Homeಮುಖಪುಟಮಹಿಳಾ ಕೋಚ್ ದೂರು; ಹರಿಯಾಣ ಕ್ರೀಡಾ ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು

ಮಹಿಳಾ ಕೋಚ್ ದೂರು; ಹರಿಯಾಣ ಕ್ರೀಡಾ ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು

ಭಾರತ ಹಾಕಿ ತಂಡದ ಮಾಜಿ ನಾಯಕ, ಹರಿರ್ಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ

- Advertisement -
- Advertisement -

ಜೂನಿಯರ್ ಅಥ್ಲೆಟಿಕ್ಸ್ ಕೋಚ್ ನೀಡಿದ ದೂರಿನ ಆಧಾರದ ಮೇಲೆ ಚಂಡೀಗಢ ಪೊಲೀಸರು ಹರಿಯಾಣದ ಕ್ರೀಡಾ ಸಚಿವರಾದ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.

ವಿರೋಧ ಪಕ್ಷವಾದ ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‌ಎಲ್‌ಡಿ) ಕಚೇರಿಯಲ್ಲಿ ಮಹಿಳೆ ಪತ್ರಿಕಾಗೋಷ್ಠಿ ನಡೆಸಿ, “ಮನೋಹರ್ ಲಾಲ್ ಖಟ್ಟರ್ ಸರ್ಕಾರವು ಸಂದೀಪ್ ಸಿಂಗ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಒಲಿಂಪಿಯನ್ ಹಾಗೂ ಭಾರತ ಹಾಕಿ ತಂಡದ ಮಾಜಿ ನಾಯಕ ಸಂದೀಪ್ ಸಿಂಗ್ ವಿರುದ್ಧ ಸೆಕ್ಟರ್ 26 ಪೊಲೀಸ್ ಠಾಣೆಯಲ್ಲಿ ಶನಿವಾರ ರಾತ್ರಿ ಎಫ್‌ಐಆರ್ ದಾಖಲಾಗಿದೆ. ಆರೋಪಗಳನ್ನು ತಳ್ಳಿಹಾಕಿರುವ ಸಚಿವರು, ಆಧಾರ ರಹಿತ ಎಂದು ಹೇಳಿದ್ದಾರೆ.

ದೂರು ನೀಡಿರುವ ಮಹಿಳೆಯು, ತನಗೆ ಭದ್ರತೆ ಒದಗಿಸಬೇಕು ಎಂದು ಕೋರಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಕೂಡ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ್ದಾರೆ.

ಮಹಿಳಾ ಕೋಚ್ ಶುಕ್ರವಾರ ಚಂಡೀಗಢ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸಚಿವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಸಂತ್ರಸ್ತ ಮಹಿಳೆಯು ಪೊಲೀಸ್ ವರಿಷ್ಠಾಧಿಕಾರಿ (ನಗರ) ಶ್ರುತಿ ಅರೋರಾ ಅವರಿಗೆ ದೂರು ಸಲ್ಲಿಸಿದ್ದಾರೆ. ನಂತರ ದೂರುದಾರ ಮಹಿಳೆಯು ಎಸ್ಪಿ ಅರೋರಾ ಅವರೊಂದಿಗೆ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಯುಟಿ) ಮನೀಶಾ ಚೌಧರಿ ಅವರನ್ನು ಭೇಟಿಯಾದರು. ಮಹಿಳೆ ಇಬ್ಬರು ಅಧಿಕಾರಿಗಳೊಂದಿಗೆ ಕನಿಷ್ಠ ಒಂದು ಗಂಟೆ ಕಾಲ ಸಂವಾದ ನಡೆಸಿದರು ಎಂದು ವರದಿಯಾಗಿದೆ.

ದೂರು ದಾಖಲಿಸಿದ ನಂತರ ಮಹಿಳಾ ಕೋಚ್, “ನನಗೆ ನಿಷ್ಪಕ್ಷಪಾತ ತನಿಖೆಯ ಭರವಸೆ ನೀಡಲಾಗಿದೆ. ನನ್ನ ಭದ್ರತೆಯ ವಿಚಾರವನ್ನೂ ಪ್ರಸ್ತಾಪಿಸಿದ್ದೇನೆ. ನನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ನನಗೆ ಬೆದರಿಕೆ ಸಂದೇಶಗಳು ಬರುತ್ತಿವೆ. ಭಯದಿಂದ, ನಾನು ಫೋನ್ ಕರೆಗಳನ್ನು ಸ್ವೀಕರಿಸುತ್ತಿಲ್ಲ” ಎಂದು ತಿಳಿಸಿದ್ದಾರೆ.

