Homeಮುಖಪುಟಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂ ತಾಕೀತು

ಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂ ತಾಕೀತು

- Advertisement -
- Advertisement -

ಸಶಸ್ತ್ರ ಪಡೆಗಳಲ್ಲಿ ಮಹಿಳೆಯರನ್ನು ಸೇರಿಸಿಕೊಳ್ಳವುದನ್ನು ನಿರಾಕರಿಸಿದ್ದ ಆಯೋಗದ ವಿರುದ್ಧ 2010 ರಲ್ಲಿ ಉನ್ನತ ನ್ಯಾಯಾಲಯದ ಮೆಟ್ಟಿಲೇರಿದ್ದ ಎಂಟು ಮಹಿಳಾ ಸೇನಾಧಿಕಾರಿಗಳಿಗೆ ಶಾಶ್ವತ ಆಯೋಗದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸೇನೆಗೆ ತಿಳಿಸಿದೆ. ಒಂಬತ್ತು ವರ್ಷಗಳ ನಂತರ ಸರ್ಕಾರವು ಅಂತಿಮವಾಗಿ ಶಾಶ್ವತ ಆಯೋಗವನ್ನು ರಚಿಸಲು ಒಪ್ಪಿಕೊಂಡಿತು ಆದರೆ ಈ ನಿರ್ಧಾರದ ವಿರುದ್ಧ ಮೊದಲು ನ್ಯಾಯಾಲಯದ ಮೆಟ್ಟಿಲೇರಿದ್ದ 8 ಮಹಿಳೆಯರನ್ನು ಅದರಿಂದ ಕೈಬಿಟ್ಟಿತ್ತು.

“ನಾವು ಆದೇಶವನ್ನು ನೀಡಬಹುದು ಆದರೆ ಅದರ ಕ್ರೆಡಿಟ್ ಪಡೆಯಲು ನಾವು ನಿಮಗೆ ಅವಕಾಶ ನೀಡುತ್ತಿದ್ದೇವೆ” ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಸೇನೆಗೆ ತಿಳಿಸಿತು. ಸಣ್ಣ ಸೇವಾ ಆಯೋಗ, ಅಥವಾ ಎಸ್‌ಎಸ್‌ಸಿಗಾಗಿ ಮಹಿಳೆಯರನ್ನು ಸೇರಿಸಿಕೊಳ್ಳುವ ಶಾಖೆಗಳಲ್ಲಿ ಸೇನೆಯ 10 ರಲ್ಲಿ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.

ಈ ಸೌಲಭ್ಯವು ಏಪ್ರಿಲ್ 2020 ರಿಂದ ಮಹಿಳಾ ಅಧಿಕಾರಿಗಳಿಗೆ ಪ್ರಾರಂಭವಾಗುತ್ತದೆ ಎಂದು ಸಹ ಸುಪ್ರೀಂ ಕೋರ್ಟ್‌ ತಿಳಿಸಿದೆ.

ಸೈನ್ಯಗಳಲ್ಲಿ ಶಾಶ್ವತ ಆಯೋಗವನ್ನು ರಚಿಸದೇ ಇರುವುದರ ಲಿಂಗ ಪಕ್ಷಪಾತದ ವಿರುದ್ಧ ಹೋರಾಡಿದ ಮಹಿಳೆಯರನ್ನು ಒಳಗೊಂಡಿಲ್ಲ ಮಹಿಳಾ ಅಧಿಕಾರಿಗಳ ಪರ ವಕೀಲ ಐಶ್ವರ್ಯ ಭಟ್ಟಿ ಅವರು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಮುಂದಿನ ಗುರುವಾರ ವೇಳೆಗೆ ಸಕಾರಾತ್ಮಕ ಪ್ರತಿಕ್ರಿಯೆಯೊಂದಿಗೆ ಹಿಂತಿರುಗುವಂತೆ ನ್ಯಾಯಪೀಠ ಕೇಂದ್ರದ ಕಾನೂನು ಅಧಿಕಾರಿ ಸಂಜಯ್ ಜೈನ್ ಅವರಿಗೆ ತಿಳಿಸಿದೆ. ಈ ಪ್ರಕರಣವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿದೆ  ಎಂಬ ಕಾರಣಕ್ಕೆ ಜೈನ್ ಈ ಹಿಂದೆ ಸಮಯ ಕೋರಿದ್ದರು.

