Homeಮುಖಪುಟಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂ ತಾಕೀತು

ಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂ ತಾಕೀತು

- Advertisement -
- Advertisement -

ಸಶಸ್ತ್ರ ಪಡೆಗಳಲ್ಲಿ ಮಹಿಳೆಯರನ್ನು ಸೇರಿಸಿಕೊಳ್ಳವುದನ್ನು ನಿರಾಕರಿಸಿದ್ದ ಆಯೋಗದ ವಿರುದ್ಧ 2010 ರಲ್ಲಿ ಉನ್ನತ ನ್ಯಾಯಾಲಯದ ಮೆಟ್ಟಿಲೇರಿದ್ದ ಎಂಟು ಮಹಿಳಾ ಸೇನಾಧಿಕಾರಿಗಳಿಗೆ ಶಾಶ್ವತ ಆಯೋಗದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸೇನೆಗೆ ತಿಳಿಸಿದೆ. ಒಂಬತ್ತು ವರ್ಷಗಳ ನಂತರ ಸರ್ಕಾರವು ಅಂತಿಮವಾಗಿ ಶಾಶ್ವತ ಆಯೋಗವನ್ನು ರಚಿಸಲು ಒಪ್ಪಿಕೊಂಡಿತು ಆದರೆ ಈ ನಿರ್ಧಾರದ ವಿರುದ್ಧ ಮೊದಲು ನ್ಯಾಯಾಲಯದ ಮೆಟ್ಟಿಲೇರಿದ್ದ 8 ಮಹಿಳೆಯರನ್ನು ಅದರಿಂದ ಕೈಬಿಟ್ಟಿತ್ತು.

“ನಾವು ಆದೇಶವನ್ನು ನೀಡಬಹುದು ಆದರೆ ಅದರ ಕ್ರೆಡಿಟ್ ಪಡೆಯಲು ನಾವು ನಿಮಗೆ ಅವಕಾಶ ನೀಡುತ್ತಿದ್ದೇವೆ” ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಸೇನೆಗೆ ತಿಳಿಸಿತು. ಸಣ್ಣ ಸೇವಾ ಆಯೋಗ, ಅಥವಾ ಎಸ್‌ಎಸ್‌ಸಿಗಾಗಿ ಮಹಿಳೆಯರನ್ನು ಸೇರಿಸಿಕೊಳ್ಳುವ ಶಾಖೆಗಳಲ್ಲಿ ಸೇನೆಯ 10 ರಲ್ಲಿ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.

ಈ ಸೌಲಭ್ಯವು ಏಪ್ರಿಲ್ 2020 ರಿಂದ ಮಹಿಳಾ ಅಧಿಕಾರಿಗಳಿಗೆ ಪ್ರಾರಂಭವಾಗುತ್ತದೆ ಎಂದು ಸಹ ಸುಪ್ರೀಂ ಕೋರ್ಟ್‌ ತಿಳಿಸಿದೆ.

ಸೈನ್ಯಗಳಲ್ಲಿ ಶಾಶ್ವತ ಆಯೋಗವನ್ನು ರಚಿಸದೇ ಇರುವುದರ ಲಿಂಗ ಪಕ್ಷಪಾತದ ವಿರುದ್ಧ ಹೋರಾಡಿದ ಮಹಿಳೆಯರನ್ನು ಒಳಗೊಂಡಿಲ್ಲ ಮಹಿಳಾ ಅಧಿಕಾರಿಗಳ ಪರ ವಕೀಲ ಐಶ್ವರ್ಯ ಭಟ್ಟಿ ಅವರು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಮುಂದಿನ ಗುರುವಾರ ವೇಳೆಗೆ ಸಕಾರಾತ್ಮಕ ಪ್ರತಿಕ್ರಿಯೆಯೊಂದಿಗೆ ಹಿಂತಿರುಗುವಂತೆ ನ್ಯಾಯಪೀಠ ಕೇಂದ್ರದ ಕಾನೂನು ಅಧಿಕಾರಿ ಸಂಜಯ್ ಜೈನ್ ಅವರಿಗೆ ತಿಳಿಸಿದೆ. ಈ ಪ್ರಕರಣವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿದೆ  ಎಂಬ ಕಾರಣಕ್ಕೆ ಜೈನ್ ಈ ಹಿಂದೆ ಸಮಯ ಕೋರಿದ್ದರು.