“ಸಚಿವರು ಫೆಬ್ರವರಿ ಮತ್ತು ನವೆಂಬರ್ ನಡುವೆ ತಮ್ಮ ಕಚೇರಿ ಮತ್ತು ಇತರ ಸ್ಥಳಗಳಲ್ಲಿ ನನಗೆ ಕಿರುಕುಳ ನೀಡಿದ್ದಾರೆ. ಒಮ್ಮೆ, ಅವರು ಸೆಕ್ಟರ್ 7ರಲ್ಲಿ ಭೇಟಿಯಾಗುವಂತೆ ನನಗೆ ತಿಳಿಸಿದ್ದರು. ಅವರು ಹೆಚ್ಚಾಗಿ ನನ್ನೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಸಂವಹನ ನಡೆಸಿದರು. ಚಂಡೀಗಢದಲ್ಲಿರುವ ಅವರ ಮನೆಯಲ್ಲಿ ನನ್ನನ್ನು ಅನುಚಿತವಾಗಿ ಸ್ಪರ್ಶಿಸಿದರು. ನಾನು ಚಂಡೀಗಢ ಪೊಲೀಸರಿಗೆ ಎಲ್ಲ ಘಟನೆಗಳನ್ನು ವಿವರಿಸಿದ್ದೇನೆ” ಎಂದಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್ ಆಗಿರುವ ಸಂತ್ರಸ್ತ ಮಹಿಳೆಯು, “ಮುಂಬರುವ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕಗಳನ್ನು ಗಳಿಸುವ ಭರವಸೆ ನೀಡುವಂತೆ ನನಗೆ ಒತ್ತಾಯಿಸಲಾಯಿತು. ಫೇಲ್ ಆದರೆ ಕ್ರೀಡಾ ಇಲಾಖೆ ವರ್ಗಾವಣೆ ಮಾಡಲಿದೆ ಎಂದು ತಿಳಿಸಿದ್ದರು. ಟ್ರ್ಯಾಕ್ ಇಲ್ಲದ ನನ್ನ ತವರು ಜಿಲ್ಲೆಗೆ ನಾನು ಇತ್ತೀಚೆಗೆ ವರ್ಗಾವಣೆಗೊಂಡಿದ್ದೇನೆ. ಕಿರುಕುಳ ಎದುರಿಸುತ್ತಿರುವುದು ನಾನಷ್ಟೇ ಅಲ್ಲ. ರಾಜ್ಯ ಕ್ರೀಡಾ ಇಲಾಖೆಯಲ್ಲಿ ಇನ್ನೂ ಅನೇಕರು ಇಂತಹ ಕಿರುಕುಳ ಎದುರಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಚಂಡೀಗಢ ಪೊಲೀಸ್ ವಕ್ತಾರರು, “ಹರಿಯಾಣ ಕ್ರೀಡಾ ಸಚಿವರ ವಿರುದ್ಧ ಹರಿಯಾಣದ ಮಹಿಳಾ ಕೋಚ್ ನೀಡಿದ ದೂರಿನ ಅನ್ವಯ ಐಪಿಸಿಯ ಸೆಕ್ಷನ್ 354, 354 ಎ, 354 ಬಿ, 342, 506 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಸಂದೀಪ್‌ ಸಿಂಗ್ ನನ್ನನ್ನು ಮೊದಲ ಬಾರಿಗೆ ಜಿಮ್‌ನಲ್ಲಿ ನೋಡಿದ್ದರು. ನಂತರ ಇನ್ಸ್‌ಸ್ಟಾಗ್ರಾಮ್‌ ಮೂಲಕ ಸಂಪರ್ಕಿಸಿದ್ದರು” ಎಂದು ದೂರುದಾರರು ಹೇಳಿದ್ದಾರೆ.

“ಭೇಟಿಯಾಗುವಂತೆ ಸಚಿವರು ಒತ್ತಾಯಿಸುತ್ತಿದ್ದರು. ಅವರು ನನಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸಂದೇಶ ಕಳುಹಿಸಿದ್ದಾರೆ. ನನಗೆ ಸಿಗಬೇಕಾದ ನ್ಯಾಷನಲ್‌ ಗೇಮ್ಸ್‌ ಪ್ರಮಾಣಪತ್ರವು ಬಾಕಿ ಉಳಿದಿತ್ತು. ಈ ನಿಟ್ಟಿನಲ್ಲಿ ಭೇಟಿಯಾಗಲು ಬಯಸಿದ್ದೆನು” ಎಂದಿದ್ದಾರೆ.

