Homeಮುಖಪುಟಹತ್ರಾಸ್ ಕೇಸ್: ಅ.29ಕ್ಕೆ ದೇಶಾದ್ಯಂತ ಪ್ರತಿಭಟನೆಗೆ ಮಹಿಳಾ ಸಂಘಟನೆಗಳ ಕರೆ

ಹತ್ರಾಸ್ ಕೇಸ್: ಅ.29ಕ್ಕೆ ದೇಶಾದ್ಯಂತ ಪ್ರತಿಭಟನೆಗೆ ಮಹಿಳಾ ಸಂಘಟನೆಗಳ ಕರೆ

ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಪ್ರಕರಣವನ್ನು ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ತನಿಖೆ ನಡೆಸಬೇಕು ಎಂದು ಮಹಿಳಾ ಗುಂಪುಗಳು ಒತ್ತಾಯಿಸಿವೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಜರುಗುತ್ತಿವೆ. ಅ.29ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳು ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆಗೆ ಕರೆ ನೀಡಿವೆ.

ಅಖಿಲ ಭಾರತ ಪ್ರಜಾಸತ್ಮಾತ್ಮಕ ಮಹಿಳಾ ಸಂಘ, ರಾಷ್ಟ್ರೀಯ ಮಹಿಳಾ ಒಕ್ಕೂಟ, ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘ, ಪ್ರಗತಿಶೀತ್ ಮಹಿಳಾ ಸಂಘಟನೆ ಮತ್ತು ಇತರ ಸಂಘ ಸಂಸ್ಥೆಗಳು, ಹೋರಾಟಗಾರರು ಸೇರಿ ಪ್ರತಿಭಟನೆ ನಡೆಸುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಪ್ರಕರಣದ ತನಿಖೆ ನ್ಯಾಯಯುತವಾಗಿ ನಡೆಯಬೇಕು. ಜೀವಿಸುವ ಹಕ್ಕು, ಜೀವನೋಪಾಯ, ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸಬೇಕು. ಹಿಂಸಾಚಾರ ಮುಕ್ತ ಜೀವನಕ್ಕೆ ಅವಕಾಶ ಕಲ್ಪಿಸಬೇಕೆಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಹತ್ರಾಸ್‌ನ 19 ವರ್ಷದ ದಲಿತ ಯುವತಿ ಮೇಲೆ ಸೆ.14 ರಂದು ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆ.29 ರಂದು ಯುವತಿ ಸಾವನ್ನಪ್ಪಿದರು, ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಪೊಲೀಸರು ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಬಲವಂತವಾಗಿ ಶವಸಂಸ್ಕಾರ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ. ಕುಟುಂಬದ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದಾರೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ, ಮೇಲ್ಜಾತಿಗೆ ಸೇರಿದ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಠಾಕೂರ್ ಸಮುದಾಯದವರಿಗೆ ಜಾತಿ ಸಭೆಗಳನ್ನು ನಡೆಸಲು ಅವಕಾಶ ನೀಡಿದೆ. ಸಂತ್ರಸ್ತೆಯ ಕುಟುಂಬಕ್ಕೆ ರಕ್ಷಣೆ ನೀಡದೇ, ಬಹಿರಂಗವಾಗಿ ಸವಾಲು ಹಾಕಲು ಅವಕಾಶ ನೀಡುತ್ತಿದೆ‘ ಎಂದು ಸಂಘಟನೆಗಳು ಆರೋಪಿಸಿವೆ.

‘ಅತ್ಯಾಚಾರ ಎಸಗಿರುವ ವಿಚಾರವನ್ನೇ ತನಿಖಾ ಸಂಸ್ಥೆ ನಿರ್ದಯವಾಗಿ ನಿರಾಕರಿಸುತ್ತಿದೆ. ಸಂತ್ರಸ್ತ ಕುಟುಂಬವನ್ನು ಬೆಂಬಲಿಸಿದ ಜನರ ವಿರುದ್ಧ ಪ್ರಕರಣಗಳು ದಾಖಲಾಗಿವೆ‘ ಎಂದು ಸಂಘಟನೆಗಳು ದೂರಿವೆ.

“ಸಿಬಿಐನ ವೆಬ್‌ಸೈಟ್ ಈ ಹಿಂದೆ ತನ್ನ ನೋಯಿಡಾ ಶಾಖೆಯಿಂದ ನೋಂದಾಯಿಸಲ್ಪಟ್ಟ ಎಫ್‌ಐಆರ್ 376, 302 ಸೆಕ್ಷನ್‌ಗಳನ್ನು ಒಳಗೊಂಡಿತ್ತು ಆದರೆ ಈಗ ಇದನ್ನು ಈ ವೆಬ್‌ಸೈಟ್‌ನಿಂದ ತೆಗೆದುಹಾಕಲಾಗಿದೆ. ಈಗ ಸಿಬಿಐ, ಹತ್ರಾಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಆಧಾರದಲ್ಲಿ ತನಿಖೆ ನಡೆಸಲಿದೆ ಎಂದು ಹೇಳಿದೆ. ಈ ಎಫ್‌ಐಆರ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಗಳು ಉಲ್ಲೇಖಿಸಲಾಗಿಲ್ಲ.

“ಇದು ತನಿಖೆಯನ್ನು ಆರಂಭದ ಮೊದಲೇ ದುರ್ಬಲಗೊಳಿಸುವ ಸ್ಪಷ್ಟ ಪ್ರಯತ್ನವಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಸಂಘಟನೆಗಳು ಅಕ್ಟೋಬರ್ 29 ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲಿವೆ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಪ್ರಕರಣವನ್ನು ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ತನಿಖೆ ನಡೆಸಬೇಕು ಎಂದು ಗುಂಪುಗಳು ಒತ್ತಾಯಿಸಿವೆ.


ಇದನ್ನೂ ಓದಿ: ಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...