Homeಚಳವಳಿಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೇಶದ ಅರ್ಧದಷ್ಟಿರುವ ಮಹಿಳೆಯರಲ್ಲಿ/ಮಹಿಳಾ ಮತದಾರರಲ್ಲಿ ಈ ಚುನಾವಣೆಯಲ್ಲಿ ಅವರಿಗೆ ಸಿಕ್ಕಿದ್ದೆಷ್ಟು? ಈ ಪ್ರಶ್ನೆಗೆ ಉತ್ತರ ಹುಡುಕಿದರೆ ತೀವ್ರ ನಿರಾಶೆ ಆವರಿಸುತ್ತದೆ. ಆದರೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಒಡಿಸ್ಸಾದಲ್ಲಿ ನವೀನ್ ಪಟ್ನಾಯಕ್‍ರವರ ಮಾದರಿ ಮೆಚ್ಚುವಂತಾದ್ದಾಗಿದೆ.

ಮೊದಲಿಗೆ ಒಡಿಸ್ಸಾದ ಮುಖ್ಯಮಂತ್ರಿ ನವೀನ ಪಟ್ನಾಯಕ್‍ರವರು 33% ಟಿಕೆಟ್‍ಗಳನ್ನು ಮಹಿಳೆಯರಿಗೆ ಮೀಸಲಿಡುವುದಾಗಿ ಘೋಷಿಸಿದರು. ಅಂತೆಯೇ ಅಲ್ಲಿನ 21 ಲೋಕಸಭಾ ಕ್ಷೇತ್ರಗಳಲ್ಲಿ 7 ಸ್ಥಾನಗಳನ್ನು ಮಹಿಳೆಯರಿಗೆ ಟಿಕೆಟ್ ನೀಡಿದರು. 7ರಲ್ಲಿ 5 ಜನ ಮಹಿಳೆಯರು ವಿಜಯ ಸಾಧಿಸುವ ಮೂಲಕ ಭರವಸೆ ಮೂಡಿಸಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು 41% ಟಿಕೆಟ್‍ಗಳನ್ನು ಮಹಿಳೆಯರಿಗೆ ನೀಡುವ ಮೂಲಕ ಪುರುಷರ ಹುಬ್ಬೇರುವಂತೆ ಮಾಡಿದ್ದರು. ಅಂದರೆ ಬಂಗಾಳದ 42 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಮಹಿಳೆಯರಿಗೆ ನೀಡಿ ಚುನಾವಣೆ ಎದುರಿಸಿದರು. 17ರಲ್ಲಿ 09 ಕ್ಷೇತ್ರಗಳಲ್ಲಿ ಮಹಿಳೆರು ಜಯ ಸಾಧಿಸಿದ್ದಾರೆ.

ಒಟ್ಟು ಅಲ್ಲಿ ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ. ಮಹಿಳೆಯರಿಗೆ ಟಿಕೆಟ್ ನೀಡಿದರೆ ಗೆಲ್ಲುವುದಿಲ್ಲ ಎನ್ನುವುದನ್ನು ಈ ಮಹಿಳೆಯರು ಸುಳ್ಳು ಮಾಡಿದ್ದಾರೆ.

ಇವೆರೆಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಇದಕ್ಕಾಗಿ ನಾವು ಮುಕ್ತಕಂಠದಿಂದ ಶ್ಲಾಘಿಸಬೇಕಿದೆ. ರಾಷ್ಟ್ರೀಯ ಪಕ್ಷಗಳ ಮಾಡಲಾಗದ ಈ ಅಭೂತಪೂರ್ವ ಸಾಧನೆಯನ್ನು ಸ್ಥಳೀಯ ನಾಯಕರು ಮಾಡಿ ತೋರಿಸಿದ್ದಾರೆ. ಇವರ ನಡೆ ಮಾದರಿಯಾಗಿದ್ದು ಉಳಿದ ರಾಜ್ಯಗಳು ಇವರನ್ನು ಅನುಸರಿಸಬೇಕಿದೆ.

ಇನ್ನುಳಿದಂತೆ ಈ ಲೋಕಸಭಾ ಚುನಾವನೆಯಲ್ಲಿ ಒಟ್ಟು 8049 ಅಭ್ಯರ್ಥಿಗಳಲ್ಲಿ ಮಹಿಳಾ ಅಭ್ಯರ್ಥಿಗಳಿದ್ದುದು ಕೇವಲ 750 ಮಾತ್ರ. ಅಂದರೆ 9.21% ಮಾತ್ರ. ಇನ್ನು 750ರಲ್ಲಿ ಗೆದ್ದವರ ಸಂಖ್ಯೆ 72 ಮಾತ್ರ. ಅಂದರೆ 9.6% ಮಾತ್ರ. ಇನ್ನು 542 ಕ್ಷೇತ್ರಗಳಲ್ಲಿ 72 ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಅಂದರೆ 13.28% ಮಹಿಳೆಯರು ಸಂಸತ್ ಪ್ರವೇಶಿಸಿದ್ದಾರೆ ಅಷ್ಟೇ.

50% ಅಥವಾ ಕನಿಷ್ಠ 33% ಮಹಿಳಾ ಮೀಸಲಾತಿ ಯಾಕೆ ಜಾರಿಗೆ ಬರಬೇಕು ಎಂಬುದನ್ನು ಈ ಮೇಲಿನ ಅಂಶಗಳು ತಿಳಿಸುತ್ತವೆ. ಇದಕ್ಕಾಗಿ ಈ ಹೋರಾಟವನ್ನು ತೀವ್ರಗೊಳಿಸಬೇಕಿದೆ. ಇದೇ ಸಂದರ್ಭದಲ್ಲಿ ತಾವು ಅಧಿಕಾರಕ್ಕೆ ಬಂದರೆ ರಾಜಕೀಯ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದ್ದನ್ನು ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...