Homeಮುಖಪುಟಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

ಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

- Advertisement -
“ಭೀತಿ ಮತ್ತು ದ್ವೇಷದ ವಿರುದ್ಧ ಮಹಿಳೆಯರು” ಎಂಬ ಘೋಷವಾಕ್ಯದಡಿ ಏಪ್ರಿಲ್ 04ರಂದು ದೇಶಾದ್ಯಂತ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಈ ಐದು ವರ್ಷದಲ್ಲಿ ಮೋದಿ ಸರ್ಕಾರದ ತಂದ ಫಾಸಿವಾದ ಮತ್ತು ನವ ಉದಾರೀಕರಣದ ನೀತಿಗಳು ಮಹಿಳೆಯರು ಮತ್ತು ಅಂಚಿಗೆ ತಳಲ್ಪಟ್ಟವರ ಮೇಲೆ ಭಾರೀ ದುಷ್ಪರಿಣಾಮಗಳನ್ನು ಬೀರಿದ್ದು, ಈ ಬಾರಿ ನಮ್ಮ ಸಮುದಾಯಗಳ ಬದಲಾವಣೆಗಾಗಿ ಮತ ಚಲಾಯಿಸೋಣ ಎಂದು ಸಂಕಲ್ಪ ಮಾಡಿದ್ದಾರೆ.
ಮಹಿಳೆ ಮತ್ತು ಅಂಚಿಕೆ ದೂಡಲ್ಪಟ್ಟ ಸಮುದಾಯಗಳ ನಡಿಗೆ (ವುಮೆನ್ಸ್ ಮಾರ್ಚ್ – ವುಮೆನ್ ವೋಟ್ ಫಾರ್ ಚೇಂಜ್) ಹೆಸರಿನಲ್ಲಿ ಇಂದು ದೇಶಾದ್ಯಂತ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಕಾರ್ಯಕ್ರಮಗಳು ನಡೆದಿದ್ದು ಲಕ್ಷಾಂತರ ಮಹಿಳೆಯರು ಪಾಲ್ಗೊಂಡಿದ್ದಾರೆ. ಆ ಮೂಲಕ ಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ನಿರ್ಣಯ ಕೈಗೊಂಡಿದ್ದಾರೆ.
ಅಲ್ಪಸಂಖ್ಯಾತರ ಮೇಲೆ ಅದರಲ್ಲೂ ಮುಸ್ಲಿಮರು, ದಲಿತರು ಮತ್ತು ಕ್ರೈಸ್ತರ ವಿರುದ್ಧ ಸುಳ್ಳು ಎನ್‍ಕೌಂಟರ್‍ಗಳು, ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಸಾಮೂಹಿಕ ಹತ್ಯೆಗಳನ್ನು ನಡೆಸುವುದಲ್ಲದೇ ಭಯ ಮತ್ತು ಅಸುರಕ್ಷತೆಯ ವಾತವಾರಣ ನಿರ್ಮಿಸಿರುವುದು, ಅದರೊಟ್ಟಿಗೆ ಟ್ರಾನ್ಸ್ ಜನರಿಗೆ ಪ್ರಜೆಯ ಸ್ಥಾನಮಾನ ನೀಡದೆ ಟ್ರಾನ್ಸ್ ಪೋಬಿಯಾ ಬೆಳೆಸುವ ನಿಟ್ಟಿನಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಮಹಿಳಾ ಸಬಲೀಕರಣ ಮತ್ತು ಭೇಟಿ ಬಚಾವೋ ಎಂಬ ಖಾಲಿ ಮತ್ತು ಕೆಲಸಕ್ಕೆ ಬಾರದ ಆಶ್ವಾಸನೆಗಳ ವಿರುದ್ಧ ಭಾರತದ ಮಹಿಳೆಯರು ದನಿ ಎತ್ತಿ ಪ್ರಶ್ನೆಗಳನ್ನು ಕೇಳಬೇಕಾಗಿದೆ, ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರವು ಮಹಿಳೆಯರಿಗಾಗಿ ಸುರಕ್ಷಿತ ಮತ್ತು ಘನತೆಯುಕ್ತ ಕೆಲಸವಾಗಲಿ, ಅಥವಾ ವೇತನವಾಗಲಿ ನೀಡುವುದರಲ್ಲಿ ವಿಫಲರಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.
