Homeಮುಖಪುಟ2020 ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ: ಉತ್ತರಪ್ರದೇಶದಲ್ಲಿ ಅತಿ ಹೆಚ್ಚು

2020 ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ: ಉತ್ತರಪ್ರದೇಶದಲ್ಲಿ ಅತಿ ಹೆಚ್ಚು

- Advertisement -
- Advertisement -

2020 ರಲ್ಲಿ ಅತೀ ಹೆಚ್ಚು ಮಹಿಳೆಯರ ಮೇಲಿನ ದೌರ್ಜನ್ಯ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಂಕಿಅಂಶಗಳು ತಿಳಿಸಿದೆ. ಕಳೆದ ವರ್ಷದಲ್ಲಿ ಮಹಿಳಾ ಆಯೋಗವು 23,722 ದೂರುಗಳನ್ನು ಸ್ವೀಕರಿಸಿದೆ. ಇದು ಕಳೆದ 6 ವರ್ಷಗಳಲ್ಲೇ ಅತ್ಯಧಿಕವಾಗಿದ್ದು, ಈ ದೂರುಗಳಲ್ಲಿ ಹೆಚ್ಚಿನವು ಕೌಟುಂಬಿಕ ದೌರ್ಜನ್ಯ ಹಾಗೂ ಘನತೆಯ ಬದುಕಿನ ಹಕ್ಕಿನ ಕಲಂ ಅಡಿಯಲ್ಲಿ ಸ್ವೀಕರಿಸಿದ ದೂರುಗಳಾಗಿದೆ.

ಉತ್ತರಪ್ರದೇಶವೊಂದರಲ್ಲೇ 11,872 ದೂರುಗಳನ್ನು ಆಯೋಗ ಸ್ವೀಕರಿಸಿದೆ. ದೆಹಲಿಯಿಂದ 2,635, ಹರ್ಯಾಣದಿಂದ 1,266 ಮತ್ತು ಮಹಾರಾಷ್ಟ್ರದಿಂದ 1,188 ದೂರುಗಳನ್ನು ಆಯೋಗವು ಸ್ವೀಕರಿಸಿದೆ. 23,722 ದೂರುಗಳಲ್ಲಿ 7708 ದೂರುಗಳು ಘನತೆಯ ಬದುಕಿನ ಹಕ್ಕಿನ ಕಲಂ ಅಡಿಯಲ್ಲಿ ಸ್ವೀಕರಿಸಿದ್ದು, ಈ ಕಲಂ ಮಹಿಳೆಯರ ಮೇಲಿನ ಭಾವನಾತ್ಮಕ ಕಿರುಕುಳವನ್ನು ಪರಿಗಣನೆಗೆ ತೆಗೆದುಕೊಳ್ಳುತ್ತದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದ ಅಡಿಯಲ್ಲಿ 5,294 ದೂರುಗಳನ್ನು ಸ್ವೀಕರಿಸಲಾಗಿದೆ ಎಂದು ಆಯೋಗದ ಅಂಕಿಅಂಶಗಳು ಹೇಳಿದೆ.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಆಯೋಗದಲ್ಲಿ ದಾಖಲಾಗಿರುವ ದೂರುಗಳಲ್ಲಿ ಮೂರನೇ ಅತ್ಯಧಿಕ ದೂರು ವರದಕ್ಷಿಣೆ ಕುರಿತ ಕಿರುಕುಳದ್ದಾಗಿದೆ. 3,784 ವರದಕ್ಷಿಣೆ ಕುರಿತಾದ ದೂರುಗಳನ್ನು ಆಯೋಗ ಸ್ವೀಕರಿಸಿದೆ. ಕಿರುಕುಳಕ್ಕೆ ಸಂಬಂಧಿಸಿದ 1,679 ದೂರುಗಳು, ಅತ್ಯಾಚಾರ ಅಥವಾ ಅತ್ಯಾಚಾರ ಯತ್ನಕ್ಕೆ ಸಂಬಂಧಿಸಿದ 1,234 ದೂರುಗಳು ಮತ್ತು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ 376 ದೂರುಗಳನ್ನು ಸ್ವೀಕರಿಸಲಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಂಕಿ ಅಂಶಗಳು ತಿಳಿಸಿದೆ.

2020 ಯಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಭದ್ರತೆ, ಆತಂಕ, ಒತ್ತಡದ ಪ್ರಮಾಣ, ಆರ್ಥಿಕ ಚಿಂತೆ ಹಾಗೂ ಕುಟುಂಬ ಮತ್ತು ಹೆತ್ತವರ ಕಡೆಯಿಂದ ಭಾವನೆಗಳಿಗೆ ಸಿಗುತ್ತಿರುವ ಬೆಂಬಲದ ಕೊರತೆಯಿಂದ ಈ ಕೌಟುಂಬಿಕ ದೌರ್ಜನ್ಯಕ್ಕೆ ಕಾರಣವಾಗಿರಬಹುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಹೇಳಿದ್ದಾರೆ.

2014 ರಲ್ಲಿ ಒಟ್ಟು 33,906 ದೂರುಗಳನ್ನು ಸ್ವೀಕರಿಸಲಾಗಿತ್ತು. ಅದರ ನಂತರ 2020 ರಲ್ಲೇ ಆಗಿದೆ ಅತೀ ಹೆಚ್ಚು ದೂರುಗಳು ದಾಖಲಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಂಕಿಅಂಶಗಳು ತಿಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಮಾರ್ಚ್‌ನಲ್ಲಿ ಲಾಕ್‌ಡೌನ್ ಜಾರಿಯಾದ ಬಳಿಕ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಕೌಟುಂಬಿಕ ದೌರ್ಜನ್ಯದ ಆರೋಪದ ಅತ್ಯಧಿಕ ದೂರುಗಳು ಬಂದಿದೆ.

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...