Homeಮುಖಪುಟಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂ ತಾಕೀತು

ಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂ ತಾಕೀತು

- Advertisement -
- Advertisement -

ಸಶಸ್ತ್ರ ಪಡೆಗಳಲ್ಲಿ ಮಹಿಳೆಯರನ್ನು ಸೇರಿಸಿಕೊಳ್ಳವುದನ್ನು ನಿರಾಕರಿಸಿದ್ದ ಆಯೋಗದ ವಿರುದ್ಧ 2010 ರಲ್ಲಿ ಉನ್ನತ ನ್ಯಾಯಾಲಯದ ಮೆಟ್ಟಿಲೇರಿದ್ದ ಎಂಟು ಮಹಿಳಾ ಸೇನಾಧಿಕಾರಿಗಳಿಗೆ ಶಾಶ್ವತ ಆಯೋಗದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸೇನೆಗೆ ತಿಳಿಸಿದೆ. ಒಂಬತ್ತು ವರ್ಷಗಳ ನಂತರ ಸರ್ಕಾರವು ಅಂತಿಮವಾಗಿ ಶಾಶ್ವತ ಆಯೋಗವನ್ನು ರಚಿಸಲು ಒಪ್ಪಿಕೊಂಡಿತು ಆದರೆ ಈ ನಿರ್ಧಾರದ ವಿರುದ್ಧ ಮೊದಲು ನ್ಯಾಯಾಲಯದ ಮೆಟ್ಟಿಲೇರಿದ್ದ 8 ಮಹಿಳೆಯರನ್ನು ಅದರಿಂದ ಕೈಬಿಟ್ಟಿತ್ತು.

“ನಾವು ಆದೇಶವನ್ನು ನೀಡಬಹುದು ಆದರೆ ಅದರ ಕ್ರೆಡಿಟ್ ಪಡೆಯಲು ನಾವು ನಿಮಗೆ ಅವಕಾಶ ನೀಡುತ್ತಿದ್ದೇವೆ” ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಸೇನೆಗೆ ತಿಳಿಸಿತು. ಸಣ್ಣ ಸೇವಾ ಆಯೋಗ, ಅಥವಾ ಎಸ್‌ಎಸ್‌ಸಿಗಾಗಿ ಮಹಿಳೆಯರನ್ನು ಸೇರಿಸಿಕೊಳ್ಳುವ ಶಾಖೆಗಳಲ್ಲಿ ಸೇನೆಯ 10 ರಲ್ಲಿ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.

ಈ ಸೌಲಭ್ಯವು ಏಪ್ರಿಲ್ 2020 ರಿಂದ ಮಹಿಳಾ ಅಧಿಕಾರಿಗಳಿಗೆ ಪ್ರಾರಂಭವಾಗುತ್ತದೆ ಎಂದು ಸಹ ಸುಪ್ರೀಂ ಕೋರ್ಟ್‌ ತಿಳಿಸಿದೆ.

ಸೈನ್ಯಗಳಲ್ಲಿ ಶಾಶ್ವತ ಆಯೋಗವನ್ನು ರಚಿಸದೇ ಇರುವುದರ ಲಿಂಗ ಪಕ್ಷಪಾತದ ವಿರುದ್ಧ ಹೋರಾಡಿದ ಮಹಿಳೆಯರನ್ನು ಒಳಗೊಂಡಿಲ್ಲ ಮಹಿಳಾ ಅಧಿಕಾರಿಗಳ ಪರ ವಕೀಲ ಐಶ್ವರ್ಯ ಭಟ್ಟಿ ಅವರು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಮುಂದಿನ ಗುರುವಾರ ವೇಳೆಗೆ ಸಕಾರಾತ್ಮಕ ಪ್ರತಿಕ್ರಿಯೆಯೊಂದಿಗೆ ಹಿಂತಿರುಗುವಂತೆ ನ್ಯಾಯಪೀಠ ಕೇಂದ್ರದ ಕಾನೂನು ಅಧಿಕಾರಿ ಸಂಜಯ್ ಜೈನ್ ಅವರಿಗೆ ತಿಳಿಸಿದೆ. ಈ ಪ್ರಕರಣವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿದೆ  ಎಂಬ ಕಾರಣಕ್ಕೆ ಜೈನ್ ಈ ಹಿಂದೆ ಸಮಯ ಕೋರಿದ್ದರು.

