Homeಕರ್ನಾಟಕಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಭಾಪತಿಗಳಿಗೆ ಮಹಿಳಾ ಆಯೋಗದಿಂದ...

ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಭಾಪತಿಗಳಿಗೆ ಮಹಿಳಾ ಆಯೋಗದಿಂದ ಪತ್ರ

- Advertisement -
- Advertisement -

ಬೆಳಗಾವಿಯ ಸುವರ್ಣ ವಿಧಾನಸೌಧದದಲ್ಲಿ ನಡೆದ ಚಳಿಗಾಲ ಅಧಿವೇಶನದ ವಿಧಾನಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ. ರವಿ ಬಳಸಿದ ಅವಾಚ್ಯ ಪದದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದಿದೆ.

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.

“ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಬ್ದಾರಿ ಸ್ಥಾನದಲ್ಲಿ ಇರುವ ವ್ಯಕ್ತಿಯೇ ಸದನದಲ್ಲಿ ಮಹಿಳಾ ಸಚಿವೆಯೊಬ್ಬರನ್ನು ಅತಿ ಕೀಳು ಮಟ್ಟದಲ್ಲಿ ಅಸಂವಿಧಾನಿಕ ಪದ ಬಳಕೆ ಮಾಡಿ ನಿಂದಿಸಿದ್ದಾರೆ. ಇದು ನಾಡಿನ ಇಡೀ ಹೆಣ್ಣು ಕುಲಕ್ಕೆ ಹಾಗೂ ಅವರ ಭಾವನೆಗಳಿಗೆ ಮಾಡಿದ ಅಪಮಾನ. ಈ ನಿಟ್ಟಿನಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಯನ್ನು ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ಬೆಳಗಾವಿಯ ಸುವರ್ಣ ಸೌಧದ ಸದನದಲ್ಲೆ ಸಚಿವರಾದ ಲಕ್ಷ್ಮಿ ಹೆಬ್ಬಾಲ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಎಮ್‌ಎಲ್‌ಸಿ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡುವಂತೆ ಶುಕ್ರವಾರ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಬಂಧನದ ಪ್ರಕ್ರಿಯೆ ಪಾಲಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಹೇಳಿರುವ ಕೋರ್ಟ್, ಪ್ರಕರಣದ ವಿಚಾರಣೆಯಲ್ಲಿ ಮುಂದೂಡಿದೆ. ಸಚಿವೆ ಲಕ್ಷ್ಮಿ

ಷರತ್ತು ಬದ್ಧ ಬಿಡುಗಡೆಗೆ ಹೈಕೋರ್ಟ್ ಅದೇಶ ನೀಡಿದ್ದು, ಪ್ರಕರಣದಲ್ಲಿ ಸಹರಿಸುವಂತೆ ಹೇಳಿದೆ. ಅವರ ಬಂಧನಕ್ಕೂ ಮೊದಲು ನೋಟಿಸ್ ನೀಡಬಹುದಿತ್ತು ಎಂದು ಹೇಳಿರುವ ಕೋರ್ಟ್, ಅವರು ಈಗ ಎಲ್ಲಿದ್ದಾರೊ ಅಲ್ಲಿಂದಲೆ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದರು. ಈ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದ್ದು, ಸಚಿವರ ಅಭಿಮಾನಿಗಳು ಸುವರ್ಣಸೌಧದ ಮೊಗಸಾಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದರು. ಸಚಿವೆ ಲಕ್ಷ್ಮಿ

ಬಿಜೆಪಿಯ ಸಿ.ಟಿ. ರವಿ ಅವರ ಮಾತು ಕೇಳಿ ಲಕ್ಷ್ಮಿ ಹೆಬ್ಬಾಳ್ಕರ್ ಕೆಂಡಾಮಂಡಲವಾಗಿದ್ದು, ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ ಎಂದು ವರದಿಯಾಗಿತ್ತು. ಹೆಬ್ಬಾಳ್ಕರ್ ಮಾತಿಗೆ ಕಾಂಗ್ರೆಸ್ ಸದಸ್ಯರು ಧ್ವನಿ ಗೂಡಿಸಿದ್ದು, ಹತ್ತು ಬಾರಿ ಅಸಂವಿಧಾನಿಕ ಪದ ಬಳಸಿದ್ದಾರೆ ಎಂದು ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರೆಲ್ಲರೂ ಸದನದಲ್ಲಿ ಕಿಡಿ ಕಾರಿದ್ದಾರೆ. ಸಹ ಸದಸ್ಯರನ್ನು ಕರೆತಂದು ಲಕ್ಷ್ಮಿ ಹೆಬ್ಬಾಳ್ಕರ್ ಸಭಾಪತಿ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ.

ಸದನದಲ್ಲಿ ಕೋಲಾಹಲ ಉಂಟಾದಾಗ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿದ್ದರು. ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸದನದ ಒಳಗೆ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದರು. ಈ ಗದ್ದಲದ ಮಧ್ಯೆ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಭಾಪತಿಗೆ ದೂರು ನೀಡಿದ ಬಳಿಕ ಸಭಾಪತಿ, ಆಡಿಯೊ ವಿಡಿಯೊ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ; ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...