Homeಮುಖಪುಟಮಹಿಳಾ ಕೋಚ್ ದೂರು; ಹರಿಯಾಣ ಕ್ರೀಡಾ ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು

ಮಹಿಳಾ ಕೋಚ್ ದೂರು; ಹರಿಯಾಣ ಕ್ರೀಡಾ ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು

ಭಾರತ ಹಾಕಿ ತಂಡದ ಮಾಜಿ ನಾಯಕ, ಹರಿರ್ಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ

- Advertisement -
- Advertisement -

ಜೂನಿಯರ್ ಅಥ್ಲೆಟಿಕ್ಸ್ ಕೋಚ್ ನೀಡಿದ ದೂರಿನ ಆಧಾರದ ಮೇಲೆ ಚಂಡೀಗಢ ಪೊಲೀಸರು ಹರಿಯಾಣದ ಕ್ರೀಡಾ ಸಚಿವರಾದ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.

ವಿರೋಧ ಪಕ್ಷವಾದ ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‌ಎಲ್‌ಡಿ) ಕಚೇರಿಯಲ್ಲಿ ಮಹಿಳೆ ಪತ್ರಿಕಾಗೋಷ್ಠಿ ನಡೆಸಿ, “ಮನೋಹರ್ ಲಾಲ್ ಖಟ್ಟರ್ ಸರ್ಕಾರವು ಸಂದೀಪ್ ಸಿಂಗ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಒಲಿಂಪಿಯನ್ ಹಾಗೂ ಭಾರತ ಹಾಕಿ ತಂಡದ ಮಾಜಿ ನಾಯಕ ಸಂದೀಪ್ ಸಿಂಗ್ ವಿರುದ್ಧ ಸೆಕ್ಟರ್ 26 ಪೊಲೀಸ್ ಠಾಣೆಯಲ್ಲಿ ಶನಿವಾರ ರಾತ್ರಿ ಎಫ್‌ಐಆರ್ ದಾಖಲಾಗಿದೆ. ಆರೋಪಗಳನ್ನು ತಳ್ಳಿಹಾಕಿರುವ ಸಚಿವರು, ಆಧಾರ ರಹಿತ ಎಂದು ಹೇಳಿದ್ದಾರೆ.

ದೂರು ನೀಡಿರುವ ಮಹಿಳೆಯು, ತನಗೆ ಭದ್ರತೆ ಒದಗಿಸಬೇಕು ಎಂದು ಕೋರಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಕೂಡ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ್ದಾರೆ.

ಮಹಿಳಾ ಕೋಚ್ ಶುಕ್ರವಾರ ಚಂಡೀಗಢ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸಚಿವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಸಂತ್ರಸ್ತ ಮಹಿಳೆಯು ಪೊಲೀಸ್ ವರಿಷ್ಠಾಧಿಕಾರಿ (ನಗರ) ಶ್ರುತಿ ಅರೋರಾ ಅವರಿಗೆ ದೂರು ಸಲ್ಲಿಸಿದ್ದಾರೆ. ನಂತರ ದೂರುದಾರ ಮಹಿಳೆಯು ಎಸ್ಪಿ ಅರೋರಾ ಅವರೊಂದಿಗೆ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಯುಟಿ) ಮನೀಶಾ ಚೌಧರಿ ಅವರನ್ನು ಭೇಟಿಯಾದರು. ಮಹಿಳೆ ಇಬ್ಬರು ಅಧಿಕಾರಿಗಳೊಂದಿಗೆ ಕನಿಷ್ಠ ಒಂದು ಗಂಟೆ ಕಾಲ ಸಂವಾದ ನಡೆಸಿದರು ಎಂದು ವರದಿಯಾಗಿದೆ.

ದೂರು ದಾಖಲಿಸಿದ ನಂತರ ಮಹಿಳಾ ಕೋಚ್, “ನನಗೆ ನಿಷ್ಪಕ್ಷಪಾತ ತನಿಖೆಯ ಭರವಸೆ ನೀಡಲಾಗಿದೆ. ನನ್ನ ಭದ್ರತೆಯ ವಿಚಾರವನ್ನೂ ಪ್ರಸ್ತಾಪಿಸಿದ್ದೇನೆ. ನನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ನನಗೆ ಬೆದರಿಕೆ ಸಂದೇಶಗಳು ಬರುತ್ತಿವೆ. ಭಯದಿಂದ, ನಾನು ಫೋನ್ ಕರೆಗಳನ್ನು ಸ್ವೀಕರಿಸುತ್ತಿಲ್ಲ” ಎಂದು ತಿಳಿಸಿದ್ದಾರೆ.

