Homeಮುಖಪುಟಮಹಿಳಾ ಕೋಚ್ ದೂರು; ಹರಿಯಾಣ ಕ್ರೀಡಾ ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು

ಮಹಿಳಾ ಕೋಚ್ ದೂರು; ಹರಿಯಾಣ ಕ್ರೀಡಾ ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು

ಭಾರತ ಹಾಕಿ ತಂಡದ ಮಾಜಿ ನಾಯಕ, ಹರಿರ್ಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ

- Advertisement -
- Advertisement -

ಜೂನಿಯರ್ ಅಥ್ಲೆಟಿಕ್ಸ್ ಕೋಚ್ ನೀಡಿದ ದೂರಿನ ಆಧಾರದ ಮೇಲೆ ಚಂಡೀಗಢ ಪೊಲೀಸರು ಹರಿಯಾಣದ ಕ್ರೀಡಾ ಸಚಿವರಾದ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.

ವಿರೋಧ ಪಕ್ಷವಾದ ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‌ಎಲ್‌ಡಿ) ಕಚೇರಿಯಲ್ಲಿ ಮಹಿಳೆ ಪತ್ರಿಕಾಗೋಷ್ಠಿ ನಡೆಸಿ, “ಮನೋಹರ್ ಲಾಲ್ ಖಟ್ಟರ್ ಸರ್ಕಾರವು ಸಂದೀಪ್ ಸಿಂಗ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಒಲಿಂಪಿಯನ್ ಹಾಗೂ ಭಾರತ ಹಾಕಿ ತಂಡದ ಮಾಜಿ ನಾಯಕ ಸಂದೀಪ್ ಸಿಂಗ್ ವಿರುದ್ಧ ಸೆಕ್ಟರ್ 26 ಪೊಲೀಸ್ ಠಾಣೆಯಲ್ಲಿ ಶನಿವಾರ ರಾತ್ರಿ ಎಫ್‌ಐಆರ್ ದಾಖಲಾಗಿದೆ. ಆರೋಪಗಳನ್ನು ತಳ್ಳಿಹಾಕಿರುವ ಸಚಿವರು, ಆಧಾರ ರಹಿತ ಎಂದು ಹೇಳಿದ್ದಾರೆ.

ದೂರು ನೀಡಿರುವ ಮಹಿಳೆಯು, ತನಗೆ ಭದ್ರತೆ ಒದಗಿಸಬೇಕು ಎಂದು ಕೋರಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಕೂಡ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ್ದಾರೆ.

ಮಹಿಳಾ ಕೋಚ್ ಶುಕ್ರವಾರ ಚಂಡೀಗಢ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸಚಿವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಸಂತ್ರಸ್ತ ಮಹಿಳೆಯು ಪೊಲೀಸ್ ವರಿಷ್ಠಾಧಿಕಾರಿ (ನಗರ) ಶ್ರುತಿ ಅರೋರಾ ಅವರಿಗೆ ದೂರು ಸಲ್ಲಿಸಿದ್ದಾರೆ. ನಂತರ ದೂರುದಾರ ಮಹಿಳೆಯು ಎಸ್ಪಿ ಅರೋರಾ ಅವರೊಂದಿಗೆ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಯುಟಿ) ಮನೀಶಾ ಚೌಧರಿ ಅವರನ್ನು ಭೇಟಿಯಾದರು. ಮಹಿಳೆ ಇಬ್ಬರು ಅಧಿಕಾರಿಗಳೊಂದಿಗೆ ಕನಿಷ್ಠ ಒಂದು ಗಂಟೆ ಕಾಲ ಸಂವಾದ ನಡೆಸಿದರು ಎಂದು ವರದಿಯಾಗಿದೆ.

ದೂರು ದಾಖಲಿಸಿದ ನಂತರ ಮಹಿಳಾ ಕೋಚ್, “ನನಗೆ ನಿಷ್ಪಕ್ಷಪಾತ ತನಿಖೆಯ ಭರವಸೆ ನೀಡಲಾಗಿದೆ. ನನ್ನ ಭದ್ರತೆಯ ವಿಚಾರವನ್ನೂ ಪ್ರಸ್ತಾಪಿಸಿದ್ದೇನೆ. ನನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ನನಗೆ ಬೆದರಿಕೆ ಸಂದೇಶಗಳು ಬರುತ್ತಿವೆ. ಭಯದಿಂದ, ನಾನು ಫೋನ್ ಕರೆಗಳನ್ನು ಸ್ವೀಕರಿಸುತ್ತಿಲ್ಲ” ಎಂದು ತಿಳಿಸಿದ್ದಾರೆ.