ಹೊಸ ವ್ಯವಸ್ಥೆಯಡಿಯಲ್ಲಿ, ಎಸ್‌ಎಸ್‌ಸಿ ಮಹಿಳಾ ಅಧಿಕಾರಿಗಳು ನಾಲ್ಕು ವರ್ಷಗಳ ಸೇವೆಯೊಳಗೆ ಶಾಶ್ವತ ಆಯೋಗವನ್ನು ಬಯಸುತ್ತಾರೆಯೇ ಎಂದು ಸೂಚಿಸುವ ಅಗತ್ಯವಿದೆ.

ಭಾರತೀಯ ವಾಯುಪಡೆಯು ಈಗಾಗಲೇ ಮಹಿಳಾ ಅಧಿಕಾರಿಗಳಿಗಾಗಿ ಫೈಟರ್ ಪೈಲಟ್‌ಗಳು ಸೇರಿದಂತೆ ಎಲ್ಲಾ ಶಾಖೆಗಳನ್ನು ತೆರೆದಿದೆ. ನೌಕಾಪಡೆಯ, ಸಣ್ಣ ಸೇವಾ ಆಯೋಗದ ಮೂಲಕ ಮಹಿಳಾ ಅಧಿಕಾರಿಗಳನ್ನು ಸೇರಿಸಲು ಸಮುದ್ರೇತರ ಎಲ್ಲಾ ಶಾಖೆಗಳು ಮತ್ತು ವಿಶೇಷತೆಯನ್ನು ತೆರೆಯಲಾಗಿದೆ. ಮಹಿಳಾ ಎಸ್‌ಎಸ್‌ಸಿ ಅಧಿಕಾರಿಗಳನ್ನು ಪುರುಷ ಅಧಿಕಾರಿಗಳಿಗೆ ಸಮನಾಗಿ ನೌಕಾ ಶಸ್ತ್ರಾಸ್ತ್ರ ಶಾಖೆಯಲ್ಲಿ ಶಾಶ್ವತ ಆಯೋಗವನ್ನು ನೀಡಲು ಅರ್ಹರನ್ನಾಗಿ ಮಾಡಲಾಗಿದೆ.

ಮಾರ್ಚ್ 2010 ರಲ್ಲಿ ಎಸ್‌ಎಸ್‌ಸಿಯಲ್ಲಿ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ನೀಡುವಂತೆ ದೆಹಲಿ ಹೈಕೋರ್ಟ್ ಸಶಸ್ತ್ರ ಪಡೆಗಳಿಗೆ ಆದೇಶಿಸಿತ್ತು. ಈ ತೀರ್ಪಿನ ವಿರುದ್ಧ ಮೂರು ಸೇವೆಗಳಲ್ಲಿ ಒಂದು ಸೈನ್ಯ ಮಾತ್ರ  ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಹೈಕೋರ್ಟ್ ತೀರ್ಪಿನ ಮೊದಲು, ಮಹಿಳಾ ಅಧಿಕಾರಿಗಳು 14 ವರ್ಷಗಳ ನಂತರ ನಿವೃತ್ತರಾಗುತ್ತಿದ್ದರು. ಮತ್ತು ವಿಸ್ತರಣೆಯ ವ್ಯಾಪ್ತಿಯನ್ನು ಹೊಂದಿರಲಿಲ್ಲ. ಆದರೆ ಅವರ ಪುರುಷ ಸಹವರ್ತಿಗಳು ಮಾತ್ರ ಐದು ವರ್ಷಗಳ ವಿಸ್ತರಣೆಯನ್ನು ಸ್ವೀಕರಿಸಲು ಅರ್ಹರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರಿಗೆ ಶಾಶ್ವತ ಆಯೋಗದ ಕಲ್ಪನೆಯನ್ನು ಬೆಂಬಲಿಸಿದ್ದರು ಮತ್ತು ಕಳೆದ ವರ್ಷ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಅವರು ಮಾಡಿದ ಭಾಷಣದಲ್ಲಿ ಈ ಬದಲಾವಣೆಯನ್ನು ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...