“ದುರದೃಷ್ಟವಶಾತ್, ನನ್ನ ಫೆಡರೇಶನ್‌ನಿಂದ ನನ್ನ ಪ್ರಮಾಣಪತ್ರವನ್ನು ತಪ್ಪಾಗಿ ಇರಿಸಲಾಗಿದೆ ಮತ್ತು ನಾನು  ಸಂಬಂಧಿಸಿದ ಅಧಿಕಾರಿಗಳೊಂದಿಗೆ ಅವುಗಳನ್ನು ತೆಗೆದುಕೊಳ್ಳುತ್ತಿದ್ದೇನೆ” ಎಂದಿದ್ದಾರೆ.

ಕೊನೆಗೆ ತನ್ನ ಬಳಿಯಿದ್ದ ಇತರ ಕೆಲವು ದಾಖಲೆಗಳೊಂದಿಗೆ ಸಚಿವರ ಗೃಹ ಕಚೇರಿಯಲ್ಲಿ ಭೇಟಿಯಾಗಲು ಒಪ್ಪಿಕೊಂಡೆ ಎಂದು ಮಹಿಳೆ ಹೇಳಿದ್ದಾರೆ. “ನಾನು ಅಲ್ಲಿಗೆ ಹೋದಾಗ ಸಚಿವರು ಲೈಂಗಿಕ ದುರ್ವರ್ತನೆ ತೋರಿದ್ದಾರೆ” ಎಂದು ಆರೋಪಿಸಿದ್ದಾರೆ.

ಸಂದೀಪ್ ಸಿಂಗ್ ಸಚಿವರಷ್ಟೇ ಅಲ್ಲ, ರಾಷ್ಟ್ರೀಯ ಹಾಕಿ ತಂಡದ ಮಾಜಿ ನಾಯಕ

ಕುರುಕ್ಷೇತ್ರದ ಪೆಹೋವಾದಿಂದ ಹಾಲಿ ಬಿಜೆಪಿ ಶಾಸಕರಾಗಿರುವ ಸಂದೀಪ್ ಸಿಂಗ್ ಅವರು ವೃತ್ತಿಪರ ಫೀಲ್ಡ್ ಹಾಕಿ ಆಟಗಾರರಾಗಿದ್ದಾರೆ. ಭಾರತೀಯ ರಾಷ್ಟ್ರೀಯ ಹಾಕಿ ತಂಡದ ನಾಯಕರಾಗಿದ್ದರು.

2018ರಲ್ಲಿ ಸಂದೀಪ್‌ ಸಿಂಗ್ ಅವರ ಜೀವನ ಕಥೆ ಆಧಾರಿಸಿ ‘ಸೂರ್ಮಾ’ ಎಂಬ ಬಯೋಪಿಕ್ ಬಿಡುಗಡೆಯಾಗಿತ್ತು. ಜನಪ್ರಿಯ ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರು ಸಂದೀಪ್ ಅವರ ಪಾತ್ರದಲ್ಲಿ ಅಭಿನಯಿಸಿದ್ದರು. ಸಂದೀಪ್ ಅವರು ಎಂಟಿವಿ ರೋಡೀಸ್ ಎಂಬ ರಿಯಾಲಿಟಿ ಟಿವಿ ಶೋನಲ್ಲಿ ತೀರ್ಪುಗಾರರಾಗಿದ್ದರು.

ಸಂದೀಪ್‌ ಅವರು 20 ವರ್ಷದವರಾಗಿದ್ದಾಗ ಆಕಸ್ಮಿಕವಾಗಿ ಬಂದೂಕಿನ ಗುಂಡಿಗೆ ಸಿಲುಕಿ ಗಾಯಗೊಂಡಿದ್ದರು. ನಂತರ ಅದ್ಭುತವಾಗಿ ಚೇತರಿಸಿಕೊಂಡು ಖ್ಯಾತರಾಗಿ ಬೆಳೆದರು. 2007ರ ಹಾಕಿ ವರ್ಲ್ಡ್‌ ಕಪ್‌ಗೆ ಕೇವಲ ಎರಡು ದಿನಗಳು ಇರುವಾಗ ರೈಲ್ವೆ ಪೋಲೀಸ್ ಫೋರ್ಸ್‌ನ ಸಹಾಯಕ ಸಬ್-ಇನ್‌ಸ್ಪೆಕ್ಟರ್‌ನಿಂದ ಆಕಸ್ಮಿಕವಾಗಿ ಗುಂಡಿನೇಟು ತಿದ್ದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...