“ಸಚಿವರು ಫೆಬ್ರವರಿ ಮತ್ತು ನವೆಂಬರ್ ನಡುವೆ ತಮ್ಮ ಕಚೇರಿ ಮತ್ತು ಇತರ ಸ್ಥಳಗಳಲ್ಲಿ ನನಗೆ ಕಿರುಕುಳ ನೀಡಿದ್ದಾರೆ. ಒಮ್ಮೆ, ಅವರು ಸೆಕ್ಟರ್ 7ರಲ್ಲಿ ಭೇಟಿಯಾಗುವಂತೆ ನನಗೆ ತಿಳಿಸಿದ್ದರು. ಅವರು ಹೆಚ್ಚಾಗಿ ನನ್ನೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಸಂವಹನ ನಡೆಸಿದರು. ಚಂಡೀಗಢದಲ್ಲಿರುವ ಅವರ ಮನೆಯಲ್ಲಿ ನನ್ನನ್ನು ಅನುಚಿತವಾಗಿ ಸ್ಪರ್ಶಿಸಿದರು. ನಾನು ಚಂಡೀಗಢ ಪೊಲೀಸರಿಗೆ ಎಲ್ಲ ಘಟನೆಗಳನ್ನು ವಿವರಿಸಿದ್ದೇನೆ” ಎಂದಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್ ಆಗಿರುವ ಸಂತ್ರಸ್ತ ಮಹಿಳೆಯು, “ಮುಂಬರುವ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕಗಳನ್ನು ಗಳಿಸುವ ಭರವಸೆ ನೀಡುವಂತೆ ನನಗೆ ಒತ್ತಾಯಿಸಲಾಯಿತು. ಫೇಲ್ ಆದರೆ ಕ್ರೀಡಾ ಇಲಾಖೆ ವರ್ಗಾವಣೆ ಮಾಡಲಿದೆ ಎಂದು ತಿಳಿಸಿದ್ದರು. ಟ್ರ್ಯಾಕ್ ಇಲ್ಲದ ನನ್ನ ತವರು ಜಿಲ್ಲೆಗೆ ನಾನು ಇತ್ತೀಚೆಗೆ ವರ್ಗಾವಣೆಗೊಂಡಿದ್ದೇನೆ. ಕಿರುಕುಳ ಎದುರಿಸುತ್ತಿರುವುದು ನಾನಷ್ಟೇ ಅಲ್ಲ. ರಾಜ್ಯ ಕ್ರೀಡಾ ಇಲಾಖೆಯಲ್ಲಿ ಇನ್ನೂ ಅನೇಕರು ಇಂತಹ ಕಿರುಕುಳ ಎದುರಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಚಂಡೀಗಢ ಪೊಲೀಸ್ ವಕ್ತಾರರು, “ಹರಿಯಾಣ ಕ್ರೀಡಾ ಸಚಿವರ ವಿರುದ್ಧ ಹರಿಯಾಣದ ಮಹಿಳಾ ಕೋಚ್ ನೀಡಿದ ದೂರಿನ ಅನ್ವಯ ಐಪಿಸಿಯ ಸೆಕ್ಷನ್ 354, 354 ಎ, 354 ಬಿ, 342, 506 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಸಂದೀಪ್‌ ಸಿಂಗ್ ನನ್ನನ್ನು ಮೊದಲ ಬಾರಿಗೆ ಜಿಮ್‌ನಲ್ಲಿ ನೋಡಿದ್ದರು. ನಂತರ ಇನ್ಸ್‌ಸ್ಟಾಗ್ರಾಮ್‌ ಮೂಲಕ ಸಂಪರ್ಕಿಸಿದ್ದರು” ಎಂದು ದೂರುದಾರರು ಹೇಳಿದ್ದಾರೆ.

“ಭೇಟಿಯಾಗುವಂತೆ ಸಚಿವರು ಒತ್ತಾಯಿಸುತ್ತಿದ್ದರು. ಅವರು ನನಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸಂದೇಶ ಕಳುಹಿಸಿದ್ದಾರೆ. ನನಗೆ ಸಿಗಬೇಕಾದ ನ್ಯಾಷನಲ್‌ ಗೇಮ್ಸ್‌ ಪ್ರಮಾಣಪತ್ರವು ಬಾಕಿ ಉಳಿದಿತ್ತು. ಈ ನಿಟ್ಟಿನಲ್ಲಿ ಭೇಟಿಯಾಗಲು ಬಯಸಿದ್ದೆನು” ಎಂದಿದ್ದಾರೆ.