“ಸಚಿವರು ಫೆಬ್ರವರಿ ಮತ್ತು ನವೆಂಬರ್ ನಡುವೆ ತಮ್ಮ ಕಚೇರಿ ಮತ್ತು ಇತರ ಸ್ಥಳಗಳಲ್ಲಿ ನನಗೆ ಕಿರುಕುಳ ನೀಡಿದ್ದಾರೆ. ಒಮ್ಮೆ, ಅವರು ಸೆಕ್ಟರ್ 7ರಲ್ಲಿ ಭೇಟಿಯಾಗುವಂತೆ ನನಗೆ ತಿಳಿಸಿದ್ದರು. ಅವರು ಹೆಚ್ಚಾಗಿ ನನ್ನೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಸಂವಹನ ನಡೆಸಿದರು. ಚಂಡೀಗಢದಲ್ಲಿರುವ ಅವರ ಮನೆಯಲ್ಲಿ ನನ್ನನ್ನು ಅನುಚಿತವಾಗಿ ಸ್ಪರ್ಶಿಸಿದರು. ನಾನು ಚಂಡೀಗಢ ಪೊಲೀಸರಿಗೆ ಎಲ್ಲ ಘಟನೆಗಳನ್ನು ವಿವರಿಸಿದ್ದೇನೆ” ಎಂದಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್ ಆಗಿರುವ ಸಂತ್ರಸ್ತ ಮಹಿಳೆಯು, “ಮುಂಬರುವ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕಗಳನ್ನು ಗಳಿಸುವ ಭರವಸೆ ನೀಡುವಂತೆ ನನಗೆ ಒತ್ತಾಯಿಸಲಾಯಿತು. ಫೇಲ್ ಆದರೆ ಕ್ರೀಡಾ ಇಲಾಖೆ ವರ್ಗಾವಣೆ ಮಾಡಲಿದೆ ಎಂದು ತಿಳಿಸಿದ್ದರು. ಟ್ರ್ಯಾಕ್ ಇಲ್ಲದ ನನ್ನ ತವರು ಜಿಲ್ಲೆಗೆ ನಾನು ಇತ್ತೀಚೆಗೆ ವರ್ಗಾವಣೆಗೊಂಡಿದ್ದೇನೆ. ಕಿರುಕುಳ ಎದುರಿಸುತ್ತಿರುವುದು ನಾನಷ್ಟೇ ಅಲ್ಲ. ರಾಜ್ಯ ಕ್ರೀಡಾ ಇಲಾಖೆಯಲ್ಲಿ ಇನ್ನೂ ಅನೇಕರು ಇಂತಹ ಕಿರುಕುಳ ಎದುರಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಚಂಡೀಗಢ ಪೊಲೀಸ್ ವಕ್ತಾರರು, “ಹರಿಯಾಣ ಕ್ರೀಡಾ ಸಚಿವರ ವಿರುದ್ಧ ಹರಿಯಾಣದ ಮಹಿಳಾ ಕೋಚ್ ನೀಡಿದ ದೂರಿನ ಅನ್ವಯ ಐಪಿಸಿಯ ಸೆಕ್ಷನ್ 354, 354 ಎ, 354 ಬಿ, 342, 506 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಸಂದೀಪ್‌ ಸಿಂಗ್ ನನ್ನನ್ನು ಮೊದಲ ಬಾರಿಗೆ ಜಿಮ್‌ನಲ್ಲಿ ನೋಡಿದ್ದರು. ನಂತರ ಇನ್ಸ್‌ಸ್ಟಾಗ್ರಾಮ್‌ ಮೂಲಕ ಸಂಪರ್ಕಿಸಿದ್ದರು” ಎಂದು ದೂರುದಾರರು ಹೇಳಿದ್ದಾರೆ.

“ಭೇಟಿಯಾಗುವಂತೆ ಸಚಿವರು ಒತ್ತಾಯಿಸುತ್ತಿದ್ದರು. ಅವರು ನನಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸಂದೇಶ ಕಳುಹಿಸಿದ್ದಾರೆ. ನನಗೆ ಸಿಗಬೇಕಾದ ನ್ಯಾಷನಲ್‌ ಗೇಮ್ಸ್‌ ಪ್ರಮಾಣಪತ್ರವು ಬಾಕಿ ಉಳಿದಿತ್ತು. ಈ ನಿಟ್ಟಿನಲ್ಲಿ ಭೇಟಿಯಾಗಲು ಬಯಸಿದ್ದೆನು” ಎಂದಿದ್ದಾರೆ.

