Homeಚಳವಳಿಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೇಶದ ಅರ್ಧದಷ್ಟಿರುವ ಮಹಿಳೆಯರಲ್ಲಿ/ಮಹಿಳಾ ಮತದಾರರಲ್ಲಿ ಈ ಚುನಾವಣೆಯಲ್ಲಿ ಅವರಿಗೆ ಸಿಕ್ಕಿದ್ದೆಷ್ಟು? ಈ ಪ್ರಶ್ನೆಗೆ ಉತ್ತರ ಹುಡುಕಿದರೆ ತೀವ್ರ ನಿರಾಶೆ ಆವರಿಸುತ್ತದೆ. ಆದರೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಒಡಿಸ್ಸಾದಲ್ಲಿ ನವೀನ್ ಪಟ್ನಾಯಕ್‍ರವರ ಮಾದರಿ ಮೆಚ್ಚುವಂತಾದ್ದಾಗಿದೆ.

ಮೊದಲಿಗೆ ಒಡಿಸ್ಸಾದ ಮುಖ್ಯಮಂತ್ರಿ ನವೀನ ಪಟ್ನಾಯಕ್‍ರವರು 33% ಟಿಕೆಟ್‍ಗಳನ್ನು ಮಹಿಳೆಯರಿಗೆ ಮೀಸಲಿಡುವುದಾಗಿ ಘೋಷಿಸಿದರು. ಅಂತೆಯೇ ಅಲ್ಲಿನ 21 ಲೋಕಸಭಾ ಕ್ಷೇತ್ರಗಳಲ್ಲಿ 7 ಸ್ಥಾನಗಳನ್ನು ಮಹಿಳೆಯರಿಗೆ ಟಿಕೆಟ್ ನೀಡಿದರು. 7ರಲ್ಲಿ 5 ಜನ ಮಹಿಳೆಯರು ವಿಜಯ ಸಾಧಿಸುವ ಮೂಲಕ ಭರವಸೆ ಮೂಡಿಸಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು 41% ಟಿಕೆಟ್‍ಗಳನ್ನು ಮಹಿಳೆಯರಿಗೆ ನೀಡುವ ಮೂಲಕ ಪುರುಷರ ಹುಬ್ಬೇರುವಂತೆ ಮಾಡಿದ್ದರು. ಅಂದರೆ ಬಂಗಾಳದ 42 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಮಹಿಳೆಯರಿಗೆ ನೀಡಿ ಚುನಾವಣೆ ಎದುರಿಸಿದರು. 17ರಲ್ಲಿ 09 ಕ್ಷೇತ್ರಗಳಲ್ಲಿ ಮಹಿಳೆರು ಜಯ ಸಾಧಿಸಿದ್ದಾರೆ.

ಒಟ್ಟು ಅಲ್ಲಿ ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ. ಮಹಿಳೆಯರಿಗೆ ಟಿಕೆಟ್ ನೀಡಿದರೆ ಗೆಲ್ಲುವುದಿಲ್ಲ ಎನ್ನುವುದನ್ನು ಈ ಮಹಿಳೆಯರು ಸುಳ್ಳು ಮಾಡಿದ್ದಾರೆ.

ಇವೆರೆಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಇದಕ್ಕಾಗಿ ನಾವು ಮುಕ್ತಕಂಠದಿಂದ ಶ್ಲಾಘಿಸಬೇಕಿದೆ. ರಾಷ್ಟ್ರೀಯ ಪಕ್ಷಗಳ ಮಾಡಲಾಗದ ಈ ಅಭೂತಪೂರ್ವ ಸಾಧನೆಯನ್ನು ಸ್ಥಳೀಯ ನಾಯಕರು ಮಾಡಿ ತೋರಿಸಿದ್ದಾರೆ. ಇವರ ನಡೆ ಮಾದರಿಯಾಗಿದ್ದು ಉಳಿದ ರಾಜ್ಯಗಳು ಇವರನ್ನು ಅನುಸರಿಸಬೇಕಿದೆ.

ಇನ್ನುಳಿದಂತೆ ಈ ಲೋಕಸಭಾ ಚುನಾವನೆಯಲ್ಲಿ ಒಟ್ಟು 8049 ಅಭ್ಯರ್ಥಿಗಳಲ್ಲಿ ಮಹಿಳಾ ಅಭ್ಯರ್ಥಿಗಳಿದ್ದುದು ಕೇವಲ 750 ಮಾತ್ರ. ಅಂದರೆ 9.21% ಮಾತ್ರ. ಇನ್ನು 750ರಲ್ಲಿ ಗೆದ್ದವರ ಸಂಖ್ಯೆ 72 ಮಾತ್ರ. ಅಂದರೆ 9.6% ಮಾತ್ರ. ಇನ್ನು 542 ಕ್ಷೇತ್ರಗಳಲ್ಲಿ 72 ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಅಂದರೆ 13.28% ಮಹಿಳೆಯರು ಸಂಸತ್ ಪ್ರವೇಶಿಸಿದ್ದಾರೆ ಅಷ್ಟೇ.

50% ಅಥವಾ ಕನಿಷ್ಠ 33% ಮಹಿಳಾ ಮೀಸಲಾತಿ ಯಾಕೆ ಜಾರಿಗೆ ಬರಬೇಕು ಎಂಬುದನ್ನು ಈ ಮೇಲಿನ ಅಂಶಗಳು ತಿಳಿಸುತ್ತವೆ. ಇದಕ್ಕಾಗಿ ಈ ಹೋರಾಟವನ್ನು ತೀವ್ರಗೊಳಿಸಬೇಕಿದೆ. ಇದೇ ಸಂದರ್ಭದಲ್ಲಿ ತಾವು ಅಧಿಕಾರಕ್ಕೆ ಬಂದರೆ ರಾಜಕೀಯ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದ್ದನ್ನು ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...