ನಿರುದ್ಯೋಗವೂ 45 ವರ್ಷಗಳಲ್ಲಿ ಅತಿ ಹೆಚ್ಚಾಗಿದೆ ಏಕೆ? ರೈತರು ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಏಕೆ? ಏಕಮುಖಿಯಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತಾ ಮೀಸಲಾತಿಯನ್ನು ತಳಸಮುದಾಯಗಳಿಂದ ಕಿತ್ತುಕೊಳ್ಳುತ್ತಿರುವುದು ಏಕೆ? ದೇವಸ್ಥಾನಗಳಿಗೆ ಮಹಿಳೆಯರಿಗೆ ಪ್ರವೇಶ ಏಕಿಲ್ಲ? ಕಥುವಾ ಮತ್ತು ಉನಾವ್ ಜಿಲ್ಲೆಗಳಲ್ಲಿ ನಡೆದ ಅತ್ಯಾಚಾರಗಳನ್ನು ಆಳುತ್ತಿರುವ ಬಿಜೆಪಿ ಸರ್ಕಾರವು ಏಕೆ ಸಮರ್ಥಿಸಿಕೊಂಡಿದೆ? ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನೀತಿಗಳನ್ನು ಜಾರಿ ಮಾಡುತ್ತಿರುವುದೇಕೆ? ಎಂಬ ಪ್ರಶ್ನೆಗಳನ್ನು ನಾವು ಕೇಳುತ್ತಿದ್ದೇವೆ ಎಂದು ಸಾರಿ ಹೇಳಿದ್ದಾರೆ.
ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು, ಯೋಜನಾ ಕಾರ್ಮಿಕರುಗಳ ಮತ್ತು ಗುತ್ತಿಗೆ ಕಾರ್ಮಿಕರ ಖಾಯಮಾತಿಯಾಗಲಿ ಅಥವಾ ಕನಿಷ್ಠ ವೇತನವಾಗಲಿ ಸರ್ಕಾರಗಳು ಏಕೆ ಪೂರೈಸುತ್ತಿಲ್ಲ? ಮಲದ ಗುಂಡಿಗಳಲ್ಲಿ ಪೌರಕಾರ್ಮಿಕರು ಸತ್ತರು ಅವರಿಗೆ ಏನು ಮಾಡಿಲ್ಲ? ಮಧ್ಯ ನಿಷೇಧಕ್ಕಾಗಿ ಮಹಿಳೆಯರ ಪಾದಯಾತ್ರೆಗೆ ಏಕೆ ಸ್ಪಂದಿಸಲಿಲ್ಲ? ನಿರ್ಭೀತ ಪತ್ರಕರ್ತೆ ಗೌರಿ ಲಂಕೇಶರನ್ನು ಹತ್ಯೆ ಮಾಡಿದ್ದಲ್ಲದೆ, ಟ್ರೋಲ್ ಮಾಡಿ ಚಾರಿತ್ರ್ಯವಧೆ ಮಾಡುತ್ತಿರುವ ಪಕ್ಷ ಯಾವುದು? ಮಹಿಳಾ ಹೋರಾಟಗಾರರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಅತ್ಯಾಚಾರ ಎಸೆಗುವಂತಹ ಟೀಕೆಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಯಾವ ಪಕ್ಷ ಪ್ರೋತ್ಸಾಹಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಮನುವಾದಿ, ಕೋಮುವಾದಿ ಮತ್ತು ಜಾತಿವಾದಿ ಶಕ್ತಿಗಳನ್ನು ಸೋಲಿಸುವ ದಿಕ್ಕಿನಲ್ಲಿ ನಮ್ಮ ಮತವನ್ನು ಹಾಕಬೇಕಾಗಿರುವ ಸಂದರ್ಭವು ಈಗ ಬಂದಿರುತ್ತದೆ! ನಮ್ಮ ಮತವನ್ನು ಜಾತ್ಯಾತೀತತೆಯನ್ನು, ಸಮಾನತೆಯನ್ನು ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮತ ಚಲಾಯಿಸೋಣ. ನಮ್ಮ ಮಾನವೀಯತೆಯನ್ನು ಮರಳಿ ತರಲು ನಾವು ಮತ ಚಲಾಯಿಸೋಣ, ನೆನಪಿಡಿ ಇಂದು ಪಣಕ್ಕೆ ಒಡ್ಡಿರುವುದು ಪ್ರಜಾಪ್ರಭುತ್ವ ಮಾತ್ರವಲ್ಲ, ಮಾನವೀಯತೆಯೂ ಸಹ ಎಂದು ಘೋಷಿಸಿದ್ದಾರೆ.
ನೂರಾರು ಮಹಿಳಾ ಮತ್ತು ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳ ನಡಿಗೆ – ಬೆಂಗಳೂರು ಸಹ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ನೂರಾರು ಮಹಿಳೆಯರು, ಪ್ರಜ್ಞಾವಂತರು ಭಾಗವಹಿಸಿ ದನಿ ಎತ್ತಿದ್ದಾರೆ. ಚಿತ್ರನಿರ್ದೇಶಕಿ ಕವಿತಾ ಲಂಕೇಶ್, ಅಕೈ ಪದ್ಮಶಾಲಿ ಮುಂತಾದವರು ನೇತೃತ್ವ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...