“ದುರದೃಷ್ಟವಶಾತ್, ನನ್ನ ಫೆಡರೇಶನ್‌ನಿಂದ ನನ್ನ ಪ್ರಮಾಣಪತ್ರವನ್ನು ತಪ್ಪಾಗಿ ಇರಿಸಲಾಗಿದೆ ಮತ್ತು ನಾನು  ಸಂಬಂಧಿಸಿದ ಅಧಿಕಾರಿಗಳೊಂದಿಗೆ ಅವುಗಳನ್ನು ತೆಗೆದುಕೊಳ್ಳುತ್ತಿದ್ದೇನೆ” ಎಂದಿದ್ದಾರೆ.

ಕೊನೆಗೆ ತನ್ನ ಬಳಿಯಿದ್ದ ಇತರ ಕೆಲವು ದಾಖಲೆಗಳೊಂದಿಗೆ ಸಚಿವರ ಗೃಹ ಕಚೇರಿಯಲ್ಲಿ ಭೇಟಿಯಾಗಲು ಒಪ್ಪಿಕೊಂಡೆ ಎಂದು ಮಹಿಳೆ ಹೇಳಿದ್ದಾರೆ. “ನಾನು ಅಲ್ಲಿಗೆ ಹೋದಾಗ ಸಚಿವರು ಲೈಂಗಿಕ ದುರ್ವರ್ತನೆ ತೋರಿದ್ದಾರೆ” ಎಂದು ಆರೋಪಿಸಿದ್ದಾರೆ.

ಸಂದೀಪ್ ಸಿಂಗ್ ಸಚಿವರಷ್ಟೇ ಅಲ್ಲ, ರಾಷ್ಟ್ರೀಯ ಹಾಕಿ ತಂಡದ ಮಾಜಿ ನಾಯಕ

ಕುರುಕ್ಷೇತ್ರದ ಪೆಹೋವಾದಿಂದ ಹಾಲಿ ಬಿಜೆಪಿ ಶಾಸಕರಾಗಿರುವ ಸಂದೀಪ್ ಸಿಂಗ್ ಅವರು ವೃತ್ತಿಪರ ಫೀಲ್ಡ್ ಹಾಕಿ ಆಟಗಾರರಾಗಿದ್ದಾರೆ. ಭಾರತೀಯ ರಾಷ್ಟ್ರೀಯ ಹಾಕಿ ತಂಡದ ನಾಯಕರಾಗಿದ್ದರು.

2018ರಲ್ಲಿ ಸಂದೀಪ್‌ ಸಿಂಗ್ ಅವರ ಜೀವನ ಕಥೆ ಆಧಾರಿಸಿ ‘ಸೂರ್ಮಾ’ ಎಂಬ ಬಯೋಪಿಕ್ ಬಿಡುಗಡೆಯಾಗಿತ್ತು. ಜನಪ್ರಿಯ ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರು ಸಂದೀಪ್ ಅವರ ಪಾತ್ರದಲ್ಲಿ ಅಭಿನಯಿಸಿದ್ದರು. ಸಂದೀಪ್ ಅವರು ಎಂಟಿವಿ ರೋಡೀಸ್ ಎಂಬ ರಿಯಾಲಿಟಿ ಟಿವಿ ಶೋನಲ್ಲಿ ತೀರ್ಪುಗಾರರಾಗಿದ್ದರು.

ಸಂದೀಪ್‌ ಅವರು 20 ವರ್ಷದವರಾಗಿದ್ದಾಗ ಆಕಸ್ಮಿಕವಾಗಿ ಬಂದೂಕಿನ ಗುಂಡಿಗೆ ಸಿಲುಕಿ ಗಾಯಗೊಂಡಿದ್ದರು. ನಂತರ ಅದ್ಭುತವಾಗಿ ಚೇತರಿಸಿಕೊಂಡು ಖ್ಯಾತರಾಗಿ ಬೆಳೆದರು. 2007ರ ಹಾಕಿ ವರ್ಲ್ಡ್‌ ಕಪ್‌ಗೆ ಕೇವಲ ಎರಡು ದಿನಗಳು ಇರುವಾಗ ರೈಲ್ವೆ ಪೋಲೀಸ್ ಫೋರ್ಸ್‌ನ ಸಹಾಯಕ ಸಬ್-ಇನ್‌ಸ್ಪೆಕ್ಟರ್‌ನಿಂದ ಆಕಸ್ಮಿಕವಾಗಿ ಗುಂಡಿನೇಟು ತಿದ್ದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...