ಹೊಸ ವ್ಯವಸ್ಥೆಯಡಿಯಲ್ಲಿ, ಎಸ್‌ಎಸ್‌ಸಿ ಮಹಿಳಾ ಅಧಿಕಾರಿಗಳು ನಾಲ್ಕು ವರ್ಷಗಳ ಸೇವೆಯೊಳಗೆ ಶಾಶ್ವತ ಆಯೋಗವನ್ನು ಬಯಸುತ್ತಾರೆಯೇ ಎಂದು ಸೂಚಿಸುವ ಅಗತ್ಯವಿದೆ.

ಭಾರತೀಯ ವಾಯುಪಡೆಯು ಈಗಾಗಲೇ ಮಹಿಳಾ ಅಧಿಕಾರಿಗಳಿಗಾಗಿ ಫೈಟರ್ ಪೈಲಟ್‌ಗಳು ಸೇರಿದಂತೆ ಎಲ್ಲಾ ಶಾಖೆಗಳನ್ನು ತೆರೆದಿದೆ. ನೌಕಾಪಡೆಯ, ಸಣ್ಣ ಸೇವಾ ಆಯೋಗದ ಮೂಲಕ ಮಹಿಳಾ ಅಧಿಕಾರಿಗಳನ್ನು ಸೇರಿಸಲು ಸಮುದ್ರೇತರ ಎಲ್ಲಾ ಶಾಖೆಗಳು ಮತ್ತು ವಿಶೇಷತೆಯನ್ನು ತೆರೆಯಲಾಗಿದೆ. ಮಹಿಳಾ ಎಸ್‌ಎಸ್‌ಸಿ ಅಧಿಕಾರಿಗಳನ್ನು ಪುರುಷ ಅಧಿಕಾರಿಗಳಿಗೆ ಸಮನಾಗಿ ನೌಕಾ ಶಸ್ತ್ರಾಸ್ತ್ರ ಶಾಖೆಯಲ್ಲಿ ಶಾಶ್ವತ ಆಯೋಗವನ್ನು ನೀಡಲು ಅರ್ಹರನ್ನಾಗಿ ಮಾಡಲಾಗಿದೆ.

ಮಾರ್ಚ್ 2010 ರಲ್ಲಿ ಎಸ್‌ಎಸ್‌ಸಿಯಲ್ಲಿ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ನೀಡುವಂತೆ ದೆಹಲಿ ಹೈಕೋರ್ಟ್ ಸಶಸ್ತ್ರ ಪಡೆಗಳಿಗೆ ಆದೇಶಿಸಿತ್ತು. ಈ ತೀರ್ಪಿನ ವಿರುದ್ಧ ಮೂರು ಸೇವೆಗಳಲ್ಲಿ ಒಂದು ಸೈನ್ಯ ಮಾತ್ರ  ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಹೈಕೋರ್ಟ್ ತೀರ್ಪಿನ ಮೊದಲು, ಮಹಿಳಾ ಅಧಿಕಾರಿಗಳು 14 ವರ್ಷಗಳ ನಂತರ ನಿವೃತ್ತರಾಗುತ್ತಿದ್ದರು. ಮತ್ತು ವಿಸ್ತರಣೆಯ ವ್ಯಾಪ್ತಿಯನ್ನು ಹೊಂದಿರಲಿಲ್ಲ. ಆದರೆ ಅವರ ಪುರುಷ ಸಹವರ್ತಿಗಳು ಮಾತ್ರ ಐದು ವರ್ಷಗಳ ವಿಸ್ತರಣೆಯನ್ನು ಸ್ವೀಕರಿಸಲು ಅರ್ಹರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರಿಗೆ ಶಾಶ್ವತ ಆಯೋಗದ ಕಲ್ಪನೆಯನ್ನು ಬೆಂಬಲಿಸಿದ್ದರು ಮತ್ತು ಕಳೆದ ವರ್ಷ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಅವರು ಮಾಡಿದ ಭಾಷಣದಲ್ಲಿ ಈ ಬದಲಾವಣೆಯನ್ನು ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...