Homeಮುಖಪುಟಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂ ತಾಕೀತು

ಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂ ತಾಕೀತು

- Advertisement -
- Advertisement -

ಸಶಸ್ತ್ರ ಪಡೆಗಳಲ್ಲಿ ಮಹಿಳೆಯರನ್ನು ಸೇರಿಸಿಕೊಳ್ಳವುದನ್ನು ನಿರಾಕರಿಸಿದ್ದ ಆಯೋಗದ ವಿರುದ್ಧ 2010 ರಲ್ಲಿ ಉನ್ನತ ನ್ಯಾಯಾಲಯದ ಮೆಟ್ಟಿಲೇರಿದ್ದ ಎಂಟು ಮಹಿಳಾ ಸೇನಾಧಿಕಾರಿಗಳಿಗೆ ಶಾಶ್ವತ ಆಯೋಗದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸೇನೆಗೆ ತಿಳಿಸಿದೆ. ಒಂಬತ್ತು ವರ್ಷಗಳ ನಂತರ ಸರ್ಕಾರವು ಅಂತಿಮವಾಗಿ ಶಾಶ್ವತ ಆಯೋಗವನ್ನು ರಚಿಸಲು ಒಪ್ಪಿಕೊಂಡಿತು ಆದರೆ ಈ ನಿರ್ಧಾರದ ವಿರುದ್ಧ ಮೊದಲು ನ್ಯಾಯಾಲಯದ ಮೆಟ್ಟಿಲೇರಿದ್ದ 8 ಮಹಿಳೆಯರನ್ನು ಅದರಿಂದ ಕೈಬಿಟ್ಟಿತ್ತು.

“ನಾವು ಆದೇಶವನ್ನು ನೀಡಬಹುದು ಆದರೆ ಅದರ ಕ್ರೆಡಿಟ್ ಪಡೆಯಲು ನಾವು ನಿಮಗೆ ಅವಕಾಶ ನೀಡುತ್ತಿದ್ದೇವೆ” ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಸೇನೆಗೆ ತಿಳಿಸಿತು. ಸಣ್ಣ ಸೇವಾ ಆಯೋಗ, ಅಥವಾ ಎಸ್‌ಎಸ್‌ಸಿಗಾಗಿ ಮಹಿಳೆಯರನ್ನು ಸೇರಿಸಿಕೊಳ್ಳುವ ಶಾಖೆಗಳಲ್ಲಿ ಸೇನೆಯ 10 ರಲ್ಲಿ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.

ಈ ಸೌಲಭ್ಯವು ಏಪ್ರಿಲ್ 2020 ರಿಂದ ಮಹಿಳಾ ಅಧಿಕಾರಿಗಳಿಗೆ ಪ್ರಾರಂಭವಾಗುತ್ತದೆ ಎಂದು ಸಹ ಸುಪ್ರೀಂ ಕೋರ್ಟ್‌ ತಿಳಿಸಿದೆ.

ಸೈನ್ಯಗಳಲ್ಲಿ ಶಾಶ್ವತ ಆಯೋಗವನ್ನು ರಚಿಸದೇ ಇರುವುದರ ಲಿಂಗ ಪಕ್ಷಪಾತದ ವಿರುದ್ಧ ಹೋರಾಡಿದ ಮಹಿಳೆಯರನ್ನು ಒಳಗೊಂಡಿಲ್ಲ ಮಹಿಳಾ ಅಧಿಕಾರಿಗಳ ಪರ ವಕೀಲ ಐಶ್ವರ್ಯ ಭಟ್ಟಿ ಅವರು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಮುಂದಿನ ಗುರುವಾರ ವೇಳೆಗೆ ಸಕಾರಾತ್ಮಕ ಪ್ರತಿಕ್ರಿಯೆಯೊಂದಿಗೆ ಹಿಂತಿರುಗುವಂತೆ ನ್ಯಾಯಪೀಠ ಕೇಂದ್ರದ ಕಾನೂನು ಅಧಿಕಾರಿ ಸಂಜಯ್ ಜೈನ್ ಅವರಿಗೆ ತಿಳಿಸಿದೆ. ಈ ಪ್ರಕರಣವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿದೆ  ಎಂಬ ಕಾರಣಕ್ಕೆ ಜೈನ್ ಈ ಹಿಂದೆ ಸಮಯ ಕೋರಿದ್ದರು.