“ದುರದೃಷ್ಟವಶಾತ್, ನನ್ನ ಫೆಡರೇಶನ್‌ನಿಂದ ನನ್ನ ಪ್ರಮಾಣಪತ್ರವನ್ನು ತಪ್ಪಾಗಿ ಇರಿಸಲಾಗಿದೆ ಮತ್ತು ನಾನು  ಸಂಬಂಧಿಸಿದ ಅಧಿಕಾರಿಗಳೊಂದಿಗೆ ಅವುಗಳನ್ನು ತೆಗೆದುಕೊಳ್ಳುತ್ತಿದ್ದೇನೆ” ಎಂದಿದ್ದಾರೆ.

ಕೊನೆಗೆ ತನ್ನ ಬಳಿಯಿದ್ದ ಇತರ ಕೆಲವು ದಾಖಲೆಗಳೊಂದಿಗೆ ಸಚಿವರ ಗೃಹ ಕಚೇರಿಯಲ್ಲಿ ಭೇಟಿಯಾಗಲು ಒಪ್ಪಿಕೊಂಡೆ ಎಂದು ಮಹಿಳೆ ಹೇಳಿದ್ದಾರೆ. “ನಾನು ಅಲ್ಲಿಗೆ ಹೋದಾಗ ಸಚಿವರು ಲೈಂಗಿಕ ದುರ್ವರ್ತನೆ ತೋರಿದ್ದಾರೆ” ಎಂದು ಆರೋಪಿಸಿದ್ದಾರೆ.

ಸಂದೀಪ್ ಸಿಂಗ್ ಸಚಿವರಷ್ಟೇ ಅಲ್ಲ, ರಾಷ್ಟ್ರೀಯ ಹಾಕಿ ತಂಡದ ಮಾಜಿ ನಾಯಕ

ಕುರುಕ್ಷೇತ್ರದ ಪೆಹೋವಾದಿಂದ ಹಾಲಿ ಬಿಜೆಪಿ ಶಾಸಕರಾಗಿರುವ ಸಂದೀಪ್ ಸಿಂಗ್ ಅವರು ವೃತ್ತಿಪರ ಫೀಲ್ಡ್ ಹಾಕಿ ಆಟಗಾರರಾಗಿದ್ದಾರೆ. ಭಾರತೀಯ ರಾಷ್ಟ್ರೀಯ ಹಾಕಿ ತಂಡದ ನಾಯಕರಾಗಿದ್ದರು.

2018ರಲ್ಲಿ ಸಂದೀಪ್‌ ಸಿಂಗ್ ಅವರ ಜೀವನ ಕಥೆ ಆಧಾರಿಸಿ ‘ಸೂರ್ಮಾ’ ಎಂಬ ಬಯೋಪಿಕ್ ಬಿಡುಗಡೆಯಾಗಿತ್ತು. ಜನಪ್ರಿಯ ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರು ಸಂದೀಪ್ ಅವರ ಪಾತ್ರದಲ್ಲಿ ಅಭಿನಯಿಸಿದ್ದರು. ಸಂದೀಪ್ ಅವರು ಎಂಟಿವಿ ರೋಡೀಸ್ ಎಂಬ ರಿಯಾಲಿಟಿ ಟಿವಿ ಶೋನಲ್ಲಿ ತೀರ್ಪುಗಾರರಾಗಿದ್ದರು.

ಸಂದೀಪ್‌ ಅವರು 20 ವರ್ಷದವರಾಗಿದ್ದಾಗ ಆಕಸ್ಮಿಕವಾಗಿ ಬಂದೂಕಿನ ಗುಂಡಿಗೆ ಸಿಲುಕಿ ಗಾಯಗೊಂಡಿದ್ದರು. ನಂತರ ಅದ್ಭುತವಾಗಿ ಚೇತರಿಸಿಕೊಂಡು ಖ್ಯಾತರಾಗಿ ಬೆಳೆದರು. 2007ರ ಹಾಕಿ ವರ್ಲ್ಡ್‌ ಕಪ್‌ಗೆ ಕೇವಲ ಎರಡು ದಿನಗಳು ಇರುವಾಗ ರೈಲ್ವೆ ಪೋಲೀಸ್ ಫೋರ್ಸ್‌ನ ಸಹಾಯಕ ಸಬ್-ಇನ್‌ಸ್ಪೆಕ್ಟರ್‌ನಿಂದ ಆಕಸ್ಮಿಕವಾಗಿ ಗುಂಡಿನೇಟು ತಿದ್ದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...