Homeಮುಖಪುಟಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

ಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

- Advertisement -
“ಭೀತಿ ಮತ್ತು ದ್ವೇಷದ ವಿರುದ್ಧ ಮಹಿಳೆಯರು” ಎಂಬ ಘೋಷವಾಕ್ಯದಡಿ ಏಪ್ರಿಲ್ 04ರಂದು ದೇಶಾದ್ಯಂತ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಈ ಐದು ವರ್ಷದಲ್ಲಿ ಮೋದಿ ಸರ್ಕಾರದ ತಂದ ಫಾಸಿವಾದ ಮತ್ತು ನವ ಉದಾರೀಕರಣದ ನೀತಿಗಳು ಮಹಿಳೆಯರು ಮತ್ತು ಅಂಚಿಗೆ ತಳಲ್ಪಟ್ಟವರ ಮೇಲೆ ಭಾರೀ ದುಷ್ಪರಿಣಾಮಗಳನ್ನು ಬೀರಿದ್ದು, ಈ ಬಾರಿ ನಮ್ಮ ಸಮುದಾಯಗಳ ಬದಲಾವಣೆಗಾಗಿ ಮತ ಚಲಾಯಿಸೋಣ ಎಂದು ಸಂಕಲ್ಪ ಮಾಡಿದ್ದಾರೆ.
ಮಹಿಳೆ ಮತ್ತು ಅಂಚಿಕೆ ದೂಡಲ್ಪಟ್ಟ ಸಮುದಾಯಗಳ ನಡಿಗೆ (ವುಮೆನ್ಸ್ ಮಾರ್ಚ್ – ವುಮೆನ್ ವೋಟ್ ಫಾರ್ ಚೇಂಜ್) ಹೆಸರಿನಲ್ಲಿ ಇಂದು ದೇಶಾದ್ಯಂತ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಕಾರ್ಯಕ್ರಮಗಳು ನಡೆದಿದ್ದು ಲಕ್ಷಾಂತರ ಮಹಿಳೆಯರು ಪಾಲ್ಗೊಂಡಿದ್ದಾರೆ. ಆ ಮೂಲಕ ಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ನಿರ್ಣಯ ಕೈಗೊಂಡಿದ್ದಾರೆ.
ಅಲ್ಪಸಂಖ್ಯಾತರ ಮೇಲೆ ಅದರಲ್ಲೂ ಮುಸ್ಲಿಮರು, ದಲಿತರು ಮತ್ತು ಕ್ರೈಸ್ತರ ವಿರುದ್ಧ ಸುಳ್ಳು ಎನ್‍ಕೌಂಟರ್‍ಗಳು, ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಸಾಮೂಹಿಕ ಹತ್ಯೆಗಳನ್ನು ನಡೆಸುವುದಲ್ಲದೇ ಭಯ ಮತ್ತು ಅಸುರಕ್ಷತೆಯ ವಾತವಾರಣ ನಿರ್ಮಿಸಿರುವುದು, ಅದರೊಟ್ಟಿಗೆ ಟ್ರಾನ್ಸ್ ಜನರಿಗೆ ಪ್ರಜೆಯ ಸ್ಥಾನಮಾನ ನೀಡದೆ ಟ್ರಾನ್ಸ್ ಪೋಬಿಯಾ ಬೆಳೆಸುವ ನಿಟ್ಟಿನಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಮಹಿಳಾ ಸಬಲೀಕರಣ ಮತ್ತು ಭೇಟಿ ಬಚಾವೋ ಎಂಬ ಖಾಲಿ ಮತ್ತು ಕೆಲಸಕ್ಕೆ ಬಾರದ ಆಶ್ವಾಸನೆಗಳ ವಿರುದ್ಧ ಭಾರತದ ಮಹಿಳೆಯರು ದನಿ ಎತ್ತಿ ಪ್ರಶ್ನೆಗಳನ್ನು ಕೇಳಬೇಕಾಗಿದೆ, ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರವು ಮಹಿಳೆಯರಿಗಾಗಿ ಸುರಕ್ಷಿತ ಮತ್ತು ಘನತೆಯುಕ್ತ ಕೆಲಸವಾಗಲಿ, ಅಥವಾ ವೇತನವಾಗಲಿ ನೀಡುವುದರಲ್ಲಿ ವಿಫಲರಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.
