತ್ವ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....