ಹೊಸ ವ್ಯವಸ್ಥೆಯಡಿಯಲ್ಲಿ, ಎಸ್‌ಎಸ್‌ಸಿ ಮಹಿಳಾ ಅಧಿಕಾರಿಗಳು ನಾಲ್ಕು ವರ್ಷಗಳ ಸೇವೆಯೊಳಗೆ ಶಾಶ್ವತ ಆಯೋಗವನ್ನು ಬಯಸುತ್ತಾರೆಯೇ ಎಂದು ಸೂಚಿಸುವ ಅಗತ್ಯವಿದೆ.

ಭಾರತೀಯ ವಾಯುಪಡೆಯು ಈಗಾಗಲೇ ಮಹಿಳಾ ಅಧಿಕಾರಿಗಳಿಗಾಗಿ ಫೈಟರ್ ಪೈಲಟ್‌ಗಳು ಸೇರಿದಂತೆ ಎಲ್ಲಾ ಶಾಖೆಗಳನ್ನು ತೆರೆದಿದೆ. ನೌಕಾಪಡೆಯ, ಸಣ್ಣ ಸೇವಾ ಆಯೋಗದ ಮೂಲಕ ಮಹಿಳಾ ಅಧಿಕಾರಿಗಳನ್ನು ಸೇರಿಸಲು ಸಮುದ್ರೇತರ ಎಲ್ಲಾ ಶಾಖೆಗಳು ಮತ್ತು ವಿಶೇಷತೆಯನ್ನು ತೆರೆಯಲಾಗಿದೆ. ಮಹಿಳಾ ಎಸ್‌ಎಸ್‌ಸಿ ಅಧಿಕಾರಿಗಳನ್ನು ಪುರುಷ ಅಧಿಕಾರಿಗಳಿಗೆ ಸಮನಾಗಿ ನೌಕಾ ಶಸ್ತ್ರಾಸ್ತ್ರ ಶಾಖೆಯಲ್ಲಿ ಶಾಶ್ವತ ಆಯೋಗವನ್ನು ನೀಡಲು ಅರ್ಹರನ್ನಾಗಿ ಮಾಡಲಾಗಿದೆ.

ಮಾರ್ಚ್ 2010 ರಲ್ಲಿ ಎಸ್‌ಎಸ್‌ಸಿಯಲ್ಲಿ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ನೀಡುವಂತೆ ದೆಹಲಿ ಹೈಕೋರ್ಟ್ ಸಶಸ್ತ್ರ ಪಡೆಗಳಿಗೆ ಆದೇಶಿಸಿತ್ತು. ಈ ತೀರ್ಪಿನ ವಿರುದ್ಧ ಮೂರು ಸೇವೆಗಳಲ್ಲಿ ಒಂದು ಸೈನ್ಯ ಮಾತ್ರ  ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಹೈಕೋರ್ಟ್ ತೀರ್ಪಿನ ಮೊದಲು, ಮಹಿಳಾ ಅಧಿಕಾರಿಗಳು 14 ವರ್ಷಗಳ ನಂತರ ನಿವೃತ್ತರಾಗುತ್ತಿದ್ದರು. ಮತ್ತು ವಿಸ್ತರಣೆಯ ವ್ಯಾಪ್ತಿಯನ್ನು ಹೊಂದಿರಲಿಲ್ಲ. ಆದರೆ ಅವರ ಪುರುಷ ಸಹವರ್ತಿಗಳು ಮಾತ್ರ ಐದು ವರ್ಷಗಳ ವಿಸ್ತರಣೆಯನ್ನು ಸ್ವೀಕರಿಸಲು ಅರ್ಹರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರಿಗೆ ಶಾಶ್ವತ ಆಯೋಗದ ಕಲ್ಪನೆಯನ್ನು ಬೆಂಬಲಿಸಿದ್ದರು ಮತ್ತು ಕಳೆದ ವರ್ಷ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಅವರು ಮಾಡಿದ ಭಾಷಣದಲ್ಲಿ ಈ ಬದಲಾವಣೆಯನ್ನು ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...