ನಿರುದ್ಯೋಗವೂ 45 ವರ್ಷಗಳಲ್ಲಿ ಅತಿ ಹೆಚ್ಚಾಗಿದೆ ಏಕೆ? ರೈತರು ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಏಕೆ? ಏಕಮುಖಿಯಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತಾ ಮೀಸಲಾತಿಯನ್ನು ತಳಸಮುದಾಯಗಳಿಂದ ಕಿತ್ತುಕೊಳ್ಳುತ್ತಿರುವುದು ಏಕೆ? ದೇವಸ್ಥಾನಗಳಿಗೆ ಮಹಿಳೆಯರಿಗೆ ಪ್ರವೇಶ ಏಕಿಲ್ಲ? ಕಥುವಾ ಮತ್ತು ಉನಾವ್ ಜಿಲ್ಲೆಗಳಲ್ಲಿ ನಡೆದ ಅತ್ಯಾಚಾರಗಳನ್ನು ಆಳುತ್ತಿರುವ ಬಿಜೆಪಿ ಸರ್ಕಾರವು ಏಕೆ ಸಮರ್ಥಿಸಿಕೊಂಡಿದೆ? ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನೀತಿಗಳನ್ನು ಜಾರಿ ಮಾಡುತ್ತಿರುವುದೇಕೆ? ಎಂಬ ಪ್ರಶ್ನೆಗಳನ್ನು ನಾವು ಕೇಳುತ್ತಿದ್ದೇವೆ ಎಂದು ಸಾರಿ ಹೇಳಿದ್ದಾರೆ.
ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು, ಯೋಜನಾ ಕಾರ್ಮಿಕರುಗಳ ಮತ್ತು ಗುತ್ತಿಗೆ ಕಾರ್ಮಿಕರ ಖಾಯಮಾತಿಯಾಗಲಿ ಅಥವಾ ಕನಿಷ್ಠ ವೇತನವಾಗಲಿ ಸರ್ಕಾರಗಳು ಏಕೆ ಪೂರೈಸುತ್ತಿಲ್ಲ? ಮಲದ ಗುಂಡಿಗಳಲ್ಲಿ ಪೌರಕಾರ್ಮಿಕರು ಸತ್ತರು ಅವರಿಗೆ ಏನು ಮಾಡಿಲ್ಲ? ಮಧ್ಯ ನಿಷೇಧಕ್ಕಾಗಿ ಮಹಿಳೆಯರ ಪಾದಯಾತ್ರೆಗೆ ಏಕೆ ಸ್ಪಂದಿಸಲಿಲ್ಲ? ನಿರ್ಭೀತ ಪತ್ರಕರ್ತೆ ಗೌರಿ ಲಂಕೇಶರನ್ನು ಹತ್ಯೆ ಮಾಡಿದ್ದಲ್ಲದೆ, ಟ್ರೋಲ್ ಮಾಡಿ ಚಾರಿತ್ರ್ಯವಧೆ ಮಾಡುತ್ತಿರುವ ಪಕ್ಷ ಯಾವುದು? ಮಹಿಳಾ ಹೋರಾಟಗಾರರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಅತ್ಯಾಚಾರ ಎಸೆಗುವಂತಹ ಟೀಕೆಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಯಾವ ಪಕ್ಷ ಪ್ರೋತ್ಸಾಹಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಮನುವಾದಿ, ಕೋಮುವಾದಿ ಮತ್ತು ಜಾತಿವಾದಿ ಶಕ್ತಿಗಳನ್ನು ಸೋಲಿಸುವ ದಿಕ್ಕಿನಲ್ಲಿ ನಮ್ಮ ಮತವನ್ನು ಹಾಕಬೇಕಾಗಿರುವ ಸಂದರ್ಭವು ಈಗ ಬಂದಿರುತ್ತದೆ! ನಮ್ಮ ಮತವನ್ನು ಜಾತ್ಯಾತೀತತೆಯನ್ನು, ಸಮಾನತೆಯನ್ನು ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮತ ಚಲಾಯಿಸೋಣ. ನಮ್ಮ ಮಾನವೀಯತೆಯನ್ನು ಮರಳಿ ತರಲು ನಾವು ಮತ ಚಲಾಯಿಸೋಣ, ನೆನಪಿಡಿ ಇಂದು ಪಣಕ್ಕೆ ಒಡ್ಡಿರುವುದು ಪ್ರಜಾಪ್ರಭುತ್ವ ಮಾತ್ರವಲ್ಲ, ಮಾನವೀಯತೆಯೂ ಸಹ ಎಂದು ಘೋಷಿಸಿದ್ದಾರೆ.
ನೂರಾರು ಮಹಿಳಾ ಮತ್ತು ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳ ನಡಿಗೆ – ಬೆಂಗಳೂರು ಸಹ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ನೂರಾರು ಮಹಿಳೆಯರು, ಪ್ರಜ್ಞಾವಂತರು ಭಾಗವಹಿಸಿ ದನಿ ಎತ್ತಿದ್ದಾರೆ. ಚಿತ್ರನಿರ್ದೇಶಕಿ ಕವಿತಾ ಲಂಕೇಶ್, ಅಕೈ ಪದ್ಮಶಾಲಿ ಮುಂತಾದವರು ನೇತೃತ್ವ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...