ಹೊಸ ವ್ಯವಸ್ಥೆಯಡಿಯಲ್ಲಿ, ಎಸ್‌ಎಸ್‌ಸಿ ಮಹಿಳಾ ಅಧಿಕಾರಿಗಳು ನಾಲ್ಕು ವರ್ಷಗಳ ಸೇವೆಯೊಳಗೆ ಶಾಶ್ವತ ಆಯೋಗವನ್ನು ಬಯಸುತ್ತಾರೆಯೇ ಎಂದು ಸೂಚಿಸುವ ಅಗತ್ಯವಿದೆ.

ಭಾರತೀಯ ವಾಯುಪಡೆಯು ಈಗಾಗಲೇ ಮಹಿಳಾ ಅಧಿಕಾರಿಗಳಿಗಾಗಿ ಫೈಟರ್ ಪೈಲಟ್‌ಗಳು ಸೇರಿದಂತೆ ಎಲ್ಲಾ ಶಾಖೆಗಳನ್ನು ತೆರೆದಿದೆ. ನೌಕಾಪಡೆಯ, ಸಣ್ಣ ಸೇವಾ ಆಯೋಗದ ಮೂಲಕ ಮಹಿಳಾ ಅಧಿಕಾರಿಗಳನ್ನು ಸೇರಿಸಲು ಸಮುದ್ರೇತರ ಎಲ್ಲಾ ಶಾಖೆಗಳು ಮತ್ತು ವಿಶೇಷತೆಯನ್ನು ತೆರೆಯಲಾಗಿದೆ. ಮಹಿಳಾ ಎಸ್‌ಎಸ್‌ಸಿ ಅಧಿಕಾರಿಗಳನ್ನು ಪುರುಷ ಅಧಿಕಾರಿಗಳಿಗೆ ಸಮನಾಗಿ ನೌಕಾ ಶಸ್ತ್ರಾಸ್ತ್ರ ಶಾಖೆಯಲ್ಲಿ ಶಾಶ್ವತ ಆಯೋಗವನ್ನು ನೀಡಲು ಅರ್ಹರನ್ನಾಗಿ ಮಾಡಲಾಗಿದೆ.

ಮಾರ್ಚ್ 2010 ರಲ್ಲಿ ಎಸ್‌ಎಸ್‌ಸಿಯಲ್ಲಿ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ನೀಡುವಂತೆ ದೆಹಲಿ ಹೈಕೋರ್ಟ್ ಸಶಸ್ತ್ರ ಪಡೆಗಳಿಗೆ ಆದೇಶಿಸಿತ್ತು. ಈ ತೀರ್ಪಿನ ವಿರುದ್ಧ ಮೂರು ಸೇವೆಗಳಲ್ಲಿ ಒಂದು ಸೈನ್ಯ ಮಾತ್ರ  ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಹೈಕೋರ್ಟ್ ತೀರ್ಪಿನ ಮೊದಲು, ಮಹಿಳಾ ಅಧಿಕಾರಿಗಳು 14 ವರ್ಷಗಳ ನಂತರ ನಿವೃತ್ತರಾಗುತ್ತಿದ್ದರು. ಮತ್ತು ವಿಸ್ತರಣೆಯ ವ್ಯಾಪ್ತಿಯನ್ನು ಹೊಂದಿರಲಿಲ್ಲ. ಆದರೆ ಅವರ ಪುರುಷ ಸಹವರ್ತಿಗಳು ಮಾತ್ರ ಐದು ವರ್ಷಗಳ ವಿಸ್ತರಣೆಯನ್ನು ಸ್ವೀಕರಿಸಲು ಅರ್ಹರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರಿಗೆ ಶಾಶ್ವತ ಆಯೋಗದ ಕಲ್ಪನೆಯನ್ನು ಬೆಂಬಲಿಸಿದ್ದರು ಮತ್ತು ಕಳೆದ ವರ್ಷ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಅವರು ಮಾಡಿದ ಭಾಷಣದಲ್ಲಿ ಈ ಬದಲಾವಣೆಯನ್ನು ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...